ಸಾಂದರ್ಭಿಕ ಚಿತ್ರ 
ರಾಜ್ಯ

ವಿಜಯನಗರ ಲಾಕ್‌ಅಪ್ ಡೆತ್ ಕೇಸ್; ಕರ್ತವ್ಯದಲ್ಲಿದ್ದ ಇಬ್ಬರು ಪೊಲೀಸರ ಬಂಧನ

ಈ ಘಟನೆ ಬಳಿಕ ಪೊಲೀಸ್ ಠಾಣೆ ಎದುರು ಖಲೀಲ್ ಕುಟುಂಬಸ್ಥರು ಹಾಗೂ ಸಂಬಂಧಿಕರು ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿ, ಇದು ಕಸ್ಟೋಡಿಯಲ್ ಡೆತ್ ಎಂದು ಆರೋಪಿಸಿ ತಪ್ಪಿತಸ್ಥ ಪೊಲೀಸ್ ಸಿಬ್ಬಂದಿಯನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಹೊಸಪೇಟೆ: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಠಾಣೆಯಲ್ಲಿ ನಡೆದ 38 ವರ್ಷದ ದಿನಗೂಲಿ ಕಾರ್ಮಿಕನ ಕಸ್ಟಡಿಯಲ್ ಡೆತ್ (ಲಾಕ್‌ಅಪ್ ಡೆತ್) ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಡ್ ಕಾನ್‌ಸ್ಟೆಬಲ್ ಸೇರಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಆಗಸ್ಟ್ 3 ರಂದು ಬಂಧನಕ್ಕೊಳಪಡಿಸಲಾಗಿದೆ.

ಬಂಧಿತರನ್ನು ಹೆಡ್ ಕಾನ್‌ಸ್ಟೆಬಲ್ ಇಟಗಿ ರಾಘವೇಂದ್ರ ಮತ್ತು ಪೊಲೀಸ್ ಕಾನ್‌ಸ್ಟೆಬಲ್ ವೆಂಕಟೇಶ್ ಎಂದು ಗುರುತಿಸಲಾಗಿದೆ.

ಹರಪನಹಳ್ಳಿ ಮೂಲದ, ಪ್ರಸ್ತುತ ಹಗರಿಬೊಮ್ಮನಹಳ್ಳಿಯಲ್ಲಿ ವಾಸಿಸುತ್ತಿದ್ದ ಖಲೀಲುಲ್ಲಾ (ಖಲೀಲ್) ಮೃತಪಟ್ಟ ದುರ್ದೈವಿ.

ಮೂಲಗಳ ಪ್ರಕಾರ, ಕೌಟುಂಬಿಕ ಕಲಹಕ್ಕೆ ಸಂಬಂಧಿಸಿದ ದೂರಿನ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಖಲೀಲ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಪೊಲೀಸ್ ಠಾಣೆಗೆ ಕರೆತರುವ ವೇಳೆ ಖಲೀಲ್ ಮತ್ತು ಪೊಲೀಸರ ನಡುವೆ ವಾಗ್ವಾದ ಹಾಗೂ ತಳ್ಳಾಟ ನಡೆದಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಶದಲ್ಲಿದ್ದ ವೇಳೆ ಖಲೀಲ್ ಅವರ ಆರೋಗ್ಯ ಏಕಾಏಕಿ ಹದಗೆಟ್ಟಿದ್ದು, ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ವೈದ್ಯರು ಅವರನ್ನು ಆಸ್ಪತ್ರೆಗೆ ತಲುಪುವಷ್ಟರಲ್ಲೇ ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ.

ಈ ಘಟನೆ ಬಳಿಕ ಪೊಲೀಸ್ ಠಾಣೆ ಎದುರು ಖಲೀಲ್ ಕುಟುಂಬಸ್ಥರು ಹಾಗೂ ಸಂಬಂಧಿಕರು ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿ, ಇದು ಕಸ್ಟೋಡಿಯಲ್ ಡೆತ್ ಎಂದು ಆರೋಪಿಸಿ ತಪ್ಪಿತಸ್ಥ ಪೊಲೀಸ್ ಸಿಬ್ಬಂದಿಯನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಕುಟುಂಬದ ಆರೋಪದ ಮೇರೆಗೆ ಕರ್ತವ್ಯದಲ್ಲಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದ್ದು, ಬಳಿಕ ಅವರನ್ನು ಬಂಧಿಸಲಾಗಿದೆ.

ಈ ನಡುವೆ ಖಲೀಲ್ ಕುಟುಂಬಸ್ಥರು ಸ್ಥಳೀಯ ತನಿಖೆಯ ಮೇಲೆ ವಿಶ್ವಾಸವಿಲ್ಲ ಎಂದು ಹೇಳಿದ್ದು, ಸ್ವತಂತ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ತನಿಖೆ ಪೂರ್ಣಗೊಳ್ಳುವವರೆಗೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹೊಸ ಸುಂಕ ನೀತಿಗೆ ಅಮೆರಿಕದಲ್ಲೇ ಭಾರಿ ವಿರೋಧ: ಭಾರತ ಸೇರಿ 59 ದೇಶಗಳ ಪರ ನಿಂತ 25 ರಾಜ್ಯಗಳು; ಟ್ರಂಪ್ ಸರ್ಕಾರಕ್ಕೆ ಕಾನೂನು ಸಂಕಷ್ಟ..!

West Asia War: ಒಪ್ಪಂದಕ್ಕೆ ಬರ್ತೀರಾ? ಇತಿಹಾಸ ಸೇರ್ತೀರಾ?; ಇರಾನ್‌ಗೆ ಟ್ರಂಪ್ ಲಾಸ್ಟ್ ವಾರ್ನಿಂಗ್..!

"ನನಗೊಬ್ಬ ಪಾಕಿಸ್ತಾನಿ ಹುಡುಗನನ್ನು ಹುಡುಕಿ ಕೊಡಿ" ಸಂಘಿ ಹೇಳಿಕೆ ಬೆನ್ನಲ್ಲೇ ಕಂಗನಾ ರಣಾವತ್ ಹಳೆಯ VIDEO ವೈರಲ್!

ಹೊಸ ಮುಖಗಳ ನಿರೀಕ್ಷೆ ಹುಸಿ; ಡಿಕೆಶಿ ಸಂಪುಟದಲ್ಲಿ ಹಿರಿಯರ ಪ್ರಾಬಲ್ಯ, ಅನುಭವಿಗಳಿಗೆ ಮಣೆ ಹಾಕಿದ ಹೈಕಮಾಂಡ್..!

ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿದ್ದುಗೆ ಯಾವುದೇ ಅಸಮಾಧಾನವಿಲ್ಲ, ತಮಿಳುನಾಡಿಗೆ ಕಾನೂನು ಮೂಲಕವೇ ಉತ್ತರ- ಸಿಎಂ ಡಿಕೆ ಶಿವಕುಮಾರ್