ಪ್ರವಾಸಿ ಬಸ್ ಅಪಘಾತ 
ರಾಜ್ಯ

ಉಡುಪಿಯಲ್ಲಿ ಟ್ಯಾಂಕರ್‌ಗೆ ಪ್ರವಾಸಿ ಬಸ್ ಡಿಕ್ಕಿ: ಮೋಜು ಮಸ್ತಿಗೆ ತೆರಳಿದ್ದ ಶಿಕ್ಷಕ ಹಾಗೂ ಇಬ್ಬರು ವಿದ್ಯಾರ್ಥಿಗಳು ಸಾವು!

ಮರವಂತೆ-ತ್ರಾಸಿ ಬಳಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಮಂಗಳವಾರ ಮಧ್ಯಾಹ್ನ ಪ್ರವಾಸಿ ಬಸ್ ನಿಂತಿದ್ದ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದಾರೆ.

ಉಡುಪಿ: ಮರವಂತೆ-ತ್ರಾಸಿ ಬಳಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಮಂಗಳವಾರ ಮಧ್ಯಾಹ್ನ ಪ್ರವಾಸಿ ಬಸ್ ನಿಂತಿದ್ದ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದಾರೆ. ಮೃತರನ್ನು ರಘು ಅಲಿಯಾಸ್ ಉಮೇಶ್ (34), ರಂಗನಾಥ್ ಮತ್ತು ಹೇಮಂತ್ ಎಂದು ಪೊಲೀಸರು ಗುರುತಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಶಂಕರಘಟ್ಟದಲ್ಲಿರುವ ವಿಶ್ವವಿದ್ಯಾಲಯ ಶ್ರೀಮದ್ ರಂಭಾಪುರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕರು, ಸಿಬ್ಬಂದಿಯನ್ನು ಬಸ್ ಕರೆದೊಯ್ಯುತ್ತಿತ್ತು. ಏಪ್ರಿಲ್ 26ರಂದು ದಾಂಡೇಲಿ ಮತ್ತು ಹೊನ್ನಾವರವನ್ನು ಒಳಗೊಂಡ ಪ್ರವಾಸಕ್ಕಾಗಿ ಅವರು ಹೊರಟಿದ್ದರು. ಮರವಂತೆ ಬೀಚ್ ಬಳಿ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಬೈಂದೂರಿನಿಂದ ಕುಂದಾಪುರಕ್ಕೆ ಅತಿವೇಗವಾಗಿ ಬಸ್ ತೆರಳುತ್ತಿದ್ದ ಇಂದು ಮಧ್ಯಾಹ್ನ 1.30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ, ಬಸ್ ಎಡಕ್ಕೆ ತಿರುಗಿ, ಮೊದಲು ರಸ್ತೆಬದಿಯಲ್ಲಿ ನಿಂತಿದ್ದ ಪೆಟ್ರೋಲಿಯಂ ಟ್ಯಾಂಕರ್‌ಗೆ ಡಿಕ್ಕಿ ಹೊಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಬಸ್ ಎದುರು ಭಾಗದಲ್ಲಿ ನಿಂತಿದ್ದ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ.

ಪರಿಣಾಮ ಬಸ್‌ನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಹಲವಾರು ಪ್ರಯಾಣಿಕರು ಒಳಗೆ ಸಿಲುಕಿಕೊಂಡರು. ಸ್ಥಳೀಯರು ಮತ್ತು ತುರ್ತು ಸೇವೆ ಒದಗಿಸುವವರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಂಬ್ಯುಲೆನ್ಸ್‌ಗಳಲ್ಲಿ ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಿದರು. ಗಾಯಾಳುಗಳನ್ನು ಕುಂದಾಪುರ ಆದರ್ಶ ಆಸ್ಪತ್ರೆ, ಮಣಿಪಾಲ ಆಸ್ಪತ್ರೆ, ಕುಂದಾಪುರ ಸರ್ಕಾರಿ ಆಸ್ಪತ್ರೆ ಮತ್ತು ಚಿನ್ಮಯಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಬಸ್ ಚಾಲಕ ಮಂಜುನಾಥ್ ಅವರ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ನ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಕುಂದಾಪುರ ಡಿವೈಎಸ್‌ಪಿ ಎಚ್.ಡಿ. ಕುಲಕರ್ಣಿ ಮತ್ತು ಇತರ ಅಧಿಕಾರಿಗಳು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಅಪಘಾತ ಸ್ಥಳಕ್ಕೆ ಭೇಟಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೌರಿಂಗ್ ಆಸ್ಪತ್ರೆ ದುರಂತ: ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ ಘೋಷಣೆ

Exit polls: ದೀದಿಗೆ ಶಾಕ್; BJP ತೆಕ್ಕೆಗೆ ಬಂಗಾಳ; ಅಸ್ಸಾಂನಲ್ಲೂ ಕಮಲ ಮ್ಯಾಜಿಕ್!

IPL 2026: 'ಬ್ಯಾಟಲ್ಲಿ AI Chip ಇದೆ' ಎಂದ ಪಾಕಿಸ್ತಾನದ Nouman Niaz ಗೆ ಬಟ್ಟೆ ಸುತ್ತಿ ಹೊಡೆದ ವೈಭವ್ ಸೂರ್ಯವಂಶಿ

ಕೇಂದ್ರ ಪಡೆಗಳಿಂದ ಮತದಾರರ ಮೇಲೆ ಹಲ್ಲೆ; ವೃದ್ಧ ಸಾವು- ಅಭಿಷೇಕ್ ಬ್ಯಾನರ್ಜಿ ಆರೋಪ

Exit polls: ತಮಿಳುನಾಡಿನಲ್ಲಿ ನಟ ವಿಜಯ್ ಗೆ ಮುಖಭಂಗ,; DMKಗೆ ಮತ್ತೆ ಅಧಿಕಾರ; 10 ವರ್ಷಗಳ ಬಳಿಕ UDFಗೆ ಕೇರಳ ಗದ್ದುಗೆ, CM ವಿಜಯನ್ ಗೆ ಶಾಕ್!

SCROLL FOR NEXT