ಬಳ್ಳಾರಿ: ಗಣಿ ನಾಡು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ವೆಂಕಟಗಿರಿ ಗ್ರಾಮದ ಬಳಿ ಶುಕ್ರವಾರ ಮೈನಿಂಗ್ ಲಾರಿಯೊಂದು ಹರಿದು ಇಬ್ಬರು ಪಾದಾಚಾರಿಗಳ ಮೇಲೆ ಹರಿದು ಬಳಿಕ ಪಲ್ಟಿಯಾಗಿದ್ದು, ಭೀಕರ ಅಪಘಾತಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ.
ಮೃತ ಪಾದಾಚಾರಿಗಳನ್ನು ಹೊಸಪೇಟೆ ಮೂಲದ ಕುಮಾರ್(34) ಹಾಗೂ ಮಂಜುನಾಥ(28) ಎಂದು ಗುರುತಿಸಲಾಗಿದೆ.
ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ಹಿಂಬದಿಯಿಂದ ಬಂದ ಲಾರಿ ಇಬ್ಬರಿಗೂ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರೂ ಸಾವಿಗೀಡಾಗಿದ್ದಾರೆ.
ಲಾರಿ ಚಾಲಕನ ಅಜಾಗರೂಕತೆಯಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಈ ಸಂಬಂಧ ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.