ಬೆಂಗಳೂರು ಸ್ಟಾಕ್ ಮಾರ್ಕೆಟ್ ವಂಚನೆ ಪ್ರಕರಣ 
ರಾಜ್ಯ

ಸ್ಟಾಕ್ ಮಾರ್ಕೆಟ್ ಹೆಸರಲ್ಲಿ ಲಕ್ಷಾಂತರ ರೂ ವಂಚನೆ; ಪ್ರಶ್ನಿಸಿದ ಕನ್ನಡಿಗರಿಗೆ ಅಪಮಾನ, ಕೊನೆಗೂ ಕ್ಷಮೆ ಯಾಚನೆ! Video

ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿಸಿಕೊಂಡು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಬೆಂಗಳೂರು: ಸ್ಟಾಕ್ ಮಾರ್ಕೆಟ್ ಹೆಸರಲ್ಲಿ ಲಕ್ಷಾಂತರ ರೂಪಾಯಿ ವಂಚನೆ ಹಗರಣ ಬೆಳಕಿಗೆ ಬಂದಿದ್ದು, ಇದನ್ನು ಪ್ರಶ್ನಿಸಿದ ಕನ್ನಡಿಗನಿಗೆ ಅದರ ಮಾಲಕಿ ಹೀನಾಮಾನ ಬೈದಿರುವ ಘಟನೆ ವರದಿಯಾಗಿದೆ.

ಹೌದು.. ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆ ಮಾಡುವ ನೆಪದಲ್ಲಿ ಸಾರ್ವಜನಿಕರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಗಂಭೀರ ಆರೋಪವೊಂದು ಕೇಳಿಬಂದಿದೆ.

ಇದರ ಬೆನ್ನಲ್ಲೇ, ವಂಚನೆ ಬಗ್ಗೆ ಪ್ರಶ್ನಿಸಲು ಹೋದ ಹೂಡಿಕೆದಾರರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕನ್ನಡ ಭಾಷೆಯ ಕುರಿತು ಉದ್ಧಟತನ ಪ್ರದರ್ಶಿಸಿದ್ದ ಮಹಿಳೆಯೊಬ್ಬಳು ಕೊನೆಗೆ ಪೊಲೀಸ್ ಠಾಣೆಯ ಮುಂಭಾಗದಲ್ಲೇ ಕನ್ನಡಿಗರ ಕ್ಷಮೆ ಕೋರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿಸಿಕೊಂಡು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಕಂಪನಿಯಿಂದ ವಂಚನೆಗೊಳಗಾದ ಹಲವಾರು ಹೂಡಿಕೆದಾರರು ಒಟ್ಟಾಗಿ ಸಂಸ್ಥೆಯ ಪ್ರತಿನಿಧಿಗಳನ್ನು ಪ್ರಶ್ನಿಸಲು ತೆರಳಿದ್ದರು. ಈ ವೇಳೆ ಅಲ್ಲಿಯೇ ಇದ್ದ ಪ್ರಿಯಾಂಕ ಎಂಬ ಮಹಿಳೆ ಹೂಡಿಕೆದಾರರೊಂದಿಗೆ ತೀವ್ರ ಗಲಾಟೆ ಆರಂಭಿಸಿದ್ದಾಳೆ.

ಕನ್ನಡದಲ್ಲಿ ಮಾತನಾಡು ಎಂದಿದ್ದಕ್ಕೆ ಅವಾಚ್ಯ ನಿಂದನೆ

ಸಂತ್ರಸ್ತರು ಆಕೆಗೆ “ಕನ್ನಡದಲ್ಲಿ ಮಾತನಾಡು” ಎಂದು ಹೇಳಿದ್ದಕ್ಕೆ ಆಕೆ ತೀವ್ರವಾಗಿ ಆಕ್ರೋಶಗೊಂಡಿದ್ದಾಳೆ. ಅಲ್ಲದೆ, “ನನಗೆ ಕನ್ನಡ ಗೊತ್ತಿಲ್ಲ,ಏನ್ ಮಾಡ್ತಿರಾ ಮಾಡ್ಕೊಳಿ” ಎಂದು ಅತ್ಯಂತ ಅಸಭ್ಯ ಹಾಗೂ ಅವಾಚ್ಯ ಪದಗಳನ್ನು ಬಳಸಿ ಕನ್ನಡಿಗರನ್ನು ನಿಂದಿಸಿದ್ದಾಳೆ.

