ಪೊಲೀಸ್ (ಸಾಂಕೇತಿಕ ಚಿತ್ರ) online desk
ರಾಜ್ಯ

ಬೆಂಗಳೂರು: ರಸ್ತೆಬದಿ ನಿಂತು ಪುರುಷರಿಗೆ ಆಹ್ವಾನ; ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಆರು ವಿದೇಶಿ ಮಹಿಳೆಯರ ಬಂಧನ

ಪೊಲೀಸರು ಹೇಳಿಕೆಯಲ್ಲಿ ಮಹಿಳೆಯರು ಯಾವ ದೇಶಗಳಿಗೆ ಸೇರಿದವರು ಎಂಬುದನ್ನು ಬಹಿರಂಗಪಡಿಸಿಲ್ಲ.

ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಪುರುಷರನ್ನು ವೇಶ್ಯಾವಾಟಿಕೆಗೆ ಆಹ್ವಾನಿಸುವ ಮೂಲಕ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವುದು ಕಂಡುಬಂದ ನಂತರ ಆರು ವಿದೇಶಿ ಮಹಿಳೆಯರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಕೇಂದ್ರ ಅಪರಾಧ ಶಾಖೆಯ (ಸಿಸಿಬಿ) ಮಹಿಳಾ ರಕ್ಷಣಾ ವಿಭಾಗವು ಏಪ್ರಿಲ್ 24 ರಂದು ಈ ಮಹಿಳೆಯರನ್ನು ಬಂಧಿಸಿದೆ ಎಂದು ಅವರು ಹೇಳಿದರು. ಆದರೆ, ಪೊಲೀಸರು ಹೇಳಿಕೆಯಲ್ಲಿ ಮಹಿಳೆಯರು ಯಾವ ದೇಶಗಳಿಗೆ ಸೇರಿದವರು ಎಂಬುದನ್ನು ಬಹಿರಂಗಪಡಿಸಿಲ್ಲ.

ಕೋರಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಮಡಿವಾಳ ಚೆಕ್ ಪೋಸ್ಟ್ ಬಳಿಯ ಬಸ್ ನಿಲ್ದಾಣದ ಫುಟ್‌ಪಾತ್ ಬಳಿ ನಿಲ್ಲುತ್ತಿದ್ದ ಕೆಲವು ವಿದೇಶಿ ಮಹಿಳೆಯರು, ರಸ್ತೆಯಲ್ಲಿ ಹಾದುಹೋಗುವ ಪುರುಷರನ್ನು ವೇಶ್ಯಾವಾಟಿಕೆಗೆ ಕರೆಯುತ್ತಿದ್ದರು ಎಂಬ ಸುಳಿವು ದೊರೆತ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಾಹಿತಿ ಆಧಾರದ ಮೇಲೆ, ಸಿಸಿಬಿ ಮಹಿಳಾ ರಕ್ಷಣಾ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಎಂದು ಅವರು ಹೇಳಿದರು.

ಕಾರ್ಯಾಚರಣೆಯ ಸಮಯದಲ್ಲಿ, ಆರು ವಿದೇಶಿ ಮಹಿಳೆಯರು ಸಾರ್ವಜನಿಕ ಸ್ಥಳದಲ್ಲಿ ಪುರುಷರನ್ನು ವೇಶ್ಯಾವಾಟಿಕೆಗೆ ಆಹ್ವಾನಿಸುವ ಮೂಲಕ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವುದು ಕಂಡುಬಂದಿದೆ ಎಂದು ಪೊಲೀಸ್ ಆಯುಕ್ತರ ಕಚೇರಿ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕೂಡಲೇ, ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿ ಆರು ವಿದೇಶಿ ಮಹಿಳೆಯರನ್ನು ವಶಕ್ಕೆ ಪಡೆದಿದ್ದಾರೆ. ಅವರ ಪಾಸ್‌ಪೋರ್ಟ್‌ಗಳು ಮತ್ತು ವೀಸಾಗಳ ಕುರಿತು ವಿಚಾರಣೆ ನಡೆಸಿದಾಗ, ಅವರು ಮಾನ್ಯ ಮತ್ತು ತೃಪ್ತಿದಾಯಕ ಮಾಹಿತಿ ಒದಗಿಸಲು ವಿಫಲರಾಗಿದ್ದಾರೆ ಎಂದು ಹೇಳಿದೆ.

'ತರುವಾಯ, ಎಲ್ಲ ಆರು ವಿದೇಶಿ ಮಹಿಳೆಯರನ್ನು ಕೋರಮಂಗಲ ಪೊಲೀಸ್ ಠಾಣೆ ಮುಂದೆ ಹಾಜರುಪಡಿಸಲಾಯಿತು ಮತ್ತು ಮುಂದಿನ ಕಾನೂನು ಕ್ರಮಕ್ಕಾಗಿ ವರದಿ ಸಲ್ಲಿಸಲಾಯಿತು. ಈ ಸಂಬಂಧ, ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ' ಎಂದು ಪೊಲೀಸ್ ಹೇಳಿಕೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!

Onion Price: ದಿಢೀರ್ ಈರುಳ್ಳಿ ಬೆಲೆ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ, ದರ ಏರಿಕೆಗೆ ಕಾರಣವೇನು?

ಮಹಿಳಾ ಮೀಸಲಾತಿ ಮಸೂದೆ ಬೆಂಬಲಿಸಿ, ಕಾಂಗ್ರೆಸ್ ಕಚೇರಿಯಲ್ಲಿ ವಂದೇ ಪೂರ್ತಿಯಾಗಿ ಹಾಡಿ ತೋರಿಸಿ: ರಾಹುಲ್ ಗಾಂಧಿಗೆ ಸ್ಮೃತಿ ಇರಾನಿ ಸವಾಲು

ಮದ್ಯ ಸಾಗಣೆ ಹಗರಣ: ಆಂಧ್ರಪ್ರದೇಶದ ಮಾಜಿ ಸಚಿವರ ಬಂಧಿಸಿದ ED

'3 ರಾಷ್ಟ್ರಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದೇನೆ': SIR ಪಟ್ಟಿಯಲ್ಲಿ ಹೆಸರು ನಾಪತ್ತೆ ಬಗ್ಗೆ ಮಾಜಿ ರಾಯಭಾರಿ ಅಸಮಾಧಾನ!