ವಚನಾನಂದ ಶ್ರೀಗಳು 
ರಾಜ್ಯ

ಲೆಕ್ಕ ಕೊಡ್ತೀವಿ.. ಕೂಡಲೇ ಮಠ ಖಾಲಿ ಮಾಡಿ: ವಚನಾನಂದ ಶ್ರೀಗಳಿಗೆ ಟ್ರಸ್ಟ್ ತಾಕೀತು

ಲೆಕ್ಕ ಪಡೆದು ಮಠ ಖಾಲಿ‌ ಮಾಡುವಂತೆ ಸ್ವಾಮೀಜಿಗೆ ಟ್ರಸ್ಟಿನವರು ತಾಕೀತು ಮಾಡಿದ್ದಾರೆ. ಆ ಮೂಲಕ ಹರಿಹರದ ಪಂಚಮಸಾಲಿ ಮಠದ ಆಡಳಿತ ಮಂಡಳಿ (ಟ್ರಸ್ಟ್) ಹಾಗೂ ವಚನಾನಂದ ಸ್ವಾಮೀಜಿ ನಡುವಿನ ಶೀತಲ ಸಮರ ಈಗ ಬಹಿರಂಗ ಸಂಘರ್ಷಕ್ಕೆ ತಿರುಗಿದೆ.

ದಾವಣಗೆರೆ: ಪಂಚಮಸಾಲಿ ಟ್ರಸ್ಟ್ ಮತ್ತು ವಚನಾನಂದ ಸ್ವಾಮೀಜಿ ನಡುವಿನ ಸಂಘರ್ಷ ತೀವ್ರಗೊಂಡಿದ್ದು ಮಠ ವ್ಯವಹಾರಗಳ ಲೆಕ್ಕ ಕೊಡ್ತೀವಿ ಕೂಡಲೇ ಮಠ ಖಾಲಿ ಮಾಡಿ ಎಂದು ಟ್ರಸ್ಟಿನವರು ಶ್ರೀಗಳಿಗೆ ತಾಕೀತು ಮಾಡಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪಂಚಮಸಾಲಿ ಟ್ರಸ್ಟಿನವರು, ಏಪ್ರಿಲ್​​ 27ರಂದು ಲೆಕ್ಕಾ ಕೊಡಲು ಸಿದ್ಧರಿದ್ದೇವೆ. ಲೆಕ್ಕ ಪಡೆದು ಮಠ ಖಾಲಿ‌ ಮಾಡುವಂತೆ ಸ್ವಾಮೀಜಿಗೆ ಟ್ರಸ್ಟಿನವರು ತಾಕೀತು ಮಾಡಿದ್ದಾರೆ. ಆ ಮೂಲಕ ಹರಿಹರದ ಪಂಚಮಸಾಲಿ ಮಠದ ಆಡಳಿತ ಮಂಡಳಿ (ಟ್ರಸ್ಟ್) ಹಾಗೂ ವಚನಾನಂದ ಸ್ವಾಮೀಜಿ ನಡುವಿನ ಶೀತಲ ಸಮರ ಈಗ ಬಹಿರಂಗ ಸಂಘರ್ಷಕ್ಕೆ ತಿರುಗಿದೆ.

ಧರ್ಮದರ್ಶಿ ಸಮಿತಿಯ ಮುಖಂಡರು ಸ್ವಾಮೀಜಿಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಲೆಕ್ಕ ಕೊಡುತ್ತೇವೆ. ಲೆಕ್ಕ ಪಡೆದು ಮಠ ಖಾಲಿ‌ ಮಾಡುವಂತೆ ಸ್ವಾಮೀಜಿಗೆ ಟ್ರಸ್ಟಿ ಹೆಚ್​.ಎಸ್.ನಾಗರಾಜ್ ತಾಕೀತು ಮಾಡಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಗ್ರಾಮದ ಬಳಿಯ ಪಂಚಮಸಾಲಿ ಮಠದಲ್ಲಿ ಸುದ್ದಿಗೋಷ್ಠಿ ನಡೆಸಿದ ಪಂಚಮಸಾಲಿ ಟ್ರಸ್ಟಿ ಹೆಚ್​.ಎಸ್.ನಾಗರಾಜ್, ನಮಗೆ ಲೆಕ್ಕ ಕೊಡಿ ಎಂದು ಕೇಳಿದ್ದಾರೆ, ನಾಳೆ ‌ಲೆಕ್ಕ ಕೊಡುತ್ತೇವೆ. ಈಗಾಗಲೇ ಎಲ್ಲ ದಾಖಲೆಗಳು ನಮ್ಮ ಬಳಿ ಇವೆ. ಲೆಕ್ಕ ಪಡೆದು ಮಠ ಖಾಲಿ‌ ಮಾಡುವಂತೆ ವಚನಾನಂದ ಸ್ವಾಮೀಜಿಗೆ ತಾಕೀತು ಮಾಡಿದರು.

