ಆರ್ ಅಶೋಕ್  
ರಾಜ್ಯ

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 10 ಕೋಟಿ ರೂ ಅನುದಾನ ನೀಡಿ: ಆರ್‌.ಅಶೋಕ ಆಗ್ರಹ

ಸರ್ಕಾರ ಕುಡಿಯುವ ನೀರಿಗೆ ಒಂದು ಪೈಸೆಯನ್ನೂ ಬಿಡುಗಡೆ ಮಾಡಿಲ್ಲ. ತೆಲಂಗಾಣ ಮತ್ತು ಹಿಮಾಚಲ ಪ್ರದೇಶದಲ್ಲಿ ನೌಕರರ ವೇತನವನ್ನು ಕಡಿತಗೊಳಿಸಲಾಗಿದೆ. ಕರ್ನಾಟಕ ಕೂಡ ಅದೇ ದಿಕ್ಕಿನಲ್ಲಿ ಸಾಗುವ ಲಕ್ಷಣಗಳನ್ನು ತೋರಿಸುತ್ತಿದೆ.

ಬೆಂಗಳೂರು: ರಾಜ್ಯದೆಲ್ಲೆಡೆ ಬರಗಾಲದ ಸ್ಥಿತಿ ಕಂಡುಬರುತ್ತಿದೆ, ಆದರೆ ಸಚಿವರು ಅಧಿಕಾರಕ್ಕಾಗಿ ದೆಹಲಿ ಪ್ರವಾಸ ಮಾಡುತ್ತಿದ್ದಾರೆ. ಕಾಂಗ್ರೆಸ್‌ ಸರ್ಕಾರ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಕುಡಿಯುವ ನೀರಿಗೆ ಒಂದು ಪೈಸೆಯನ್ನೂ ಬಿಡುಗಡೆ ಮಾಡಿಲ್ಲ. ತೆಲಂಗಾಣ ಮತ್ತು ಹಿಮಾಚಲ ಪ್ರದೇಶದಲ್ಲಿ ನೌಕರರ ವೇತನವನ್ನು ಕಡಿತಗೊಳಿಸಲಾಗಿದೆ. ಕರ್ನಾಟಕ ಕೂಡ ಅದೇ ದಿಕ್ಕಿನಲ್ಲಿ ಸಾಗುವ ಲಕ್ಷಣಗಳನ್ನು ತೋರಿಸುತ್ತಿದೆ. ಸರ್ಕಾರವು ಕುಡಿಯುವ ನೀರಿಗಾಗಿ ಪ್ರತ್ಯೇಕವಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 10 ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕು.

ಈ ಹಣವನ್ನು ಬೋರ್‌ವೆಲ್‌ಗಳನ್ನು ಪುನರುಜ್ಜೀವನಗೊಳಿಸಲು ಮತ್ತು ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಲು ಬಳಸಬೇಕು. ಗೋಶಾಲೆಗಳನ್ನು (ಜಾನುವಾರು ಆಶ್ರಯಗಳು) ತಕ್ಷಣವೇ ನಿರ್ಮಿಸಿ ಜಾನುವಾರುಗಳಿಗೆ ಮೇವು ಪೂರೈಸಬೇಕು.

ಹವಾಮಾನ ಇಲಾಖೆಯ ವರದಿಯ ಪ್ರಕಾರ, ಈ ವರ್ಷ ಮಳೆಯ ಕೊರತೆ ಇರುತ್ತದೆ. ಸರ್ಕಾರವು ಈ ಕೆಲಸಗಳನ್ನು ಮಾಡಲು ಸಾಧ್ಯವಾಗದಿದ್ದರೆ, ಸಚಿವರು ದೆಹಲಿಯಲ್ಲಿಯೇ ಇರಬೇಕು. ಉಳಿದ ಎರಡು ವರ್ಷಗಳನ್ನು ಅವರು ದೆಹಲಿಯಲ್ಲಿ ಕಳೆದರೆ ರಾಜ್ಯದ ಅಭಿವೃದ್ಧಿ ಅಸಾಧ್ಯ ಎಂದು ಅಶೋಕ ಹೇಳಿದರು.

ಸಿದ್ದರಾಮಯ್ಯನವರ ನಾಯಕತ್ವಕ್ಕೆ ಮೂರು ಕಾಸಿನ ಬೆಲೆಯಿಲ್ಲ ಎಂಬುದು ಸಾಬೀತಾಗಿದೆ. ಒಳಮೀಸಲಾತಿಗೆ ಸಂಬಂಧಿಸಿದಂತೆ ತೀರ್ಮಾನ ಕೈಗೊಳ್ಳಲು ನಡೆಸಿದ ಸಚಿವ ಸಂಪುಟ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇರಲಿಲ್ಲ.

