ಬೆಂಗಳೂರು ಹೊಟೆಲ್ ಗಳ ಮೇಲೆ ಅಧಿಕಾರಿಗಳ ದಾಳಿ 
ರಾಜ್ಯ

ಅವಧಿ ಮೀರಿದ ಆಹಾರ, ಬೂಸ್ಟ್ ಹಿಡಿದ ತರಕಾರಿ; ಬೆಂಗಳೂರಿನ ಸ್ಟಾರ್ ಹೋಟೆಲ್‌ಗಳ ವಿರುದ್ಧ ಕ್ರಮ

ಆಹಾರ ಪದಾರ್ಥಗಳ ಮೇಲೆ ಸರಿಯಾದ ಲೇಬಲ್ ಇಲ್ಲದಿರುವುದು, ಅವಧಿ ಮೀರಿದ ಆಹಾರ ಉತ್ಪನ್ನಗಳ ಸಂಗ್ರಹ, ಅನೈರ್ಮಲ್ಯಕರ ರೀತಿಯಲ್ಲಿ ಆಹಾರ ಸಂಗ್ರಹಣೆ ಮತ್ತು ನಿರ್ವಹಣೆ, ತರಕಾರಿಗಳಲ್ಲಿ ಶಿಲೀಂಧ್ರ ಕಾಣಿಸಿಕೊಂಡಿರುವುದು..

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗವು ನಡೆಸಿದ ವಿಶೇಷ ತಪಾಸಣೆ ವೇಳೆ ಹಲವು ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆಗಳು ಪತ್ತೆಯಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು 3-ಸ್ಟಾರ್ ಮತ್ತು 5-ಸ್ಟಾರ್ ಹೋಟೆಲ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಮೂಲಗಳ ಪ್ರಕಾರ, 30 ತಂಡಗಳು 26 ಹೋಟೆಲ್‌ಗಳಲ್ಲಿ ತಪಾಸಣೆ ನಡೆಸಿದ್ದು, ಪ್ರಯೋಗಾಲಯ ಪರೀಕ್ಷೆಗಾಗಿ 35 ಆಹಾರ ಮಾದರಿಗಳನ್ನು ಸಂಗ್ರಹಿಸಿವೆ.

ಈ ವೇಳೆ ಆಹಾರ ಪದಾರ್ಥಗಳ ಮೇಲೆ ಸರಿಯಾದ ಲೇಬಲ್ ಇಲ್ಲದಿರುವುದು, ಅವಧಿ ಮೀರಿದ ಆಹಾರ ಉತ್ಪನ್ನಗಳ ಸಂಗ್ರಹ, ಅನೈರ್ಮಲ್ಯಕರ ರೀತಿಯಲ್ಲಿ ಆಹಾರ ಸಂಗ್ರಹಣೆ ಮತ್ತು ನಿರ್ವಹಣೆ, ತರಕಾರಿಗಳಲ್ಲಿ ಶಿಲೀಂಧ್ರ ಕಾಣಿಸಿಕೊಂಡಿರುವುದು ಹಾಗೂ ಸಸ್ಯಾಹಾರಿ ಮತ್ತು ಮಾಂಸಾಹಾರಿ ಆಹಾರ ಪದಾರ್ಥಗಳನ್ನು ಸಮರ್ಪಕವಾಗಿ ಪ್ರತ್ಯೇಕಿಸದಿರುವುದು ಸೇರಿದಂತೆ ಹಲವು ಲೋಪಗಳು ಅಧಿಕಾರಿಗಳ ಗಮನಕ್ಕೆ ಬಂದಿವೆ.

