ಪ್ರಿಯಾಂಕ್ ಖರ್ಗೆ  
ರಾಜ್ಯ

ಪೊಲೀಸ್ ನೇಮಕಾತಿ ಪರೀಕ್ಷೆ: ಧಾರ್ಮಿಕ ಉಡುಪಿಗೆ ಯಾವುದೇ ನಿರ್ಬಂಧವಿಲ್ಲ; ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಪರೀಕ್ಷೆಯನ್ನು ಪಾರದರ್ಶಕ, ನ್ಯಾಯಸಮ್ಮತ ಹಾಗೂ ಸುಗಮವಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಪಾಲಿಸಬೇಕಾದ ಉಡುಪು ನಿಯಮ, ತರಬಹುದಾದ ಹಾಗೂ ನಿಷೇಧಿತ ವಸ್ತುಗಳ ಕುರಿತು ಅಭ್ಯರ್ಥಿಗಳ ಪ್ರವೇಶ ಪತ್ರದಲ್ಲೇ ಸ್ಪಷ್ಟ ಮಾಹಿತಿ ನೀಡಲಾಗಿದೆ.

ಬೆಂಗಳೂರು: ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ (ಸಿಪಿಸಿ) ನೇಮಕಾತಿ ಪರೀಕ್ಷೆಯಲ್ಲಿ ಧಾರ್ಮಿಕ ಉಡುಪು ಅಥವಾ ಧಾರ್ಮಿಕ ಆಭರಣ ಧರಿಸಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಯಾವುದೇ ನಿರ್ಬಂಧ ವಿಧಿಸಲಾಗಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಾರ್ಮಿಕ ಉಡುಪು ಅಥವಾ ಧಾರ್ಮಿಕ ಆಭರಣ ಧರಿಸಿ ಪರೀಕ್ಷೆಗೆ ಹಾಜರಾಗಲು ಬಯಸುವ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ ಎಂದು ಹೇಳಿದರು.

ಆದರೆ, ಅಂತಹ ಅಭ್ಯರ್ಥಿಗಳು ಪರೀಕ್ಷೆ ಆರಂಭವಾಗುವ ಎರಡೂವರೆ ಗಂಟೆ ಮೊದಲು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ ಕಡ್ಡಾಯ ಭದ್ರತಾ ತಪಾಸಣೆಗೆ ಒಳಗಾಗಬೇಕು. ತಪಾಸಣೆ ಪೂರ್ಣಗೊಂಡ ಬಳಿಕವೇ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದರು.

ಪರೀಕ್ಷೆಯನ್ನು ಪಾರದರ್ಶಕ, ನ್ಯಾಯಸಮ್ಮತ ಹಾಗೂ ಸುಗಮವಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಪಾಲಿಸಬೇಕಾದ ಉಡುಪು ನಿಯಮ, ತರಬಹುದಾದ ಹಾಗೂ ನಿಷೇಧಿತ ವಸ್ತುಗಳ ಕುರಿತು ಅಭ್ಯರ್ಥಿಗಳ ಪ್ರವೇಶ ಪತ್ರದಲ್ಲೇ ಸ್ಪಷ್ಟ ಮಾಹಿತಿ ನೀಡಲಾಗಿದೆ ಎಂದು ಹೇಳಿದರು.

ಅಭ್ಯರ್ಥಿಗಳು ಪರೀಕ್ಷಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮನವಿ ಮಾಡಿದ ಅವರು, ಮೊಬೈಲ್ ಫೋನ್, ಕೈಗಡಿಯಾರ, ಎಲೆಕ್ಟ್ರಾನಿಕ್ ಸಾಧನಗಳು, ಪುಸ್ತಕಗಳು, ಬ್ಯಾಗ್‌ಗಳು ಹಾಗೂ ಇತರೆ ನಿಷೇಧಿತ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತರಬಾರದು ಎಂದು ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರಾಚ್ಯ ರಾಷ್ಟ್ರಗಳ ಮನವಿಗೆ ಮಣಿದ Trump: ಕೊನೆ ಕ್ಷಣದಲ್ಲಿ Iran ಮೇಲಿನ ದಾಳಿಗೆ ಬ್ರೇಕ್‌; ಒಪ್ಪಂದವಾದರೆ ಯುದ್ಧ ಅಂತ್ಯ, ಇಲ್ಲದಿದ್ದರೆ ಭಾರೀ ದಾಳಿ ಎಚ್ಚರಿಕೆ..!

'ನೀರು-ರಕ್ತ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ'; ನಿಮ್ಮ ದುರ್ವರ್ತನೆಯಿಂದಲೇ ಸಿಂಧು ಜಲ ಒಪ್ಪಂದ ಅಮಾನತು: ಪಾಕಿಸ್ತಾನಕ್ಕೆ ಭಾರತ ತಿರುಗೇಟು

ಭಾರತ-ಚೀನಾ ಗಡಿ ವ್ಯಾಪಾರಕ್ಕೆ ಮರುಜೀವ: 6 ವರ್ಷಗಳ ಬಳಿಕ ನಾಥೂ ಲಾ ಗಡಿಯಲ್ಲಿ ವ್ಯಾಪಾರ ಚಟುವಟಿಕೆ ಪುನರಾರಂಭ..!

ಸಕಲೇಶಪುರ: ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ; ರೈಲು ಸಂಚಾರ ಸಂಪೂರ್ಣ ಸ್ಥಗಿತ; ಕಾನ್ಸ್ಟೇಬಲ್ ಪರೀಕ್ಷಾರ್ಥಿಗಳ ಪರದಾಟ

ಬೆದರಿಕೆಗಳಿಗೆ ಹೆದರಲ್ಲ, ಮತ್ತೆ ದಾಳಿ ನಡೆದರೆ ತಕ್ಕ ಪ್ರತಿಕ್ರಿಯೆ: ಅಮೆರಿಕಾಗೆ ಇರಾನ್ ತಿರುಗೇಟು, ನೆರೆಹೊರೆಯ ರಾಷ್ಟ್ರಗಳೊಂದಿಗೆ ತುರ್ತು ಮಾತುಕತೆ..!