ಬಸನಗೌಡ ದದ್ದಲ್‌ online desk
ರಾಜ್ಯ

ಕೈ ತಪ್ಪಿದ ಸಚಿವ ಸ್ಥಾನ: ವಾಲ್ಮೀಕಿ ನಿಗಮ ಅಧ್ಯಕ್ಷ ಸ್ಥಾನಕ್ಕೆ ಬಸನಗೌಡ ದದ್ದಲ್ ರಾಜೀನಾಮೆ

ರಾಯಚೂರು (Raicur) ಜಿಲ್ಲೆಗೆ ಸಂಪುಟದಲ್ಲಿ ಪ್ರಾತಿನಿಧ್ಯ ಸಿಗದ ಹಿನ್ನೆಲೆಯಲ್ಲಿ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಬಸನಗೌಡ ದದ್ದಲ್‌ ರಾಜೀನಾಮೆ ನೀಡಿದ್ದಾರೆ.

ನವದೆಹಲಿ: ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ಸಿಗದೇ ಇರುವುದಕ್ಕೆ ಆಡಳಿತಾರೂಢ ಕಾಂಗ್ರೆಸ್ ನ ಹಲವು ಶಾಸಕರು ತೀವ್ರ ಅಸಮಾಧಾನ ಹೊರಹಾಕಿದ್ದು, ಹಲವರು ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ರಾಯಚೂರು (Raicur) ಜಿಲ್ಲೆಗೆ ಸಂಪುಟದಲ್ಲಿ ಪ್ರಾತಿನಿಧ್ಯ ಸಿಗದ ಹಿನ್ನೆಲೆಯಲ್ಲಿ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಬಸನಗೌಡ ದದ್ದಲ್‌ ರಾಜೀನಾಮೆ ನೀಡಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಬಸನಗೌಡ ದದ್ದಲ್‌, ಹಿಂದುಳಿದ ಜಿಲ್ಲೆಗಳಾದ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಸಚಿವ ಸ್ಥಾನ ಸಿಗದಿರುವುದು ಬೇಸರ ತಂದಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ನೀತಿ ಆಯೋಗ ಗುರುತಿಸಿರುವ ಮಹತ್ವಾಕಾಂಕ್ಷಿ ಜಿಲ್ಲೆಗಳ ಪಟ್ಟಿಯಲ್ಲಿ ರಾಯಚೂರು ಇದ್ದರೂ, ಸಂಪುಟದಲ್ಲಿ ಜಿಲ್ಲೆಗೆ ಅವಕಾಶ ಸಿಗದಿರುವುದು ತಮ್ಮ ರಾಜೀನಾಮೆ ನಿರ್ಧಾರಕ್ಕೆ ಕಾರಣ ಎಂದು ತಿಳಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆಯ ಬಳಿಕ ರಾಜ್ಯದ ಹಲವು ಭಾಗಗಳಲ್ಲಿ ಅಸಮಾಧಾನ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಬಸನಗೌಡ ದದ್ದಲ್‌ ಅವರ ರಾಜೀನಾಮೆ ರಾಜಕೀಯ ವಲಯದಲ್ಲಿ ಮಹತ್ವ ಪಡೆದುಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಧಾನಿ ಮೋದಿ ವಿಡಿಯೋ ವಿವಾದ, ಮಕ್ಕಳ ಅಶ್ಲೀಲ ಚಿತ್ರ: ಕೊನೆಗೂ ಕ್ಷಮೆಯಾಚಿಸಿದ ಮಾರ್ಕ್ ಜುಕರ್‌ಬರ್ಗ್

ಲೋಕಸಭೆಯಲ್ಲಿ 'ಬ್ಯಾಂಕರ್ ಬುಕ್ಸ್ ಎವಿಡೆನ್ಸ್ ಬಿಲ್', ರಾಜ್ಯಸಭೆಯಲ್ಲಿ 'ಸುಪ್ರೀಂ' ನ್ಯಾಯಾಧೀಶರ ಹೆಚ್ಚಳ ಮಸೂದೆ ಅಂಗೀಕಾರ!

ತೆರಿಗೆ ಪಾವತಿಯಲ್ಲೂ ಅಗ್ರಸ್ಥಾನಕ್ಕೇರಿದ Rishabh Pant; ಈ ವರ್ಷ ರಿಷಭ್ ಪಂತ್ ಕಟ್ಟಿದ ಟ್ಯಾಕ್ಸ್ ಎಷ್ಟು ಗೊತ್ತಾ?

ಬಂಕಿಪುರ, ದಾಟಿಯಾದಲ್ಲಿ ಬಿಜೆಪಿ ಸೋಲು ಉದ್ದೇಶಪೂರ್ವಕ: Akhilesh Yadav

ಮಾಧುರಿ ದೀಕ್ಷಿತ್​​ಗೆ ಜಾಕ್​ಪಾಟ್: ಕೇವಲ 52 ಲಕ್ಷ ರೂ. ಖರೀದಿಸಿದ್ದ ಕಚೇರಿಯನ್ನು ಬರೋಬ್ಬರಿ 4.85 ಕೋಟಿ ರೂ.ಗೆ ಮಾರಾಟ!