ಅವರು ದೆಹಲಿಯಲ್ಲಿದ್ದಾಗ ಸಭೆ ಮಾಡಿದ್ದಾರೆ ಎಂದರೆ ಕಾಂಗ್ರೆಸ್‌ನಲ್ಲಿ ಎರಡು ಬಣ ಸೃಷ್ಟಿಯಾಗಿದೆ ಎಂದೇ ಅರ್ಥ. ಎಲ್ಲ ಕಡೆ ಬರಗಾಲ ಕಂಡುಬಂದಿದ್ದು, ನೀರಿಗಾಗಿ ಹಾಹಾಕಾರ ಹೆಚ್ಚಿದೆ. ಜಾನುವಾರುಗಳಿಗೆ ನೀರು ಸಿಗುತ್ತಿಲ್ಲ, ಜನರಿಗೆ ಕುಡಿಯಲು ನೀರು ದೊರೆಯುತ್ತಿಲ್ಲ ಎಂದು ಆರೋಪಿಸಿದರು.

ಪರಿಸ್ಥಿತಿಯ ತೀವ್ರತೆಯ ಬಗ್ಗೆ ವಿವರಿಸಿದ ಆರ್. ಅಶೋಕ ಅವರು ರಾಜ್ಯಾದ್ಯಂತ ನೀರಿನ ಬೇಡಿಕೆ ಹೆಚ್ಚಾಗಿದೆ. ಆಡಳಿತ ಪಕ್ಷದ ವಿರುದ್ಧ ತೀವ್ರ ದಾಳಿ ನಡೆಸಿದ ಅಶೋಕ, ಜನರು ಅಗತ್ಯಗಳಿಗಾಗಿ ಹೋರಾಡುತ್ತಿರುವಾಗ ಸಚಿವರು ದೆಹಲಿಗೆ ಪ್ರವಾಸಗಳಿಗೆ ಆದ್ಯತೆ ನೀಡುವುದನ್ನು ನೋಡುತ್ತಿದ್ದರೆ ಸರ್ಕಾರ "ಸತ್ತಿದೆ" ಎಂದು ಲೇವಡಿ ಮಾಡಿದರು

ಮುಖ್ಯಮಂತ್ರಿ ಹಾಗೂ ಸಚಿವರು ಹೇಳಿಕೆ ನೀಡುವುದರಿಂದ ಪ್ರಯೋಜನವಿಲ್ಲ. ಯಾವುದೇ ವಿಧಾನಸಭಾ ಕ್ಷೇತ್ರಕ್ಕೆ ಈವರೆಗೆ ಹಣ ಬಿಡುಗಡೆ ಮಾಡಿಲ್ಲ. ಇದಕ್ಕೆ ಸಂಬಂಧಪಟ್ಟಂತೆ ಆರ್ಥಿಕ ಇಲಾಖೆಗೆ ಆದೇಶವನ್ನೂ ನೀಡಿಲ್ಲ. ಅಧಿಕಾರಿಗಳನ್ನು ಕೇಳಿದರೆ ಆದೇಶ ಬಂದಿಲ್ಲ ಎನ್ನುತ್ತಾರೆ ಎಂದು ದೂರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Repo ದರದಲ್ಲಿ ಯಾವುದೇ ಬದಲಾವಣೆ ಇಲ್ಲ; ಶೇ. 5.25ರಲ್ಲೇ ಯಥಾಸ್ಥಿತಿ ಕಾಯ್ದುಕೊಂಡ RBI, ಜಾಗತಿಕ ಅನಿಶ್ಚಿತತೆ ನಡುವೆ ತಟಸ್ಥ ನಿಲುವು ಮುಂದುವರಿಕೆ..!

Hormuz ಜಲಸಂಧಿ ಬಿಕ್ಕಟ್ಟು ಶೀಘ್ರದಲ್ಲೇ ಅಂತ್ಯ: ಅಂತಿಮ ಘಟ್ಟದಲ್ಲಿ ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಇಂದೇ ಅಧಿಕೃತ ಘೋಷಣೆ ಸಾಧ್ಯತೆ..!

Yemen ಕರಾವಳಿಯಲ್ಲಿ ಭಾರತೀಯ ಧ್ವಜದ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ; ಸಮುದ್ರದಲ್ಲಿ ಮುಳುಗಿದ ಹಡಗು, 13 ಮಂದಿ ಭಾರತೀಯರು ಸೇರಿ ಎಲ್ಲಾ 14 ಸಿಬ್ಬಂದಿ ರಕ್ಷಣೆ..!

Hormuz ಜಲಸಂಧಿ ವಿವಾದ: 'ನಮ್ಮ ಒಪ್ಪಿಗೆ ಇಲ್ಲದೆ ಹಡಗು ಸಂಚಾರಕ್ಕೆ ಅವಕಾಶವೇ ಇಲ್ಲ'; ಯಾರ ಅನುಮತಿ ಬೇಕಿಲ್ಲ ಎಂದ ಅಮೆರಿಕಕ್ಕೆ Iran ತಿರುಗೇಟು..!

ಮಾಧ್ಯಮಗಳ ಧ್ವನಿ ಅಡಗಿಸಲು ಪಾಕ್‌ ಮುಂದು? ಅನುಮತಿ ಇಲ್ಲದೆ ವರದಿಗಾರಿಕೆಗೆ ನಿಷೇಧ; ಸತ್ಯ ಮುಚ್ಚಿಡಲು ವಿದೇಶಿ ಮಾಧ್ಯಮಗಳ ರೆಕ್ಕೆ ಕತ್ತರಿಸಿದ ಸರ್ಕಾರ..!