ತಪಾಸಣೆ ವೇಳೆ ಎಫ್‌ಎಸ್‌ಎಸ್‌ಎಐ ನಿಗದಿಪಡಿಸಿರುವ ಲೇಬಲಿಂಗ್ ನಿಯಮಗಳನ್ನು ಪಾಲಿಸದಿರುವುದು, ಆಹಾರ ಉತ್ಪನ್ನಗಳ ಮೇಲೆ ತಪ್ಪಾದ ಲೇಬಲ್ ಅಂಟಿಸಿರುವುದು ಮತ್ತು ತಪ್ಪು ಹೆಸರಿನಲ್ಲಿ ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವುದು, ಅವಧಿ ಮೀರಿದ ಆಹಾರ ಪದಾರ್ಥಗಳನ್ನು ಸಂಗ್ರಹಿಸಿರುವುದು ಹಾಗೂ ಅನೈರ್ಮಲ್ಯಕರ ರೀತಿಯಲ್ಲಿ ಆಹಾರವನ್ನು ನಿರ್ವಹಿಸಿ ಸಂಗ್ರಹಿಸಿರುವುದು ಸೇರಿದಂತೆ ಹಲವು ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆಗಳು ಪತ್ತೆಯಾಗಿವೆ.

ನಿಯಮ ಉಲ್ಲಂಘನೆ ಕಂಡುಬಂದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಆಹಾರ ಉದ್ಯಮ ನಿರ್ವಾಹಕರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, 2006ರ ನಿಬಂಧನೆಗಳ ಅಡಿಯಲ್ಲಿ ತೀರ್ಪು ನೀಡುವ ಅಧಿಕಾರಿಯ ಮುಂದೆ ಮುಂದಿನ ಕಾನೂನು ಕ್ರಮದ ವಿಚಾರಣೆ ಆರಂಭಿಸಲಾಗುವುದು ಎಂದು ಇಲಾಖೆ ತಿಳಿಸಿದೆ.

ತಪಾಸಣೆ ವೇಳೆ ಸಂಗ್ರಹಿಸಲಾದ ಆಹಾರ ಮಾದರಿಗಳಲ್ಲಿ ಟೀ ಪುಡಿ, ಕೋಳಿ ಮಾಂಸ, ಮಟನ್, ಮೀನು, ಖಾದ್ಯ ತೈಲ, ಮೆಣಸಿನ ಪುಡಿ, ಅರಿಶಿನ ಪುಡಿ, ಟೊಮೆಟೊ ಸಾಸ್, ನಿಂಬೆ ರಸ, ಚೀಸ್, ಪಾಪಡ್, ಗೋಡಂಬಿ, ಶುಂಠಿ, ಕಾಳುಮೆಣಸಿನ ಪುಡಿ, ಮಸಾಲೆ ಪುಡಿ ಮತ್ತು ಹಾಲು ಸೇರಿದಂತೆ ಹಲವು ಆಹಾರ ಉತ್ಪನ್ನಗಳು ಸೇರಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

FCRA ಅಲ್ಲ.. ಸರ್ಕಾರದ ಅಜೆಂಡಾದಲ್ಲಿದೆ ಈ ನಾಲ್ಕು ಪ್ರಮುಖ ಮಸೂದೆಗಳು!

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: KSRTC ಚಾಲಕ ಹಾಗೂ ಕಂಡಕ್ಟರ್ ಸಾವು

ಕುನ್ವರ್ ಅಮರ್ ಗೆ ಕೈ ಕೊಟ್ಟು, ಗುಟ್ಟಾಗಿ ಖ್ಯಾತ ಕ್ರಿಕೆಟ್ ಆಟಗಾರನ ಕೈ ಹಿಡಿದ ನಟಿ ಚಾರ್ಲಿ ಚೌಹಾಣ್!

ರಷ್ಯಾ ತೈಲ ಖರೀದಿಗೆ ನಿರ್ಬಂಧ ಮಸೂದೆಗೆ ಅಮೆರಿಕ ಸೆನೆಟ್ ಅಸ್ತು: ಭಾರತ ಸೇರಿ 5 ದೇಶಗಳ ಮೇಲೆ ಶೇ.100ರಷ್ಟು ಸುಂಕ ಹೇರಿಕೆ ಶಾಕ್

ಮನೆಯೊಳಗೇ ನಿಗೂಢ ಸಾವು, ವರ್ಷ ಕಳೆದರೂ ಸುಳಿವೇ ಇಲ್ಲ; ಬೆಂಗಳೂರಿನಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