ಕೂಡಲಸಂಗಮ ಪೀಠ ಮುಗಿಸಿದ್ದಾಯ್ತು ಈಗ ಪಂಚಮಸಾಲಿ ಪೀಠ

ಈಗಾಗಲೇ ಕೂಡಲಸಂಗಮ ಪಂಚಮಸಾಲಿ ಪೀಠ ಮುಗಿಸಲಾಗಿದೆ. ಈಗ ಹರಿಹರ ಪೀಠಕ್ಕೆ ಬಂದಿದ್ದಾರೆ, ನಾಳೆ ಲೆಕ್ಕ ಕೊಡುತ್ತೇವೆ. ಲೆಕ್ಕ ಕೊಡುವುದಕ್ಕಾಗಿಯೇ ವೇದಿಕೆ ಸಿದ್ಧ ಮಾಡಿದ್ದೇವೆ. ಎಲ್ಲರ ಸಮ್ಮುಖದಲ್ಲಿಯೇ ಲೆಕ್ಕ ಕೊಡುತ್ತೇವೆ ಎಂದು ಹೇಳಿದ್ದಾರೆ.

ಪಂಚಮಸಾಲಿ ಮಠಕ್ಕೆ ಇನ್ನೊಬ್ಬರ ಪ್ರವೇಶ: 25 ಕೋಟಿ ರೂ ಅವ್ಯವಹಾರ

ಇನ್ನು ಇಷ್ಟು ದಿನ ಸುಮ್ಮನಿದ್ದ ಪಂಚಮಸಾಲಿ ರಾಜ್ಯ ಸಂಘದ ಅಧ್ಯಕ್ಷ ಸೋಮನಗೌಡ ಮಾಲಿ ಪಾಟೀಲ್​ ಇದೀಗ​​ ರಂಗ ಪ್ರವೇಶ ಮಾಡಿದ್ದು, ಮಠದ ವ್ಯವಹಾರದಲ್ಲಿ ಅವ್ಯವಹಾರ ನಡೆದರೆ, ಸ್ವಾಮೀಜಿ ವಿಚಾರಕ್ಕೆ ಬಂದಾಗ ಪಂಚಮಸಾಲಿ ರಾಜ್ಯ ಸಂಘ ಪ್ರವೇಶ ಮಾಡಬಹುದು ಎಂದು ನಿಯಮವಿದೆ. ಅದೇ ಅಧಿಕಾರ ಬಳಸಿಕೊಂಡು ಮೂವರನ್ನು ಉಚ್ಚಾಟನೆ ಮಾಡಿದ್ದೇವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನ್ಯಾಯ ಸಿಗುತ್ತೆ ಅನ್ನೋ ನಂಬಿಕೇನೆ ಇಲ್ಲ.. ಸತ್ಯಾಗ್ರಹ ಕೂರ್ತೀನಿ': ನ್ಯಾಯಮೂರ್ತಿಗಳ ವಿರುದ್ಧವೇ Arvind Kejriwal ರಣಕಹಳೆ!

ಯುದ್ಧ ಕೊನೆಗೊಳಿಸಿ, ಹಾರ್ಮುಜ್ ಜಲಸಂಧಿ ತೆರೆಯಲು 'ಹೊಸ ಪ್ರಸ್ತಾವನೆ' ಮುಂದಿಟ್ಟ ಇರಾನ್!

ಪಾಕಿಸ್ತಾನದೊಂದಿಗೆ ಮಾತುಕತೆ ಮುಗಿಸಿ, ರಷ್ಯಾಕ್ಕೆ ತೆರಳಿದ ಅರಾಘ್ಚಿ! ಪುಟಿನ್ ಭೇಟಿಯಾಗ್ತಾರಾ? ಹೇಳಿದ್ದೇನು?

ಜನಸಂಖ್ಯೆ ಅಸಮಾನತೆಯಿಂದ 1947ರಲ್ಲಿ ದೇಶ ವಿಭಜನೆಯಾಯಿತು: RSS ನಾಯಕ

'ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್': ಗುಂಡಿನ ದಾಳಿಗೆ 10 ನಿಮಿಷ ಮೊದಲು ಕುಟುಂಬಕ್ಕೆ ಪತ್ರ ಕಳುಹಿಸಿದ್ದ ವೈಟ್ ಹೌಸ್ ಶೂಟೌಟ್ ಆರೋಪಿ

SCROLL FOR NEXT