ಆರು ಮಂದಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್ 
ರಾಜ್ಯ

ಗಂಗಾವತಿ ಬಿಜೆಪಿ ಮುಖಂಡನ ಕೊಲೆ ಪ್ರಕರಣ: ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್

ಮೊದಲಿಗೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿಯ ಫೂಟೇಜ್​ಗಳನ್ನು ಪರಿಶೀಲಿಸಿದ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್, ಅಪರಾಧಿಗಳು ಈ ಹಿಂದೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾದ ಹಿನ್ನೆಲೆಯ ಬಗ್ಗೆಯೂ ಪರಿಶೀಲನೆ ನಡೆಸಿದರು.

ಕೊಪ್ಪಳ: ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್ಎನ್ ವೆಂಕಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ಜನ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಇಲ್ಲಿನ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ.

ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್ ಅವರು ಶಿಕ್ಷೆ ತೀರ್ಪು ಪ್ರಕಟಿಸಿದರು. ರವಿ, ಮೈಲಾರಿ, ಧನರಾಜ್, ಭೀಮಾ, ಸಲೀಂ ಮತ್ತು ಗಂಗಾಧರ ಗೌಳಿ ಶಿಕ್ಷೆಗೊಳಗಾದ ಅಪರಾಧಿಗಳು.

ಮೊದಲಿಗೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿಯ ಫೂಟೇಜ್​ಗಳನ್ನು ಪರಿಶೀಲಿಸಿದ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್, ಅಪರಾಧಿಗಳು ಈ ಹಿಂದೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾದ ಹಿನ್ನೆಲೆಯ ಬಗ್ಗೆಯೂ ಪರಿಶೀಲನೆ ನಡೆಸಿದರು.

ಗಂಗಾವತಿಯ ರೈಲ್ವೆ ನಿಲ್ದಾಣದ ಬಳಿ ನಡೆದಿದ್ದ ಮಾರುತಿ ಎಂಬ ಯುವಕನ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಪ್ರಕರಣದಲ್ಲಿ ವೆಂಕಟೇಶ ಪ್ರತ್ಯಕ್ಷ ಸಾಕ್ಷಿಯಾಗಿದ್ದರು. ಅಲ್ಲದೇ ಮಾರುತಿ ಚಿಕಿತ್ಸೆಗೆ ಕೊನೆಯವರೆಗೂ ಬೆಂಬಲವಾಗಿ ನಿಂತಿದ್ದ ಎಂಬ ಕಾರಣಕ್ಕೆ ವೆಂಕಟೇಶನನ್ನು ಕೊಲೆ ಮಾಡಿದ್ದೀರಿ. ಸಭ್ಯ ನಾಗರಿಕ ಸಮಾಜದ ಇಂತಹ ಕೃತ್ಯಗಳನ್ನು ಒಪ್ಪುವುದಿಲ್ಲ. ಅಪರಾಧ ಕೃತ್ಯಗಳ ಹಿನ್ನೆಲೆ ಪರಿಗಣಿಸಿ ಗಲ್ಲು ಶಿಕ್ಷೆ ವಿಧಿಸಲಾಗಿದೆ ಎಂದು ನ್ಯಾಯಾಧೀಶರು ತೀರ್ಪು ಪ್ರಕಟಿಸಿದರು.

ವೆಂಕಟೇಶ್ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಪ್ರಕರಣ ಸಂಬಂಧ ಆರು ಜನ ಅರೋಪಿಗಳನ್ನು ದೋಷಿ ಎಂದು ಈ ಹಿಂದೆ ಕೋರ್ಟ್ ತೀರ್ಪು ನೀಡಿ, ಶಿಕ್ಷೆ ಪ್ರಮಾಣ ಕಾಯ್ದಿರಿಸಿತ್ತು. ಅಂತೆಯೇ ಇಂದು ನ್ಯಾಯಾಧೀಶರು, ಆರು ಜನರಿಗೆ ಮರಣದಂಡನೆ ವಿಧಿಸಿ ತೀರ್ಪು ನೀಡಿದ್ದಾರೆ. ಅಪರಾಧಿಗಳು ಅಗತ್ಯವಿದ್ದರೆ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಬಹುದು ಎಂದು ನ್ಯಾಯಾಧೀಶರು ಸಲಹೆಯಲ್ಲಿ ತಿಳಿಸಿದ್ದಾರೆ ಎಂದು ಸರ್ಕಾರಿ ಅಭಿಯೋಜಕಿ ಎಸ್. ನಾಗಲಕ್ಷ್ಮಿ ಮಾಹಿತಿ ನೀಡಿದರು.

ಅಕ್ಟೋಬರ್ 7 2025 ರ ತಡರಾತ್ರಿ ಊಟ ಮುಗಿಸಿಕೊಂಡು ಸ್ನೇಹಿತರೊಂದಿಗೆ ದ್ವಿಚಕ್ರ ವಾಹನದಲ್ಲಿ ವೆಂಕಟೇಶ ತೆರಳುತ್ತಿದ್ದ ಸಂದರ್ಭದಲ್ಲಿ ಕಾರಿನಲ್ಲಿ ಹಿಂಬಾಲಿಸಿದ ಯುವಕರ ಗುಂಪು, ದ್ವಿಚಕ್ರ ವಾಹನಕ್ಕೆ ಗುದ್ದಿ ಬೀಳಿಸಿದ್ದರು.

ಬಳಿಕ ಕೆಳಕ್ಕೆ ಬಿದ್ದ ವೆಂಕಟೇಶನ ಮೇಲೆ ಮಾರಕಾಯುಧಗಳಿಂದ ದಾಳಿ ಮಾಡಿ ಮನಬದಂತೆ ಕೊಚ್ಚಿ ಕೊಲೆ ಮಾಡಿದ್ದರು. ತೀವ್ರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ವೆಂಕಟೇಶನನ್ನು ಸರ್ಕಾರಿ ಉಪ ವಿಭಾಗ ಆಸ್ಪತ್ರೆಗೆ ಮಧ್ಯರಾತ್ರಿ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್