ಬಂಡಾಯ ಶಾಸಕರ ಬೆಂಬಲಗರಿಂದ ಹಲವು ಕಡೆ ಬಂದ್; ಬೀದಿಗಿಳಿದು ಪ್ರತಿಭಟನೆ 
ರಾಜ್ಯ

ಸಂಪುಟ ವಿಸ್ತರಣೆ ಕಿಚ್ಚು: ಬಂಡಾಯ ಶಾಸಕರ ಬೆಂಬಲಗರಿಂದ ಹಲವು ಕಡೆ ಬಂದ್; ಬೀದಿಗಿಳಿದು ಪ್ರತಿಭಟನೆ!

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಅತೃಪ್ತ ಶಾಸಕರೊಂದಿಗೆ ಸಮನ್ವಯ ಸಭೆ ನಡೆಸಿದ್ದರೂ, ಗುರುವಾರ ಹಲವು ಕಾಂಗ್ರೆಸ್ ಶಾಸಕರ ಬೆಂಬಲಿಗರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.

ಬೆಂಗಳೂರು: ಬಹುನಿರೀಕ್ಷಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಕಳೆದ ಸೋಮವಾರ ವಿಸ್ತರಣೆಯಾಗಿದ್ದು, 19 ಕಾಂಗ್ರೆಸ್ ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ಸಚಿವಾಂಕ್ಷಿಗಳ ಆಕ್ರೋಶ ಭುಗಿಲೆದ್ದಿದ್ದು, ಹಲವು ಕಾಂಗ್ರೆಸ್ ಶಾಸಕರು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಪಕ್ಷದ ಹೈಕಮಾಂಡ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಅತೃಪ್ತ ಶಾಸಕರೊಂದಿಗೆ ಸಮನ್ವಯ ಸಭೆ ನಡೆಸಿದ್ದರೂ, ಗುರುವಾರ ಹಲವು ಕಾಂಗ್ರೆಸ್ ಶಾಸಕರ ಬೆಂಬಲಿಗರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.

ಕೋಲಾರ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಕಾಂಗ್ರೆಸ್ ಶಾಸಕರ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಅವರಿಗೆ ಸ್ಥಾನ ಸಿಗದಿದ್ದಕ್ಕೆ ಅವರ ಬೆಂಬಲಿಗರು ಬಂಗಾರಪೇಟೆ ಪಟ್ಟಣದಲ್ಲಿ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ಬಂಗಾರಪೇಟೆಯಲ್ಲಿ ವಾಣಿಜ್ಯ ಸಂಸ್ಥೆಗಳು ಮತ್ತು ಸಾರ್ವಜನಿಕ ಸಾರಿಗೆಯನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿತ್ತು. ಎಲ್ಲಾ ಅಗತ್ಯ ಸೇವೆ ಹೊರತುಪಡಿಸಿ ಎಲ್ಲಾ ಅಂಗಡಿಗಳು, ಬಸ್ ಮತ್ತು ಆಟೋರಿಕ್ಷಾ ಇರಲಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಂಗಾರಪೇಟೆ ಬಂದ್‌ಗೆ ದಲಿತ ಸಂಘಟನೆಗಳು, ವರ್ತಕರ ಸಂಘ, ಆಟೋ ಚಾಲಕರ ಸಂಘ, ರೈತ ಸಂಘ ಸೇರಿದಂತೆ ಹಲವು ಪ್ರಗತಿಪರ ಸಂಘಟನೆಗಳು ಬೆಂಬಲ ಸೂಚಿಸಿದ್ದವು.

ಬಲಗೈ ಸಮುದಾಯಕ್ಕೆ ಸೇರಿದ ಎಸ್.ಎನ್.ನಾರಾಯಣಸ್ವಾಮಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರೂ ಸಂಪುಟದಲ್ಲಿ ಅವಕಾಶ ನೀಡದೆ ಹೈಕಮಾಂಡ್ ಅನ್ಯಾಯ ಮಾಡಿದೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಹಾವೇರಿಯಲ್ಲೂ ಪ್ರತಿಭಟನೆ

ಇನ್ನು ಹಾವೇರಿ ಜಿಲ್ಲೆಯ, ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ್ ಅವರ ಬೆಂಬಲಿಗರು ಬ್ಯಾಡಗಿ-ಹಾವೇರಿ ಮಠದಿಂದ ಮೈಲಾರ ಮಹಾದೇವಪ್ಪ ವೃತ್ತದವರೆಗೆ ಮೆರವಣಿಗೆ ನಡೆಸಿ, ತಮ್ಮ ಶಾಸಕರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂದು ಒತ್ತಾಯಿಸಿದರು.

ಉತ್ತರ ಕರ್ನಾಟಕದ ಕುರುಬ ಸಮುದಾಯದ ಪ್ರಮುಖ ನಾಯಕರೊಬ್ಬರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ನೀಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ನಿನ್ನೆ ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಬೆಂಬಲಿಗರು ಮೂರು ತಾಲೂಕುಗಳನ್ನ ಬಂದ್ ಮಾಡಿ ಆಕ್ರೋಶ ಹೊರಹಾಕಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯಸಭೆಯಲ್ಲಿ ಖರ್ಗೆ ರಣಕಹಳೆ: ಪ್ರತಿಪಕ್ಷಗಳ ಭಾವನೆಗಳನ್ನು ಅಮಿತ್ ಶಾಗೆ ತಿಳಿಸಿ – ರಿಜಿಜುಗೆ ಸಭಾಪತಿ ರಾಧಾಕೃಷ್ಣನ್ ಸೂಚನೆ

ಪ್ರತಿಭಟನೆ ನಡೆಸಿದಾಕ್ಷಣ ಜೆನ್ ಝೀ ಗಳು ರಾಷ್ಟ್ರವಿರೋಧಿಯಾಗುವುದಿಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

ಕಸಕ್ಕೆ ಎಸೆದಿದ್ದ ಲಾಟರಿ ಟಿಕೆಟ್ ಗೆ ಬಂಪರ್ ಬಹುಮಾನ! ಕೊನೆಗೂ ಹುಡುಕಾಡಿ ಬರೋಬ್ಬರಿ 10.9 ಕೋಟಿ ಗೆದ್ದ ಮಹಿಳೆ!

UK ಮಕ್ಕಳ ಮೇಲಿನ ಅತ್ಯಾಚಾರ, ಕಳ್ಳಸಾಗಣೆ ಪ್ರಕರಣದ ಆರೋಪಿ ಈಗ ಪಿಒಕೆ ಸಂಸದ!

ಬೆಂಗಳೂರು: ಮಧ್ಯರಾತ್ರಿ ಅಪಾರ್ಟ್‌ಮೆಂಟ್‌ ಬಾಲ್ಕನಿಯಿಂದ ಮನಸೋಇಚ್ಛೆ ಗುಂಡು ಹಾರಿಸಿದ ಟೆಕ್ಕಿ; ಬೆಚ್ಚಿಬಿದ್ದ ಜನ! Video