ಇಕ್ಬಾಲ್ ಅನ್ಸಾರಿ  
ರಾಜ್ಯ

ಯಾರು ಯಾರಿಗೆ ಮೋಸ ಮಾಡಿದ್ದಾರೆ ಎಂಬುದನ್ನ ಜನರ ಮುಂದೆ ಹೇಳ್ತೇನೆ ಬನ್ನಿ: ತಂಗಡಗಿ, ರಾಯರೆಡ್ಡಿ ವಿರುದ್ಧ ಇಕ್ಬಾಲ್ ಅನ್ಸಾರಿ ವಾಗ್ದಾಳಿ

ಚುನಾವಣೆ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಗಾವತಿ ಕ್ಷೇತ್ರಕ್ಕೆ ಬರದಂತೆ ತಡೆಯಲಾಗಿದೆ ಎಂದು ಆರೋಪಿಸಿದ ಅವರು, ನಾನು ನಿಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಬರುವಂತೆ ಕೆಲಸ ಮಾಡಿದ್ದೆ.

ಕೊಪ್ಪಳ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಅಲ್ಲಲ್ಲಿ ಅಸಮಾಧಾನ ಹೊಗೆಯಾಡುತ್ತಿದ್ದು, ಇದೀಗ ಕೊಪ್ಪಳ ಜಿಲ್ಲಾ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.

ಮಾಜಿ ಸಚಿವ ಇಕ್ಬಾಲ್ ಅನ್ಸಾರಿ, ಸಚಿವ ಶಿವರಾಜ್ ತಂಗಡಗಿ, ಸಚಿವ ಬಸವರಾಜ ರಾಯರೆಡ್ಡಿ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ. ಅನ್ಸಾರಿ ಮಾತನಾಡಿದ್ದಾರೆ ಎನ್ನುವ ಆಡಿಯೋ ವೈರಲ್‌ ಆಗುತ್ತಿದ್ದು, ತಮ್ಮ ಸೋಲಿಗೆ ಈ ನಾಯಕರೇ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಇತ್ತೀಚೆಗೆ ಸಚಿವ ಶಿವರಾಜ್ ತಂಗಡಗಿ, ಇಕ್ಬಾಲ್ ಅನ್ಸಾರಿ ಬೇರೆಯವರ ಬಗ್ಗೆ ಮಾತನಾಡುವ ಬದಲು ಜನರ ನಡುವೆ ಹೋಗಿ ಗೆದ್ದು ತೋರಿಸಲಿ ಎಂದು ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಇಕ್ಬಾಲ್ ಅನ್ಸಾರಿ, ಬಹಿರಂಗ ವೇದಿಕೆಗೆ ಚರ್ಚೆಗೆ ಬನ್ನಿ. ಯಾರು ಯಾರಿಗೆ ಮೋಸ ಮಾಡಿದ್ದಾರೆ ಎಂಬುದನ್ನು ಜನರ ಮುಂದೆ ಹೇಳುತ್ತೇನೆ ಎಂದು ಸವಾಲು ಹಾಕಿದ್ದಾರೆ.

ಗಂಗಾವತಿ ಕ್ಷೇತ್ರಕ್ಕೆ ಬಂದು ತಮ್ಮ ವಿರುದ್ಧ ರಾಜಕೀಯ ಮಾಡಲಾಗಿದೆ ಎಂದು ಆರೋಪಿಸಿದರು. ತಮ್ಮ ಸೋಲಿಗೆ ಶಾಸಕ ರಾಘವೇಂದ್ರ ಹಿಟ್ನಾಳ, ಬಸವರಾಜ ರಾಯರಡ್ಡಿ ಹಾಗೂ ಸಚಿವ ಶಿವರಾಜ್ ತಂಗಡಗಿ ಕಾರಣರಾಗಿದ್ದಾರೆ ಎಂದು ದೂರಿದ್ದಾರೆ.

ಚುನಾವಣೆ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಗಾವತಿ ಕ್ಷೇತ್ರಕ್ಕೆ ಬರದಂತೆ ತಡೆಯಲಾಗಿದೆ ಎಂದು ಆರೋಪಿಸಿದ ಅವರು, ನಾನು ನಿಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಬರುವಂತೆ ಕೆಲಸ ಮಾಡಿದ್ದೆ. ಆದರೆ ನೀವು ನನ್ನ ಕ್ಷೇತ್ರದಲ್ಲಿ ವಿವಿಧ ಸಮುದಾಯಗಳ ಮತಗಳು ನನಗೆ ಸಿಗದಂತೆ ಕೆಲಸ ಮಾಡಿದ್ದೀರಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾನು ಕ್ಷೇತ್ರದಲ್ಲಿ ಪ್ರಚಾರ ಮಾಡದಿದ್ದರೆ 58 ಸಾವಿರ ಮತಗಳು ನನಗೆ ಹೇಗೆ ಬಂದವು? ಎಂದು ಪ್ರಶ್ನಿಸಿದ ಅನ್ಸಾರಿ, ಇದು ತಮ್ಮ ಮೊದಲ ಎಪಿಸೋಡ್ ಮಾತ್ರ. ಮುಂದಿನ ದಿನಗಳಲ್ಲಿ ಇನ್ನಷ್ಟು ಮಾಹಿತಿಯನ್ನು ದಾಖಲೆಗಳ ಸಮೇತ ಜನರ ಮುಂದೆ ಬಹಿರಂಗಪಡಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಸತ್ತಿನಲ್ಲಿ ತೀವ್ರ ಗದ್ದಲ: ಅಮಿತ್ ಶಾ ಹೇಳಿಕೆಗೆ ವಿಪಕ್ಷಗಳ ಪಟ್ಟು, ಆಗಸ್ಟ್ 10ರವರೆಗೆ ಲೋಕಸಭೆ-ರಾಜ್ಯಸಭೆ ಕಲಾಪ ಮುಂದೂಡಿಕೆ..!

ಸುಳ್ಳು ಸುದ್ದಿ ಬಿತ್ತರ ಆರೋಪ: NDTV, India Todayಗೆ ಉದಯನಿಧಿ ಶಾಕ್, 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ನೋಟಿಸ್..!

'Islamic NATO' ಊಹಾಪೋಹಗಳಿಗೆ ಮತ್ತಷ್ಟು ಬಲ: ಹೊಸ ರಕ್ಷಣಾ ಒಪ್ಪಂದದತ್ತ ಟರ್ಕಿ-ಸೌದಿ-ಪಾಕಿಸ್ತಾನ, ಜಾಗತಿಕ ಮಟ್ಟದಲ್ಲಿ ಹೆಚ್ಚಿದ ಕುತೂಹಲ..!

ಸ್ಟಾಕ್ ಮಾರ್ಕೆಟ್ ಹೆಸರಲ್ಲಿ ಲಕ್ಷಾಂತರ ರೂ ವಂಚನೆ; ಪ್ರಶ್ನಿಸಿದ ಕನ್ನಡಿಗರಿಗೆ ಅಪಮಾನ, ಕೊನೆಗೂ ಕ್ಷಮೆ ಯಾಚನೆ! Video

'ಕಾವೇರಿ ನಮ್ಮ ಜೀವನಾಡಿ, ಈ ವಿಚಾರದಲ್ಲಿ ತುಚ್ಛ ರಾಜಕಾರಣ ಮಾಡಲು ಬಯಸಲ್ಲ: ತಮಿಳುನಾಡು ಸಿಎಂ ವಿಜಯ್..!