ಕರ್ನಾಟಕ ರಾಜ್ಯ ಮುಜರಾಯಿ ದೇವಸ್ಥಾನಗಳ ಅರ್ಚಕರ ನೌಕರರ ಸಂಘದ ವತಿಯಿಂದ ಬುಧವಾರ ಬೆಂಗಳೂರಿನಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರನ್ನು ಸನ್ಮಾನಿಸಲಾಯಿತು. 
ರಾಜ್ಯ

ಸರ್ಕಾರವನ್ನು ಕಾಪಾಡಿ, ಮತ್ತೆ ಅಧಿಕಾರಕ್ಕೆ ತರಲು ಸಹಕರಿಸಿ: ಮುಜರಾಯಿ ದೇವಾಲಯದ ಅರ್ಚಕರಿಗೆ ಸಿಎಂ ಡಿಕೆ ಶಿವಕುಮಾರ್ ಮನವಿ

ನಾವು ನೀಡಿದ ಭರವಸೆಗಳನ್ನು ಈಡೇರಿಸಿದ್ದೇವೆ. ನಿಮ್ಮ ವಿಶ್ವಾಸವನ್ನು ಗಳಿಸಿದ್ದೇವೆ. ಆದ್ದರಿಂದ ನೀವು ಮನೆ ಮತ್ತು ದೇವಾಲಯವನ್ನು ಕಾಪಾಡಿದಂತೆ ಈ ಸರ್ಕಾರವನ್ನೂ ಕಾಪಾಡಬೇಕು.

ಬೆಂಗಳೂರು: "ನೀವು ದೇವಾಲಯವನ್ನು ಹೇಗೆ ಕಾಪಾಡುತ್ತೀರೋ, ಅದೇ ರೀತಿ ಈ ಸರ್ಕಾರವನ್ನೂ ಕಾಪಾಡಿ. ಮತ್ತೆ ಅಧಿಕಾರಕ್ಕೆ ಬರಲು ಸಹಕರಿಸಿ" ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಜರಾಯಿ ಇಲಾಖೆಯ ದೇವಾಲಯಗಳ ಅರ್ಚಕರಿಗೆ ಮನವಿ ಮಾಡಿದ್ದಾರೆ.

ಬೆಂಗಳೂರುದಲ್ಲಿ ಕರ್ನಾಟಕ ರಾಜ್ಯ ಮುಜರಾಯಿ ದೇವಾಲಯಗಳ ಅರ್ಚಕರು, ನೌಕರರ ಸಂಘ ಆಯೋಜಿಸಿದ್ದ ರಾಜ್ಯಮಟ್ಟದ ಸಮಾವೇಶ ಹಾಗೂ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಅರ್ಚಕರು ಪ್ರತಿದಿನ ನೂರಾರು ಭಕ್ತರೊಂದಿಗೆ ಸಂಪರ್ಕದಲ್ಲಿರುತ್ತಾರೆ. ಅವರ ಮಾತಿಗೆ ಸಮಾಜದಲ್ಲಿ ಗೌರವವಿರುವುದರಿಂದ ಸರ್ಕಾರವನ್ನು ಮತ್ತೆ ಅಧಿಕಾರಕ್ಕೆ ತರಲು ಸಹಕರಿಸಬೇಕು ಎಂದು ಮನವಿ ಮಾಡಿದರು.

"ನಾವು ನೀಡಿದ ಭರವಸೆಗಳನ್ನು ಈಡೇರಿಸಿದ್ದೇವೆ. ನಿಮ್ಮ ವಿಶ್ವಾಸವನ್ನು ಗಳಿಸಿದ್ದೇವೆ. ಆದ್ದರಿಂದ ನೀವು ಮನೆ ಮತ್ತು ದೇವಾಲಯವನ್ನು ಕಾಪಾಡಿದಂತೆ ಈ ಸರ್ಕಾರವನ್ನೂ ಕಾಪಾಡಬೇಕು," ಎಂದು ಹೇಳಿದರು.

ಇದೇ ವೇಳೆ ಸಚಿವ ರಾಮಲಿಂಗಾರೆಡ್ಡಿ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದ ಡಿಕೆ ಶಿವಕುಮಾರ್, ಮುಜರಾಯಿ ಇಲಾಖೆಯ ಮೂಲಕ ಅವರು ಅರ್ಚಕರ ವಿಶ್ವಾಸವನ್ನು ಗಳಿಸಿದ್ದಾರೆ ಎಂದು ಹೇಳಿದರು.

