ಸಂತ್ರಸ್ತನ ಕಾಲಿಗೆ ಗಂಭೀರವಾಗಿ ಗಾಯವಾಗಿರುವ ಚಿತ್ರ 
ರಾಜ್ಯ

NEET ಪ್ರತಿಭಟನಾಕಾರನ ಮೇಲೆ ಮುಖವಾಡ ಧರಿಸಿದವರಿಂದ ಮಾರಣಾಂತಿಕ ಹಲ್ಲೆ: ABVP ವಿರುದ್ಧ AISA ಆರೋಪ!

ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ BEL ವೃತ್ತದ ಬಳಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಹಲ್ಲೆಕೋರರು ಆತನನ್ನು "ನೀನು ಮೋದಿ ಅವರ ರಾಜೀನಾಮೆಯನ್ನು ಬಯಸುತ್ತೀಯಾ?" ಎಂದು ಕೂಡ ಪ್ರಶ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಬೆಂಗಳೂರು: NEET ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ 'ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್' (AISA) ಸದಸ್ಯ ಹಾಗೂ 19 ವರ್ಷದ ವಿದ್ಯಾರ್ಥಿಯೊಬ್ಬನ ಮೇಲೆ ಮುಖವಾಡ ಧರಿಸಿದ ನಾಲ್ವರು ವ್ಯಕ್ತಿಗಳು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ BEL ವೃತ್ತದ ಬಳಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಹಲ್ಲೆಕೋರರು ಆತನನ್ನು "ನೀನು ಮೋದಿ ಅವರ ರಾಜೀನಾಮೆಯನ್ನು ಬಯಸುತ್ತೀಯಾ?" ಎಂದು ಕೂಡ ಪ್ರಶ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಅಮನ್ ದೀಪ್ ಸಿಂಗ್ ಎಂಬುವರು ದೂರು ದಾಖಲಿಸಿದ್ದಾರೆ. ಮಂಗಳವಾರ ರಾತ್ರಿ 10.30ರ ಸುಮಾರಿಗೆ ಊಟದ ನಂತರ ನಡೆದುಕೊಂಡು ಮನೆಗೆ ಮರಳುತ್ತಿದ್ದಾಗ, ಎರಡು ಬೈಕ್‌ಗಳಲ್ಲಿ ಬಂದ ಮುಖವಾಡ ಧರಿಸಿದ ನಾಲ್ವರು ವ್ಯಕ್ತಿಗಳು ಅವರನ್ನು ತಡೆದರು. ಹಲ್ಲೆ ನಡೆಸುವ ಮುನ್ನ ಅವರು ಆತನ ಗುರುತನ್ನು ಖಚಿತಪಡಿಸಿಕೊಂಡಿದ್ದಾರೆ.

ಕೈಯಲ್ಲಿ ದೊಣ್ಣೆ ಹಿಡಿದಿದ್ದ ವ್ಯಕ್ತಿಯೊಬ್ಬ, ಹಲ್ಲೆ ನಡೆಸುವ ಮೊದಲು ನಿನಗೆ ಮೋದಿ ಅವರ ರಾಜೀನಾಮೆ ಬೇಕೇ?" ಎಂದು ಕೇಳಿದನೆಂದು ವರದಿಯಾಗಿದೆ. ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪ್ರಕರಣ ದಾಖಲಿಸಲಾಗಿದೆ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತ ವಿದ್ಯಾರ್ಥಿಯ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಪ್ಲಾಸ್ಟರ್ (cast) ಹಾಕಬೇಕಾಯಿತು. ಈ ಹಲ್ಲೆಯ ಹಿಂದೆ 'ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್' (ABVP) ಸದಸ್ಯರ ಕೈವಾಡವಿದೆ ಎಂದು AISA ಆರೋಪಿಸಿದೆ.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ರಾಷ್ಟ್ರವ್ಯಾಪಿ ವಿದ್ಯಾರ್ಥಿ-ಯುವಜನ ಚಳವಳಿಯ ಬೆಂಬಲವಾಗಿ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಗಳಲ್ಲಿ ಈ ವಿದ್ಯಾರ್ಥಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು ಎಂದು ಸಂಘಟನೆ ತಿಳಿಸಿದೆ.

ಪ್ರಸ್ತುತ ಭಾರತೀಯ ಸರ್ಕಾರದ ಕ್ರಮಗಳನ್ನು ಪ್ರಶ್ನಿಸುವ ನಿಟ್ಟಿನಲ್ಲಿ ವಿದ್ಯಾರ್ಥಿ ಭಾಗವಹಿಸಿದ್ದಕ್ಕೆ ಪ್ರತಿಕ್ರಿಯೆಯಾಗಿ ಈ ಹಲ್ಲೆ ನಡೆದಿದೆ ಎಂದು ಹೇಳಿಕೆಯಲ್ಲಿ ಸಂಘಟನೆ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದಕ್ಷಿಣ ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ: ವಲಸೆ ಕಾರ್ಮಿಕ ಸಾವು, ಮತ್ತೊಬ್ಬರಿಗೆ ಗಾಯ

ಮಂಡ್ಯ: ಕಾವೇರಿ ಹೋರಾಟಕ್ಕೆ ಸ್ಪಂದಿಸದೆ ರೈತರ ಕೆಂಗಣ್ಣಿಗೆ ಗುರಿಯಾದ ನಟಿ ರಾಗಿಣಿ ದ್ವಿವೇದಿ!

Ramayana Trailer: ಕಲರ್ ಫುಲ್ ಸ್ಯಾರಿ, ಓಪನ್ ಹೇರ್, ಕೈಕೇಯಿ ಪಾತ್ರಧಾರಿ ಲಾರಾ ದತ್ತಾ ಭಾರಿ ಟ್ರೋಲ್!

ಇರಾನ್ ವಿದೇಶಾಂಗ ಸಚಿವ- ಎಸ್ ಜೈಶಂಕರ್ ಮಾತುಕತೆ: ಪ್ರಾದೇಶಿಕ ಸಮರದ ಬಗ್ಗೆ ಆತಂಕ, ಹಡಗುಗಳ ಮೇಲೆ ದಾಳಿ ನಡೆಸದಂತೆ ಒತ್ತಾಯ

ಆಗಸ್ಟ್ 1 ರಂದು ಪ್ರಧಾನ ಮಂತ್ರಿ ಮೋದಿ ಆಂಧ್ರಪ್ರದೇಶ ಮೈಸೂರಿಗೆ ಭೇಟಿ; ಅಭಿವೃದ್ಧಿ ಯೋಜನೆಗಳ ಉದ್ಘಾಟನೆ