ಲಕ್ಷ್ಮೀಪುತ್ರ ಹಾಗೂ ಪತ್ನಿ 
ರಾಜ್ಯ

ಕಲಬುರಗಿ: ಪತ್ನಿ ಕೊಲೆ ಮಾಡಿ ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಆತ್ಮಹತ್ಯೆ; ಮಗು ರಕ್ಷಿಸಿದ ಸ್ಥಳೀಯರು!

ಪತ್ನಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಲಕ್ಷ್ಮೀಪುತ್ರ ಎಂದು ಗುರುತಿಸಲಾಗಿದ್ದು, ತನ್ನ 23 ವರ್ಷದ ಪತ್ನಿ ಅಂಜಲಿಯನ್ನು ಮನೆಯಲ್ಲೇ ಕುಡುಗೋಲಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಕಲಬುರಗಿ: ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮದರಾ(ಕೆ) ಗ್ರಾಮದ ಬಳಿ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಕೌಟುಂಬಿಕ ಕಲಹದ ಹಿನ್ನೆಯಲ್ಲಿ ವ್ಯಕ್ತಿಯೊಬ್ಬರು ತನ್ನ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿ, ನಂತರ ತನ್ನ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪತ್ನಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಲಕ್ಷ್ಮೀಪುತ್ರ ಎಂದು ಗುರುತಿಸಲಾಗಿದ್ದು, ತನ್ನ 23 ವರ್ಷದ ಪತ್ನಿ ಅಂಜಲಿಯನ್ನು ಮನೆಯಲ್ಲೇ ಕುಡುಗೋಲಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಬಳಿಕ ತನ್ನ ಪುಟ್ಟ ಮಗುವನ್ನು ಎತ್ತಿಕೊಂಡು ಮದರಾ (ಕೆ) ಗ್ರಾಮದ ಸಮೀಪದ ಬಾವಿಗೆ ಜಿಗಿದಿದ್ದಾನೆ.

ಲಕ್ಷ್ಮೀಪುತ್ರ ಮಗುವಿನೊಂದಿಗೆ ಬಾವಿಗೆ ಹಾರುತ್ತಿರುವುದನ್ನು ಗಮನಿಸಿದ ಕೆಲವು ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಸಮಯಪ್ರಜ್ಞೆ ಮೆರೆದ ಗ್ರಾಮಸ್ಥರು ಕೂಡಲೇ ಬಾವಿಗೆ ಜಿಗಿದು ಮಗುವನ್ನು ಸುರಕ್ಷಿತವಾಗಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಲಕ್ಷ್ಮೀಪುತ್ರ ಬಾವಿಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ಈ ಘಟನೆ ನಡೆದ ತಕ್ಷಣ ರೇವೂರು ಪೊಲೀಸರು ಮತ್ತು ಸೋಕೋ(SOCO) ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಂಜಲಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಬಾವಿಯಿಂದ ಲಕ್ಷ್ಮೀಪುತ್ರನ ಶವವನ್ನು ಹೊರತೆಗೆಯಲಾಗಿದೆ.

ಈ ಸಂಬಂಧ ರೇವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಮತ್ತು ಆತ್ಮಹತ್ಯೆಗೆ ನಿಖರವಾದ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ- ಸ್ವಾತಂತ್ರ್ಯ ದಿನದ ಹಿನ್ನೆಲೆ ದೇಶವನ್ನುದ್ದೇಶಿಸಿ ರಾಷ್ಟ್ರಪತಿ ಮುರ್ಮು ಮಾತು

ಬೆಂಗಳೂರು: ಟೆಕ್ಕಿ ಪತ್ನಿ ಹತ್ಯೆಗೈದು ತಾನೂ ನೇಣಿಗೆ ಶರಣಾದ ಇಂಜಿನಿಯರ್; ತಾಯಿಗೆ ಕಳಿಸಿದ್ದ ವಾಯ್ಸ್ ಮೆಸೇಜ್‌ನಲ್ಲಿ ಸ್ಫೋಟಕ ಕಾರಣ ಬಹಿರಂಗ!

ರಾಜ್ಯ ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್: ವೇತನ ಹಿಂಬಾಕಿ ಬಿಡುಗಡೆ

ಸಚಿವ ಜಮೀರ್ ಅಹ್ಮದ್ ಧ್ವಜಾರೋಹಣ ಮಾಡದಷ್ಟು ದೊಡ್ಡವರೇ? ವಿಧಾನಸಭೆಯಲ್ಲಿ ಬಿಜೆಪಿ ಪ್ರತಿಭಟನೆ! ಸಚಿವ ಸ್ಥಾನದಿಂದ ವಜಾಕ್ಕೆ ಒತ್ತಾಯ

ಸರ್ಕಾರಿ ಜಾಗದಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಕಡ್ಡಾಯ ಮಸೂದೆ: RSSಗೆ ಕಡಿವಾಣ? ಕಾಂಗ್ರೆಸ್ - ಬಿಜೆಪಿ ನಡುವೆ ವಾಕ್ಸಮರ!