ಸಂಘದ ವತಿಯಿಂದ ಮುಜರಾಯಿ ಖಾತೆಯನ್ನು ರಾಮಲಿಂಗಾರೆಡ್ಡಿಗೆ ನೀಡುವಂತೆ ಮನವಿ ಬಂದಿದ್ದು, ಅದಕ್ಕೆ ತಾವು ಸಿದ್ಧರಿರುವುದಾಗಿ ತಿಳಿಸಿದರು.

ಬಳಿಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ, "ಧರ್ಮದ ರಕ್ಷಕರು ಎಂದು ಹೇಳಿಕೊಳ್ಳುವವರು ಅರ್ಚಕರ ಜೀವನದಲ್ಲಿ ಏನು ಬದಲಾವಣೆ ತಂದಿದ್ದಾರೆ? ಕೇವಲ ಶಾಲು ಹೊದ್ದು 'ರಾಮ' ಎಂದು ಹೇಳಿದರೆ ಧರ್ಮದ ರಕ್ಷಕರಾಗುವುದಿಲ್ಲ. ಕಾಂಗ್ರೆಸ್ ನಾಯಕರು ಕೂಡ ಹಿಂದೂಗಳೇ ಎಂದು ತಿರುಗೇಟು ನೀಡಿದರು.

ಇದೇ ವೇಳೆ, ರಾಜ್ಯದ ಸುಮಾರು 34 ಸಾವಿರ ಗ್ರಾಮೀಣ ದೇವಾಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರಿಗಾಗಿ ಮೂರು ತಿಂಗಳ ತರಬೇತಿ ಕಾರ್ಯಕ್ರಮಕ್ಕೆ ಸರ್ಕಾರ ಬೆಂಬಲ ನೀಡಲಿದೆ ಎಂದು ಘೋಷಿಸಿದರು.

ದೇವಾಲಯಗಳ ಸಂಘಗಳು ಹಾಗೂ ಮಠಗಳು ಪಠ್ಯಕ್ರಮ ಸಿದ್ಧಪಡಿಸಿದರೆ ಸರ್ಕಾರ ಅಗತ್ಯ ಸಹಕಾರ ನೀಡುವುದಾಗಿ ಸಿಎಂ ಭರವಸೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹಾರ್ಮುಜ್ ಜಲಸಂಧಿ ಒಪ್ಪಂದ ಸನ್ನಿಹಿತ, ಆದರೆ ಯಾವುದಾದರೊಂದು ದೇಶ ತನ್ನ ನಿಲುವಿನಲ್ಲಿ ಸಡಿಲಿಕೆ ತೋರಿಸಬೇಕು: ಇರಾನ್-ಯುಎಸ್

Mojtaba Khamenei ಎಲ್ಲಿದ್ದಾರೆ? ರಹಸ್ಯ ತಾಣದಲ್ಲಿ ಪರಮೋಚ್ಛ ನಾಯಕ; ಅವರ ಉಪಸ್ಥಿತಿಯೇ ನಮ್ಮ ಧೈರ್ಯ ಎಂದ Iran ಅಧ್ಯಕ್ಷ

ಅಸಮಾಧಾನಿತ ಶಾಸಕರ ಸಮಸ್ಯೆ ಆಲಿಸಿದ್ದೇವೆ, ನಾವೆಲ್ಲಾ ಒಂದು ಕುಟುಂಬ- ಸುರ್ಜೆವಾಲ; ಸಚಿವ ಸ್ಥಾನ ಹೊರತಾಗಿ ಬೇರೆ ಏನು ಕೊಟ್ಟರೂ ಒಪ್ಪಲ್ಲ- ಎಂ ಕೃಷ್ಣಪ್ಪ

Sheikh Hasina: ವಾಪಸ್ ಬಾಂಗ್ಲಾದೇಶಕ್ಕೆ ಹೋಗಲು ನಿರ್ಧರಿಸಿದ್ದೇನೆ; ನನ್ನನ್ನು ಕೊಲ್ಲಲಿ, ಜೈಲಿಗೆ ಹಾಕಲಿ - ಶೇಖ್ ಹಸೀನಾ

ಸಚಿವ ಸ್ಥಾನ ಕೋಟಿ ಕೋಟಿಗೆ ಹರಾಜು: BJPಯಿಂದ ಆಡಿಯೋ ಬಿಡುಗಡೆ; ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