ಸಾಂದರ್ಭಿಕ ಚಿತ್ರ 
ರಾಜ್ಯ

BBMP ಭಾರೀ ಭ್ರಷ್ಟಾಚಾರ: ರೂ.20,000 ಕೋಟಿ TDR ಕೇಸ್‌ ದಾಖಲೆ ನಾಪತ್ತೆ..!

2007ರಲ್ಲಿ ಜಾರಿಗೆ ಬಂದ ಟಿಡಿಆರ್ ವ್ಯವಸ್ಥೆಯಡಿ ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಮೂಲಸೌಕರ್ಯ ಯೋಜನೆಗಳಿಗೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡು, ಅದರ ಬದಲು ಭೂಮಿಯ ಮಾಲೀಕರಿಗೆ ಟಿಡಿಆರ್ ನೀಡಲಾಗುತ್ತಿತ್ತು.

ಬೆಂಗಳೂರು: ಬೆಂಗಳೂರಿನಲ್ಲಿ 20 ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತದ ಟಿಡಿಆರ್‌ ಹಗರಣ ಬೆಳಕಿಗೆ ಬಂದಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಚೇರಿಯಿಂದ 2014-17ರ ಅವಧಿಯ ಮಹತ್ವದ ದಾಖಲೆಗಳು ನಾಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪ್ರಸ್ತುತ ಭೂಸ್ವಾಧೀನ ಮತ್ತು ಟಿಡಿಆರ್ ಕಚೇರಿಯಿಂದ ಹಗರಣಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳು ಕಾಣೆಯಾಗಿವೆ ಎಂದು ಭ್ರಷ್ಟಾಚಾರ ವಿರೋಧಿ ವೇದಿಕೆಯ ಅಧ್ಯಕ್ಷ ಮತ್ತು ಬಿಬಿಎಂಪಿಯ ಮಾಜಿ ಆಡಳಿತ ಪಕ್ಷದ ನಾಯಕ ಎನ್.ಆರ್. ರಮೇಶ್ ಮಂಗಳವಾರ ಆರೋಪಿಸಿದ್ದಾರೆ.

2007ರಲ್ಲಿ ಜಾರಿಗೆ ಬಂದ ಟಿಡಿಆರ್ ವ್ಯವಸ್ಥೆಯಡಿ ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಮೂಲಸೌಕರ್ಯ ಯೋಜನೆಗಳಿಗೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡು, ಅದರ ಬದಲು ಭೂಮಿಯ ಮಾಲೀಕರಿಗೆ ಟಿಡಿಆರ್ ನೀಡಲಾಗುತ್ತಿತ್ತು.

ಆದರೆ, ಬಿಬಿಎಂಪಿ ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ದ ಕೆಲ ಭ್ರಷ್ಟ ಅಧಿಕಾರಿಗಳು ಈ ವ್ಯವಸ್ಥೆಯಲ್ಲಿನ ಲೋಪಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಇದು ಸಾವಿರಾರು ಕೋಟಿ ಮೊತ್ತದ ಸಾರ್ವಜನಿಕ ಸಂಪನ್ಮೂಲಗಳನ್ನು ಕಾನೂನುಬಾಹಿರವಾಗಿ ತಿರುಗಿಸಲು ಅನುಕೂಲ ಮಾಡಿಕೊಟ್ಟಿದೆ ಎಂದು ತಿಳಿಸಿದ್ದಾರೆ.

ಡಿ, ಇ ಮತ್ತು ಎಫ್ ವಲಯಗಳಿಗೆ ಸಂಬಂಧಿಸಿದ ಟಿಡಿಆರ್/ಡಿಆರ್‌ಸಿ (ಡೆವಲಪ್‌ಮೆಂಟ್ ರೈಟ್ಸ್ ಸರ್ಟಿಫಿಕೆಟ್)ಗಳನ್ನು ಅಕ್ರಮವಾಗಿ ಎ, ಬಿ ಮತ್ತು ಸಿ ವಲಯಗಳಲ್ಲಿ ಬಳಸಲಾಗಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಈ ಹಗರಣದ ಬಗ್ಗೆ ಸಮಗ್ರ ತನಿಖೆ ನಡೆಸಿ, ನಾಪತ್ತೆಯಾಗಿರುವ ದಾಖಲೆಗಳನ್ನು ಪತ್ತೆಹಚ್ಚಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Assembly elections: ಪ. ಬಂಗಾಳ ಅಂತಿಮ ಹಂತದಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ಶೇ. 61.1ರಷ್ಟು ಮತದಾನ: ಸಿಎಂ ಮಮತಾ ಬ್ಯಾನರ್ಜಿ ಸೇರಿ ಪ್ರಮುಖ ನಾಯಕರ ಭವಿಷ್ಯ ಇಂದು ನಿರ್ಧಾರ

ವಿಶೇಷ ಏನೂ ಇಲ್ಲ.. ಒಳ್ಳೇ ಸುದ್ದಿ, ಪಕ್ಷದ ನಿರ್ಧಾರಕ್ಕೆ ಬದ್ಧರಾಗಿರುತ್ತೇನೆ: ನಾಯಕತ್ವ ಬದಲಾವಣೆ ಕುರಿತು ಮಾಜಿ ಸಂಸದ DK Suresh ಮಾರ್ಮಿಕ ನುಡಿ

video: ಬೀದರ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ, ರೋಗಿಗಳ ಸುರಕ್ಷಿತ ಸ್ಥಳಾಂತರ

‘ನಾವಿಲ್ಲದಿದ್ದರೆ ಅಮೆರಿಕನ್ನರು ಫ್ರೆಂಚ್ ಮಾತನಾಡುತ್ತಿದ್ದರು’: ಹಾಸ್ಯ ಮೂಲಕವೇ ಟ್ರಂಪ್‌ಗೆ ಕಿಂಗ್ ಚಾರ್ಲ್ಸ್ III ಫುಲ್ ರೋಸ್ಟ್..!

ಶ್ರೀ ಸಾಯಿ ಸಿಲ್ಕ್ಸ್ ಮಾಲಕಿ ಭೀಕರ ಕೊಲೆ: ಪತ್ನಿ ಕೊಂದು ಪತಿ ಆತ್ಮಹತ್ಯೆ; ನಾಗಲಕ್ಷ್ಮಿ ಪೋಸ್ಟ್ ಮಾಡಿದ್ದ ಕೊನೆಯ ವಿಡಿಯೋ ವೈರಲ್!

SCROLL FOR NEXT