ಸಂಗ್ರಹ ಚಿತ್ರ 
ರಾಜ್ಯ

ಶೃಂಗೇರಿ ವಿಧಾನಸಭಾ ಚುನಾವಣೆ: ಮೇ 2ಕ್ಕೆ ಅಂಚೆ ಮತಗಳ ಮರುಎಣಿಕೆ; ಫಲಿತಾಂಶದತ್ತ ಎಲ್ಲರ ಚಿತ್ತ

ಕಾಲೇಜು ಆವರಣದಲ್ಲಿ ಮರು ಎಣಿಕೆ ಪ್ರಕ್ರಿಯೆಗೆ ಜಿಲ್ಲಾಡಳಿತ ಸಮಗ್ರ ವ್ಯವಸ್ಥೆ ಮಾಡಿದ್ದು, ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾಗಲಿದೆ.

ಚಿಕ್ಕಬಳ್ಳಾಪುರ: ಹೈಕೋರ್ಟ್ ನಿರ್ದೇಶನ ಹಿನ್ನೆಲೆಯಲ್ಲಿ ಶೃಂಗೇರಿ ವಿಧಾನಸಭಾ ಚುನಾವಣೆಯ ಅಂಚೆ ಮತಗಳ ಮರು ಎಣಿಕೆ ಕಾರ್ಯ ಮೇ 2 ರಂದು ಐಡಿಎಸ್‌ಜಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ.

ಕಾಲೇಜು ಆವರಣದಲ್ಲಿ ಮರು ಎಣಿಕೆ ಪ್ರಕ್ರಿಯೆಗೆ ಜಿಲ್ಲಾಡಳಿತ ಸಮಗ್ರ ವ್ಯವಸ್ಥೆ ಮಾಡಿದ್ದು, ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾಗಲಿದೆ. ಹೆಚ್ಚುವರಿ ಜಿಲ್ಲಾಧಿಕಾರಿ ಗೌರವ್ ಶೆಟ್ಟಿ ಅವರನ್ನು ಚುನಾವಣಾಧಿಕಾರಿಯಾಗಿ ನೇಮಿಸಲಾಗಿದ್ದು, ನಾಲ್ವರು ಸಹಾಯಕ ಚುನಾವಣಾಧಿಕಾರಿಗಳು ಸಹ ಕಾರ್ಯನಿರ್ವಹಿಸಲಿದ್ದಾರೆ. ಮರುಎಣಿಕೆ ನಡೆಯುವ ಕೊಠಡಿಯಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಪಾರದರ್ಶಕತೆಯನ್ನು ಖಚಿತಪಡಿಸಲು ಕ್ರಮ ಕೈಗೊಳ್ಳಲಾಗಿದೆ.

ಈ ಪ್ರಕ್ರಿಯೆ ವೇಳೆ ಕಾಂಗ್ರೆಸ್ ಶಾಸಕ ಟಿಡಿ ರಾಜೇ ಗೌಡ, ಹಾಗೂ ಬಿಜೆಪಿ ಪರಾಜಿತ ಅಭ್ಯರ್ಥಿ ಡಿಎನ್ ಜೀವರಾಜ್ ಸೇರಿದಂತೆ ಮತ ಎಣಿಕೆ ಪ್ರತಿನಿಧಿಗಳು ಹಾಜರಾಗುವ ಸಾಧ್ಯತೆ ಇದೆ.

ಮರು ಎಣಿಕೆಗೆ ತಡೆ ಕೋರುವ ಗಡುವು ಏಪ್ರಿಲ್ 20 ರಂದು ಮುಗಿದಿದ್ದರಿಂದ, ಮೇ 2 ರಂದು ಮರು ಎಣಿಕೆ ನಡೆಸಲು ಹೈಕೋರ್ಟ್ ಆದೇಶಿಸಿದೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಟಿಡಿ ರಾಜೇ ಗೌಡ ಅವರು ಕೇವಲ 201 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಒಟ್ಟು 2,811 ಪೋಸ್ಟಲ್ ಮತಗಳಲ್ಲಿ 279 ಮತಗಳು ಅಮಾನ್ಯಗೊಂಡಿದ್ದವು. ಈ ಫಲಿತಾಂಶದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದ ಡಿಎನ್ ಜೀವರಾಜ್ ಅವರು ಮರುಎಣಿಕೆಗೆ ಮನವಿ ಸಲ್ಲಿಸಿದ್ದರು. ಆದರೆ ಜಿಲ್ಲಾ ಚುನಾವಣಾಧಿಕಾರಿ ಅದನ್ನು ಪರಿಗಣಿಸದೆ ಫಲಿತಾಂಶವನ್ನು ಘೋಷಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: 7ರಲ್ಲಿ 5 ಸ್ಥಾನ ಕಾಂಗ್ರೆಸ್ ಪಾಲು, ಬಿಜೆಪಿಗೆ 2, ಜೆಡಿಎಸ್‌ಗೆ ಅಡ್ಡ ಮತದಾನದ ಆಘಾತ

BJP-JDS ಅಡ್ಡ ಮತದಾನದಿಂದ Congress 5ನೇ ಅಭ್ಯರ್ಥಿ ಜಯ; ಇದು ಪ್ರಜಾಪ್ರಭುತ್ವದ ಗೆಲುವು: ಸುರ್ಜೇವಾಲಾ

Bihar Horror: ಯಜಮಾನನ ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ, ಗುಪ್ತಾಂಗದಲ್ಲಿ ಜೀವಂತ ಬುಲೆಟ್, ಕಲ್ಲು, ಮರದ ತುಂಡು ಪತ್ತೆ!

ಮರೆಯಾಯ್ತಾ ಮುಂಗಾರು?: ಜೂನ್ 4ರಿಂದ 18ರವರೆಗೆ ಭಾರತದಲ್ಲಿ ಶೇ.41 ಮಳೆ ಕೊರತೆ!

'ನಮ್ಮದು ಅಂಬೇಡ್ಕರ್ ರಕ್ತ; ಭಯಪಡುವ ಜಾಯಮಾನ ನನ್ನದಲ್ಲ, ರಮೇಶ್ ಜಿಗಜಿಣಗಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು!

SCROLL FOR NEXT