ಚೇತನ್ ಅಹಿಂಸಾ ಮತ್ತು ನಿಖಿಲ್ ಕುಮಾರಸ್ವಾಮಿ 
ರಾಜ್ಯ

ಮಾತನಾಡಲು ಯಾರು ಯೋಗ್ಯರು? ಮೂರು ಬಾರಿ ಸೋತವರಾ ಅಥವಾ ‘ಸ್ಮಾರಕ ಪಾಲಿಟಿಕ್ಸ್’ ಶುರು ಮಾಡಿ 'ಫ್ಯಾನ್ ವಾರ್ಸ್' ಪ್ರೇರೇಪಿಸಿದವರಾ?

ಮಾಜಿ ಪ್ರಧಾನಿಯ ಮಗ—2006ರಲ್ಲಿ ಅವಕಾಶವಾದಿ ‘ಸ್ಮಾರಕ ಪಾಲಿಟಿಕ್ಸ್’ ಶುರು ಮಾಡಿ ಕನ್ನಡ ಚಲನಚಿತ್ರರಂಗದ ಅಭಿಮಾನಿಗಳ ನಡುವೆ ಅದಕ್ಕೆ ಸಂಬಂಧಪಟ್ಟ ‘ಫ್ಯಾನ್ ವಾರ್ಸ್’ ಪ್ರೇರೇಪಿಸಿದವರಾ?

ಬೆಂಗಳೂರು: ಹಿರಿಯ ನಟ ಡಾ. ರಾಜ್‌ಕುಮಾರ್ ಅವರ ಸ್ಮಾರಕದ ವಿಚಾರವಾಗಿ ಜೆಡಿಎಸ್‌ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರ ಹೇಳಿಕೆಗೆ ನಟ ಚೇತನ್‌ ಅಹಿಂಸಾ ಕಿಡಿ ಕಾರಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ತಿರುಗೇಟು ನೀಡಿರುವ ಚೇತನ್‌, ಪ್ರಜಾಪ್ರಭುತ್ವದಲ್ಲಿ ನಾವೆಲ್ಲರೂ ಮಾತನಾಡಲು ಯೋಗ್ಯರೇ. ಆದರೆ, ಯಾರ ಮಾತಿಗೆ ನಿಜವಾದ ತೂಕ ಇದೆ ಅನ್ನುವುದನ್ನು ಜನರೇ ತೀರ್ಮಾನಿಸುತ್ತಾರೆ ಎಂದಿದ್ದಾರೆ.

ಚೇತನ್ ಅಹಿಂಸಾ ಹೇಳಿದ್ದಿಷ್ಟು:

ಪ್ರಜಾಪ್ರಭುತ್ವದಲ್ಲಿ ಯಾರು ಮಾತನಾಡಲು ‘ಯೋಗ್ಯ’?

ಮಾಜಿ ಪ್ರಧಾನಿಯ ಮಗ—2006ರಲ್ಲಿ ಅವಕಾಶವಾದಿ ‘ಸ್ಮಾರಕ ಪಾಲಿಟಿಕ್ಸ್’ ಶುರು ಮಾಡಿ ಕನ್ನಡ ಚಲನಚಿತ್ರರಂಗದ ಅಭಿಮಾನಿಗಳ ನಡುವೆ ಅದಕ್ಕೆ ಸಂಬಂಧಪಟ್ಟ ‘ಫ್ಯಾನ್ ವಾರ್ಸ್’ ಪ್ರೇರೇಪಿಸಿದವರಾ?

ಅಥವಾ ಅವರ ಮಗ— ಮೂರು ಬಾರಿ ಸೋತವರು—ಸ್ವಜನಪಕ್ಷಪಾತ ಹೊರತುಪಡಿಸಿ ಮತ್ತೇನು ಸಾಧನೆ ಇಲ್ಲದವರಾ? ಪ್ರಜಾಪ್ರಭುತ್ವದಲ್ಲಿ ನಾವು ಎಲ್ಲರೂ ಮಾತನಾಡಲು ಯೋಗ್ಯರೇ. ಆದರೆ ಯಾರ ಮಾತಿಗೆ ನಿಜವಾದ ತೂಕ ಇದೆ ಅನ್ನುವುದನ್ನು ಜನರೇ ತೀರ್ಮಾನಿಸುತ್ತಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ವರನಟ ಡಾ. ರಾಜ್ ಕುಮಾರ್ ಸ್ಮಾರಕದ ಜಾಗದ ವಿಚಾರವಾಗಿ ಚೇತನ್ ಅವರು ಎತ್ತಿದ್ದ ಆಕ್ಷೇಪಕ್ಕೆ ಸೋಮವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದ ನಿಖಿಲ್‌, ‘ಅಣ್ಣಾವ್ರ ಬಗ್ಗೆ ಮಾತನಾಡಲು ಚೇತನ್‌ಗೆ ಯೋಗ್ಯತೆ ಇಲ್ಲ’ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ಮೇಲೆ ಇರಾನ್ ಹಿಡಿತ: ಟೆಹ್ರಾನ್ ಷರತ್ತುಗಳಿಗೆ ‘NO’ ಎಂದ ಅಮೆರಿಕಾ; ಸಂದಿಗ್ಧ ಸ್ಥಿತಿಯಲ್ಲಿ ಶಾಂತಿ ಮಾತುಕತೆ

ಟ್ರಂಪ್ ಕೈಗೆ ಗಾಯ, ಬಣ್ಣ ಬದಲಾವಣೆ: ಫೋಟೋ ವೈರಲ್, ಅಮೆರಿಕಾ ಅಧ್ಯಕ್ಷರ ಆರೋಗ್ಯ ಕುರಿತು ಊಹಾಪೋಹ ಶುರು..!

ಶಿಕ್ಷಣ ಕ್ಷೇತ್ರಕ್ಕೆ ಹೊಸ ದಿಕ್ಕು: ಸರ್ಕಾರಿ ಶಾಲೆಗಳ ಬಲವರ್ಧನೆಗೆ 8 ಗ್ಯಾರಂಟಿಗಳ ಘೋಷಣೆ..!

ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ತೆರೆ ಎಳೆಯಿರಿ: ಹೈಕಮಾಂಡ್'ಗೆ ಸತೀಶ್ ಜಾರಕಿಹೊಳಿ ಆಗ್ರಹ

SSLC ಪರೀಕ್ಷೆಯಲ್ಲಿ “ಮಾಸ್ ಕಾಪಿ” ಆರೋಪ: ವಯಸ್ಸಾಗಿದೆ-ಏನೇನೋ ಬಡಬಡಿಸುತ್ತಾರೆ, ಕ್ಷಮಿಸಿಬಿಡೋಣ; ಹೆಚ್.ವಿಶ್ವನಾಥ್ ವಿರುದ್ಧ ಮಧು ಬಂಗಾರಪ್ಪ ಆಕ್ರೋಶ

SCROLL FOR NEXT