ವಿಧಾನಸಭೆ ಆಡಳಿತ ಪಕ್ಷದ ಮುಖ್ಯಸಚೇತಕ ಅಶೋಕ್ ಪಟ್ಟಣ್ 
ರಾಜ್ಯ

ಸಚಿವ ಸಂಪುಟ ಪುನಾರಚನೆ: ಮೇ ತಿಂಗಳಿನಲ್ಲಿ ಹೈಕಮಾಂಡ್‍ನಿಂದ ಸಿಹಿ ಸುದ್ದಿ- ಅಶೋಕ್ ಪಟ್ಟಣ್

ಈ ಸಂದೇಶವನ್ನು ಕರ್ನಾಟಕ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ ಅವರು ಹಂಚಿಕೊಂಡಿದ್ದಾರೆ ಎಂದು ಪಟ್ಟಣ್ ಅವರು ಹೇಳಿದ್ದಾರೆ.

ಬೆಳಗಾವಿ: ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತ ಚರ್ಚೆಗಳು ಗರಿಗೆದರಿದ್ದು, ಕಾಂಗ್ರೆಸ್ ಹೈಕಮಾಂಡ್‌ನಿಂದ ಶೀಘ್ರದಲ್ಲೇ ಮಹತ್ವದ ನಿರ್ಧಾರ ಹೊರ ಬರಬಹುದೆಂಬ ನಿರೀಕ್ಷೆ ಹೆಚ್ಚಾಗಿದೆ.

ಶಾಸಕರಲ್ಲಿ ಸಚಿವ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಮುಂದುವರಿದಿದ್ದು, ಸುಮಾರು 40 ಮಂದಿ ಶಾಸಕರು ಲಾಬಿ ನಡೆಸುತ್ತಿದ್ದಾರೆ.

ವಿಧಾನಸಭೆ ಆಡಳಿತ ಪಕ್ಷದ ಮುಖ್ಯಸಚೇತಕ ಅಶೋಕ್ ಪಟ್ಟಣ್ ಅವರು ಈ ಕುರಿತು ಮಾತನಾಡಿ, ಮೇ ಎರಡನೇ ವಾರದಲ್ಲಿ “ಗುಡ್ ನ್ಯೂಸ್” ಸಿಗಲಿದೆ ಎಂದು ಹೈಕಮಾಂಡ್ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.

ಈ ಸಂದೇಶವನ್ನು ಕರ್ನಾಟಕ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ ಅವರು ಹಂಚಿಕೊಂಡಿದ್ದಾರೆ ಎಂದು ಪಟ್ಟಣ್ ಅವರು ಹೇಳಿದ್ದಾರೆ. ಮೇ ಎರಡನೇ ವಾರದಲ್ಲಿ ಮಹತ್ವದ ಬೆಳವಣಿಗೆ ನಿರೀಕ್ಷಿಸಬಹುದ ಎಂದು ಹೇಳಿದ್ದಾರೆ.

ಮೇ 4ರಂದು ಐದು ರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶಗಳು ಈ ನಿರ್ಧಾರಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂಬುದನ್ನೂ ಅವರು ಉಲ್ಲೇಖಿಸಿದ್ದಾರೆ.

ಚುನಾವಣಾ ಫಲಿತಾಂಶಗಳ ನಂತರ, ಸುಮಾರು 40 ಶಾಸಕರು ಮತ್ತೊಮ್ಮೆ ಹೈಕಮಾಂಡ್ ಅನ್ನು ಭೇಟಿ ಮಾಡಲು ನವದೆಹಲಿಗೆ ಪ್ರಯಾಣಿಸುತ್ತಾರೆ" ಎಂದು ಹೇಳಿದ್ದಾರೆ.

ಇದೀಗ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರಿಗೆ “ಹುಟ್ಟುಹಬ್ಬದ ಉಡುಗೊರೆ” ಸಿಗಬಹುದೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅಂತಿಮ ನಿರ್ಧಾರ ಸಂಪೂರ್ಣವಾಗಿ ಹೈಕಮಾಂಡ್ ಕೈಯಲ್ಲಿದೆ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸಚಿವ ಡಿ.ಸುಧಾಕರ್ ಕುರಿತು ನೀಡಿದ ಹೇಳಿಕೆಗೆ ಪಟ್ಟಣ್ ಅವರು ತೀವ್ರ ವಿರೋಧ ವ್ಯಕ್ತಪಡಿಸಿದರು.

“ಒಬ್ಬರು ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂದರ್ಭದಲ್ಲಿ ಇಂತಹ ಹೇಳಿಕೆ ನೀಡುವುದು ಮಾನವೀಯತೆಯ ವಿರುದ್ಧ. ಇಂತಹ ಸಂದರ್ಭಗಳಲ್ಲಿ ಮೂಲಭೂತ ಮಾನವೀಯತೆ ಮರೆಯಬಾರದು” ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!