ದಾವಣಗೆರೆ: ಹರಿಹರ ವೀರಶೈವ ಪಂಚಮಸಾಲಿ ಗುರುಪೀಠದ ಸಂಘರ್ಷ ಮುಂದುವರೆದಿದ್ದು, ಪಂಚಮಸಾಲಿ ಗುರುಪೀಠದ ಮೂವರು ಟ್ರಸ್ಟಿಗಳಾದ ಬಿ.ಸಿ. ಉಮಾಪತಿ, ಚಂದ್ರಶೇಖರ್ ಪೂಜಾರ್ ಮತ್ತು ಜ್ಯೋತಿ ಪ್ರಕಾಶ್ ಅವರನ್ನು ಉಚ್ಚಾಟನೆ ಮಾಡಲಾಗಿದೆ ಎಂದು ಪಂಚಮಸಾಲಿ ರಾಜ್ಯ ಸಂಘದ ಅಧ್ಯಕ್ಷ ಸೋಮನಗೌಡ ಮಾಲಿ ಪಾಟೀಲ್ ತಿಳಿಸಿದ್ದಾರೆ.
ಸಾರ್ವಜನಿಕ ಮತ್ತು ಸಂಘದ ವತಿಯಿಂದ ನಿರಂತರವಾಗಿ ಲೆಕ್ಕಪತ್ರದ ವರದಿ ನೀಡುವಂತೆ ಕೇಳುತ್ತಿದ್ದರೂ ಅವರಿಂದ ಯಾವುದೇ ಸ್ಪಂದನೆ ಬಾರದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ಅದರಂತೆ ಈ ಮೂವರು ಟ್ರಸ್ಟಿಗಳಿಗೆ ಏಪ್ರಿಲ್ 13ರಿಂದ ಯಾವುದೇ ಹಣಕಾಸು ವ್ಯವಹಾರ ಅಥವಾ ನಿರ್ಧಾರ ಕೈಗೊಳ್ಳುವ ಅಧಿಕಾರ ಇರುವುದಿಲ್ಲ ಎಂದು ಹೇಳಿದರು.