ಮಹಿಳೆಯ ಈ ಉದ್ಧಟತನ ಮತ್ತು ಸ್ಥಳದಲ್ಲಿ ನಡೆಯುತ್ತಿದ್ದ ಗಲಾಟೆಯನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಪೀಣ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಠಾಣೆ ಎದುರು ಕ್ಷಮೆ ಕೋರಿದ ಮಹಿಳೆ

ಕಾನೂನು ಕ್ರಮ ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಹೆದರಿದ ಆರೋಪಿ ಮಹಿಳೆ ಪ್ರಿಯಾಂಕಾ, ಕೊನೆಗೆ ಪೀಣ್ಯ ಪೊಲೀಸ್ ಠಾಣೆಯ ಮುಂಭಾಗದಲ್ಲೇ ಬಹಿರಂಗವಾಗಿ ಕನ್ನಡಿಗರ ಕ್ಷಮೆಯಾಚಿಸಿದ್ದಾಳೆ. “ಮುಂದೆ ಎಂದಿಗೂ ಕನ್ನಡ ಭಾಷೆ ಹಾಗೂ ಕನ್ನಡಿಗರ ವಿಚಾರದಲ್ಲಿ ಇಂತಹ ಅವಾಚ್ಯ ಶಬ್ದಗಳನ್ನು ಬಳಸುವುದಿಲ್ಲ” ಎಂದು ಆಕೆ ತಪ್ಪೊಪ್ಪಿಕೊಂಡಿದ್ದಾಳೆ.

ವಂಚನೆ ಕುರಿತು ತನಿಖೆ ಆರಂಭ

ಮತ್ತೊಂದೆಡೆ, ಸ್ಟಾಕ್ ಮಾರ್ಕೆಟ್ ಹೆಸರಿನಲ್ಲಿ ನಡೆದಿರುವ ಲಕ್ಷಾಂತರ ರೂಪಾಯಿ ವಂಚನೆ ಹಗರಣದ ಕುರಿತು ಪೀಣ್ಯ ಠಾಣಾ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಳ್ಳು ಸುದ್ದಿ ಬಿತ್ತರ ಆರೋಪ: ರಾಷ್ಟ್ರೀಯ ಮಾಧ್ಯಮಗಳಿಗೆ ಉದಯನಿಧಿ ಶಾಕ್, 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ನೋಟಿಸ್..!

'Islamic NATO' ಊಹಾಪೋಹಗಳಿಗೆ ಮತ್ತಷ್ಟು ಬಲ: ಹೊಸ ರಕ್ಷಣಾ ಒಪ್ಪಂದದತ್ತ ಟರ್ಕಿ-ಸೌದಿ-ಪಾಕಿಸ್ತಾನ, ಜಾಗತಿಕ ಮಟ್ಟದಲ್ಲಿ ಹೆಚ್ಚಿದ ಕುತೂಹಲ..!

'ಕಾವೇರಿ ನಮ್ಮ ಜೀವನಾಡಿ, ಈ ವಿಚಾರದಲ್ಲಿ ತುಚ್ಛ ರಾಜಕಾರಣ ಮಾಡಲು ಬಯಸಲ್ಲ: ತಮಿಳುನಾಡು ಸಿಎಂ ವಿಜಯ್..!

'ಭಾರತದ ಕಾನೂನು ಪಾಲಿಸುತ್ತಿದ್ದೀರಾ?': Metaಗೆ ಖಡಕ್ ಕ್ಲಾಸ್‌ ತೆಗೆದುಕೊಂಡ ಕೇಂದ್ರ ಸರ್ಕಾರ, ತೀವ್ರ ವಿಚಾರಣೆ

ಚೆನ್ನೈ ನಟಿ ಕೊಲೆ: ತುಂಡು ತುಂಡಾಗಿ ಸಿಕ್ಕ ದೇಹ, ರುಂಡ ನಾಪತ್ತೆ, ಹಚ್ಚೆಯಿಂದ ಬಯಲಾಯ್ತು ಗುರುತು! ಆರೋಪಿ ಸಿಕ್ಕಿದ್ದೇ ರೋಚಕ!