ಎ. ರೋಹಿಣಿ 
ರಾಜ್ಯ

ಮಡಿಕೇರಿ: ತಲೆಗೆ ಗುಂಡು ಹಾರಿಸಿಕೊಂಡು ಸರ್ಕಾರಿ ಶಾಲಾ ಶಿಕ್ಷಕಿ ಆತ್ಮಹತ್ಯೆ!

ಸಾವಿಗೆ ಶರಣಾದ ಶಿಕ್ಷಕಿಯನ್ನು ಚೇರಂಬಾಣೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಎ. ರೋಹಿಣಿ(51) ಎಂದು ಗುರುತಿಸಲಾಗಿದೆ.

ಮಡಿಕೇರಿ: ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ತಮ್ಮ ಪ್ರೀತಿಯ ವಿದ್ಯಾರ್ಥಿಗಳಿಗೆ ಅಂತಿಮ ವಿದಾಯ ಹೇಳಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ.

ಸಾವಿಗೆ ಶರಣಾದ ಶಿಕ್ಷಕಿಯನ್ನು ಚೇರಂಬಾಣೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಎ. ರೋಹಿಣಿ(51) ಎಂದು ಗುರುತಿಸಲಾಗಿದೆ.

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ರೋಹಿಣಿ ಅವರು ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ತಮ್ಮ ಮನೆಯಲ್ಲಿದ್ದ ಕೋವಿಯಿಂದಲೇ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೊಡಗು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅವರು ಸೋಲುತ್ತಲೇ ಇದ್ದಾರೆ': ಕೇಸ್ ಹಾಕುವುದಾಗಿ ಮಮತಾ ಬ್ಯಾನರ್ಜಿ ಬೆದರಿಕೆ; ಅಮಿತ್ ಶಾ ತಿರುಗೇಟು

IPL 2026: ಚೆನ್ನೈಗೆ ಮತ್ತೊಂದು ಸೋಲು, 8 ವಿಕೆಟ್ ಗಳಿಂದ GT ಗೆ ಸುಲಭ ಜಯ!

IPL 2026: ನಿನ್ನೆ ಎನ್ಗಿಡಿ, ಇಂದು Akeal Hosein; GT ವಿರುದ್ಧದ ಪಂದ್ಯದಲ್ಲಿ CSK ಸ್ಟಾರ್ ಗೆ ಗಂಭೀರ ಪೆಟ್ಟು!

ಹಾವೇರಿಯಲ್ಲೂ ಲವ್​ ಜಿಹಾದ್​ ಸದ್ದು: ಬೆಳಗ್ಗೆ ಎಂಗೇಜ್​​ಮೆಂಟ್, ರಾತ್ರಿಯೇ ಇಬ್ರಾಹಿಂ ಜತೆ ಯುವತಿ ಎಸ್ಕೇಪ್​!

ಸುಧಾಕರ್‌ ಸ್ಥಿತಿ ಗಂಭೀರ; ಕೆಲ‌ವರು ಇಂತಹ ಸಂದರ್ಭ ದುರ್ಬಳಕೆ ಮಾಡಿಕೊಳ್ಳುವುದರಲ್ಲಿ ಎಕ್ಸ್‌ಪರ್ಟ್‌: ಎಚ್‌ಡಿಕೆ ಹೀಗೆ ಹೇಳಿದ್ದು ಯಾರಿಗೆ?

SCROLL FOR NEXT