ಸಂಗ್ರಹ ಚಿತ್ರ 
ರಾಜ್ಯ

ಶೃಂಗೇರಿ ವಿಧಾನಸಭಾ ಚುನಾವಣೆ: ಮೇ.2ಕ್ಕೆ ಅಂಚೆ ಮತಗಳ ಮರುಎಣಿಕೆ, ಫಲಿತಾಂಶದತ್ತ ಎಲ್ಲರ ಚಿತ್ತ

ಕಾಲೇಜು ಆವರಣದಲ್ಲಿ ಮರು ಎಣಿಕೆ ಪ್ರಕ್ರಿಯೆಗೆ ಜಿಲ್ಲಾಡಳಿತ ಸಮಗ್ರ ವ್ಯವಸ್ಥೆ ಮಾಡಿದ್ದು, ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾಗಲಿದೆ. ಹೆಚ್ಚುವರಿ ಜಿಲ್ಲಾಧಿಕಾರಿ ಗೌರವ್ ಶೆಟ್ಟಿರನ್ನು ಚುನಾವಣಾಧಿಕಾರಿಯಾಗಿ ನೇಮಿಸಲಾಗಿದ್ದು, ನಾಲ್ವರು ಸಹಾಯಕ ಚುನಾವಣಾಧಿಕಾರಿಗಳು ಸಹ ಕಾರ್ಯನಿರ್ವಹಿಸಲಿದ್ದಾರೆ.

ಚಿಕ್ಕಬಳ್ಳಾಪುರ: ಹೈಕೋರ್ಟ್ ನಿರ್ದೇಶನ ಹಿನ್ನೆಲೆಯಲ್ಲಿ ಶೃಂಗೇರಿ ವಿಧಾನಸಭಾ ಚುನಾವಣೆಯ ಅಂಚೆ ಮತಗಳ ಮರು ಎಣಿಕೆ ಕಾರ್ಯ ಮೇ 2 ರಂದು ಐಡಿಎಸ್‌ಜಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ.

ಕಾಲೇಜು ಆವರಣದಲ್ಲಿ ಮರು ಎಣಿಕೆ ಪ್ರಕ್ರಿಯೆಗೆ ಜಿಲ್ಲಾಡಳಿತ ಸಮಗ್ರ ವ್ಯವಸ್ಥೆ ಮಾಡಿದ್ದು, ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾಗಲಿದೆ. ಹೆಚ್ಚುವರಿ ಜಿಲ್ಲಾಧಿಕಾರಿ ಗೌರವ್ ಶೆಟ್ಟಿ ಅವರನ್ನು ಚುನಾವಣಾಧಿಕಾರಿಯಾಗಿ ನೇಮಿಸಲಾಗಿದ್ದು, ನಾಲ್ವರು ಸಹಾಯಕ ಚುನಾವಣಾಧಿಕಾರಿಗಳು ಸಹ ಕಾರ್ಯನಿರ್ವಹಿಸಲಿದ್ದಾರೆ. ಮರುಎಣಿಕೆ ನಡೆಯುವ ಕೊಠಡಿಯಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಪಾರದರ್ಶಕತೆಯನ್ನು ಖಚಿತಪಡಿಸಲು ಕ್ರಮ ಕೈಗೊಳ್ಳಲಾಗಿದೆ.

ಈ ಪ್ರಕ್ರಿಯೆ ವೇಳೆ ಕಾಂಗ್ರೆಸ್ ಶಾಸಕ ಟಿಡಿ ರಾಜೇ ಗೌಡ, ಹಾಗೂ ಬಿಜೆಪಿ ಪರಾಜಿತ ಅಭ್ಯರ್ಥಿ ಡಿಎನ್ ಜೀವರಾಜ್ ಸೇರಿದಂತೆ ಮತ ಎಣಿಕೆ ಪ್ರತಿನಿಧಿಗಳು ಹಾಜರಾಗುವ ಸಾಧ್ಯತೆ ಇದೆ.

ಮರು ಎಣಿಕೆಗೆ ತಡೆ ಕೋರುವ ಗಡುವು ಏಪ್ರಿಲ್ 20 ರಂದು ಮುಗಿದಿದ್ದರಿಂದ, ಮೇ 2 ರಂದು ಮರು ಎಣಿಕೆ ನಡೆಸಲು ಹೈಕೋರ್ಟ್ ಆದೇಶಿಸಿದೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಟಿಡಿ ರಾಜೇ ಗೌಡ ಅವರು ಕೇವಲ 201 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಒಟ್ಟು 2,811 ಪೋಸ್ಟಲ್ ಮತಗಳಲ್ಲಿ 279 ಮತಗಳು ಅಮಾನ್ಯಗೊಂಡಿದ್ದವು. ಈ ಫಲಿತಾಂಶದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದ ಡಿಎನ್ ಜೀವರಾಜ್ ಅವರು ಮರುಎಣಿಕೆಗೆ ಮನವಿ ಸಲ್ಲಿಸಿದ್ದರು. ಆದರೆ ಜಿಲ್ಲಾ ಚುನಾವಣಾಧಿಕಾರಿ ಅದನ್ನು ಪರಿಗಣಿಸದೆ ಫಲಿತಾಂಶವನ್ನು ಘೋಷಿಸಿದ್ದರು.

ಅಮೆರಿಕ ಶ್ವೇತಭವನದಲ್ಲಿ ಔತಣಕೂಟ ವೇಳೆ ಶೂಟೌಟ್ ಸದ್ದು: ಭಾಷಣ ನಿಲ್ಲಿಸಿ ಬಂಕರ್‌ನತ್ತ ಓಡಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ-Video

ಬೆಂಗಳೂರಿನ ವಾಹನ ಸವಾರರೇ ಗಮನಿಸಿ: 10K ಮ್ಯಾರಥಾನ್, ಈ ಪ್ರಮುಖ ರಸ್ತೆಗಳಲ್ಲಿ ಬೆಳಗ್ಗೆ 11 ಗಂಟೆಯವರೆಗೆ ಸಂಚಾರ ಬಂದ್-Video

ಸಿಎಂ ಕುರ್ಚಿಗೆ ಬಿಗಿ ಪಟ್ಟು: ದೆಹಲಿಯಲ್ಲಿ ಬೀಡುಬಿಟ್ಟ ಡಿಕೆ ಬ್ರದರ್ಸ್, ನಾಯಕತ್ವ ಗೊಂದಲ ತಾರಕಕ್ಕೆ..!

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಸೀಕ್ರೆಟ್ ಸರ್ವಿಸ್ ಅದ್ಭುತವಾಗಿ ಕೆಲಸ ಮಾಡಿದೆ, ದಾಳಿಕೋರನ ಬಂಧಿಸಲಾಗಿದೆ: ಟ್ರಂಪ್‌

ಬೆಂಗಳೂರಲ್ಲಿ ರಣ ಬಿಸಿಲು: ಡಿಹೈಡ್ರೇಷನ್-ಹೀಟ್ ಸ್ಟ್ರೋಕ್ ಭೀತಿ, ಮಕ್ಕಳು-ವೃದ್ಧರು ಹೆಚ್ಚು ಅಪಾಯದಲ್ಲಿ..!

SCROLL FOR NEXT