ನಟ ಚೇತನ್ ಅಹಿಂಸಾ  
ರಾಜ್ಯ

ಡಾ.ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದಕ್ಕೆ ಆಕ್ಷೇಪ: ಚೇತನ್ ಅಹಿಂಸಾ ವಿರುದ್ಧ ದೂರು; ನಟ ಹೇಳಿದ್ದೇನು?

ಡಾ. ರಾಜ್‌ಕುಮಾರ್ ಅವರ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿನಾ? 21ನೇ ಶತಮಾನದಲ್ಲಿ ಪ್ರಮುಖ ಹೋರಾಟವೇ ಭೂಮಿಯಾಗಿದೆ.

ಬೆಂಗಳೂರು: ವರನಟ ಡಾಕ್ಟರ್ ರಾಜ್‌ಕುಮಾರ್ ಸಮಾಧಿ ಸ್ಥಳದ ಬಗ್ಗೆ ಸರ್ಕಾರ ಮೀಸಲಿಟ್ಟಿದ್ದ 2 ಎಕರೆ ಪ್ರದೇಶದ ಬಗ್ಗೆ ಪ್ರಶ್ನೆ ಎತ್ತಿದ್ದ ನಟ ಚೇತನ್ ಅಹಿಂಸಾ ವಿರುದ್ಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ‌. ಡಾಕ್ಟರ್ ರಾಜ್‌ಕುಮಾರ್ ಸೇನೆ ದೂರು ನೀಡಿದೆ.

ಡಾ. ರಾಜ್‌ಕುಮಾರ್ ಹುಟ್ಟಿದ ದಿನದಂದು ಅವರ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿನಾ? 21ನೇ ಶತಮಾನದಲ್ಲಿ ಪ್ರಮುಖ ಹೋರಾಟವೇ ಭೂಮಿಯಾಗಿದೆ. ಸರ್ಕಾರವೂ ಅದನ್ನ ಗಮನದಲ್ಲಿಟ್ಟುಕೊಂಡು ಸಾರ್ವಜನಿಕರ ಉಪಯೋಗಕ್ಕೆ ಹಂಚಬೇಕು. ಮತಗಳ ಲಾಭದ ಉದ್ದೇಶದಿಂದ ಹಂಚಬಾರದು ಎಂದು ಸೋಶಿಯಲ್ ಮೀಡಿಯಾದಲ್ಲಿ ನಟ ಚೇತನ್ ಅಹಿಂಸಾ ಪೋಸ್ಟ್ ಮಾಡಿದ್ದರು

ನಟ ಚೇತನ್ ನಡೆಯ ವಿರುದ್ಧ ಕೇರಳದ ರಾಜ್‌ಕುಮಾರ್ ಅಭಿಮಾನಿಗಳು ರಾಜಕುಮಾರ್ ಸೇನೆಯಿಂದ ಬಸವೇಶ್ವರನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಟ ಚೇತನ್ ಅಹಿಂಸಾ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ದೂರು ನೀಡಿದ್ದಾರೆ. ರಾಜ್‌ಕುಮಾರ್ ಅಭಿಮಾನಿಗಳಿಗೆ ಅವಮಾನ ಮಾಡಿದ್ದಾರೆ. ನಮಗೆ ನೋವಾಗಿದ್ದು, ನಟನಿಂದ ಸಾರ್ವಜನಿಕವಾಗಿ ಕ್ಷಮೆ ಕೇಳಿಸುವಂತೆ ಆಗ್ರಹಿಸಿದ್ದಾರೆ‌.

'ಕರ್ನಾಟಕಕ್ಕೆ ಅವರೊಬ್ಬರೇ ಕೊಡುಗೆ ಕೊಟ್ಟಿದ್ದಲ್ಲ'

ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಚೇತನ್, ನಾನು ಆಕ್ಷೇಪ ಎತ್ತಿದ್ದು ರಾಜ್ ಕುಮಾರ್ ಅವರಿಗೆ ಸಂಬಂಧಿಸಿದ್ದಲ್ಲ. ನಾನು ಅಮೇರಿಕಾದಲ್ಲಿ ಇದ್ದಾಗಲೂ ಅವರ ಸಿನೆಮಾ ನೋಡಿದ್ದೇನೆ. ಚಿತ್ರರಂಗಕ್ಕೆ ಅವರು ಕೊಟ್ಟ ಕೊಡುಗೆ, ಚಿತ್ರಗಳನ್ನ ನಾನು ನೋಡಿದ್ದೇನೆ, ಆದರೆ ಅವರು ಕಾಲಾನಂತರ ಅವರ ಹೆಸರಲ್ಲಿ ಸರ್ಕಾರ ಲ್ಯಾಂಡ್ ಕೊಟ್ಟ ಬಗ್ಗೆ. ಮತಗಳು ಪಡೆಯುವ ಬಗ್ಗೆ ಸರ್ಕಾರ ಲ್ಯಾಂಡ್ ಕೊಟ್ಟಿದೆ. ಅದರ ಬಗ್ಗೆ ನನ್ನ ಪ್ರಶ್ನೆಯಷ್ಟೆ. ಚಿತ್ರರಂಗದಲ್ಲಿ ಸಾಕಷ್ಟು ಮಂದಿ ಕೊಡುಗೆ ಕೊಟ್ಟಿದ್ದಾರೆ ಎಂದಿದ್ದಾರೆ.

ಗಾಜನೂರಿನಲ್ಲಿ ಮಾಡ್ಬಹುದಿತ್ತು

ಪುಟ್ಟಣ್ಣ ಕಣಗಾಲ್, ನಂಜುಂಡಸ್ವಾಮಿ, ಸರೋಜದೇವಿ, ವಿಷ್ಣುವರ್ಧನ್, ನಿರ್ಮಾಪಕರು, ಸಾಕಷ್ಟು ಮಂದಿ ಇದ್ದಾರೆ. ಅವರಿಗೆ ಯಾರಿಗೂ ಜಾಗ ಕೊಟ್ಟಿಲ್ಲ. ಕುವೆಂಪು ಅವರದು ಕುಪ್ಪಳ್ಳಿಯಲ್ಲಿ ಮಾಡಲಾಗಿದೆ. ಇವರದು ಗಾಜನೂರಿನಲ್ಲಿ ಮಾಡಬಹುದಿತ್ತು ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿರೋಧ ಪಕ್ಷದ ಗದ್ದಲದ ನಡುವೆ ಸಂಸತ್ತಿನಲ್ಲಿ ಮೋದಿ ಸರ್ಕಾರದಿಂದ ಡೀಲಿಮಿಟೇಷನ್ ಮಸೂದೆಗೆ ಮರು ಜೀವ?

ರಾಜ್ಯಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‌ಗೆ ದೊಡ್ಡ ಹೊಡೆತ: ಮೀನಾಕ್ಷಿ ನಟರಾಜನ್ ನಾಮಪತ್ರ ರದ್ದು!

'ಟ್ರಬಲ್ ಶೂಟರ್‌' ಡಿಕೆಶಿ​ಗೆ ಖಾತೆ ಹಂಚಿಕೆ ಟ್ರಬಲ್: ಹೈಕಮಾಂಡ್‌ ಭೇಟಿಗಾಗಿ ದೆಹಲಿಗೆ ಹಾರಿದ ಸಚಿವ ಕೃಷ್ಣ ಬೈರೇಗೌಡ

'ಅಟ್ರಾಕ್ಟಿವ್ ಹುಡುಗಿಯರ ಕಡೆಗೆ ಆಕರ್ಷಿತನಾಗಿದ್ದೇನೆ, ಆದ್ರೂ...' : ಸುದೀರ್ಘ ದಾಂಪತ್ಯದ ರಹಸ್ಯ ಬಿಚ್ಚಿಟ್ಟ ಆರ್. ಮಾಧವನ್

ಡಾಲರ್ ಎದುರು ಮಕಾಡೆ ಮಲಗಿದ ರೂಪಾಯಿ: ನಮ್ಮ ಮೆಟ್ರೋಗೆ ಭಾರೀ ನಷ್ಟ; ಸಾಲ ಮರುಪಾವತಿ ಹೊರೆ ಹೆಚ್ಚಳ!

SCROLL FOR NEXT