ಕೆಎಸ್‌ಆರ್‌ಟಿಸಿ Online Desk
ರಾಜ್ಯ

KSRTC ಪ್ರಯಾಣಿಕರಿಗೆ ಗುಡ್ ನ್ಯೂಸ್; ಈ ಊರಿಗೆ ಹೋಗುವವರಿಗೆ ಶೇ.10 ರಷ್ಟು ಡಿಸ್ಕೌಂಟ್!

ಕೆಎಸ್‌ಆರ್‌ಟಿಸಿ ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ: ಬೆಂಗಳೂರಿನಿಂದ ಈ ಊರಿಗೆ ಹೋಗುವವರಿಗೆ ಬಸ್ ಟಿಕೆಟ್ ದರದಲ್ಲಿ ಶೇ.10 ರಷ್ಟು ರಿಯಾಯಿತಿ! 90 ಹೆಚ್ಚುವರಿ ವಿಶೇಷ ಬಸ್.

ಬೆಂಗಳೂರು: ಇನ್ನೇನು ಹಬ್ಬದ ಸೀಸನ್ ಪ್ರಾರಂಭವಾಗುತ್ತಿದೆ. ಹಾಗಾಗಿ, ಕೆಲಸದ ನಿಮಿತ್ತ ಸಿಲಿಕನ್ ಸಿಟಿ ಬೆಂಗಳೂರಿಗೆ ಬಂದವರಲ್ಲಿ ಬಹುತೇಕರು ಹಬ್ಬಕ್ಕೆ ಊರಿಗೆ ಹೋಗುವ ಪ್ಲಾನ್ ಮಾಡುತ್ತಿರುತ್ತಾರೆ. ಅಂತಹ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ವಿಶೇಷ ರಿಯಾಯಿತಿ ಹಾಗೂ ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನು ಪ್ರಕಟಿಸಿದೆ. ಆ ಕುರಿತ ವರದಿ ಇಲ್ಲಿದೆ:

KSRTCಯಲ್ಲಿ ಶೇ.10 ವರೆಗೆ ಡಿಸ್ಕೌಂಟ್!

ಹೌದು, ಓಣಂ ಹಬ್ಬ ಮತ್ತು ಸಾಲು ಸಾಲು ರಜೆಗಳ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಕೇರಳದ ವಿವಿಧ ಭಾಗಗಳಿಗೆ ಪ್ರಯಾಣಿಸುವವರಿಗಾಗಿ KSRTC ವಿಶೇಷ ರಿಯಾಯಿತಿ ಹಾಗೂ ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನು ಪ್ರಕಟಿಸಿದೆ. ಹಾಗಾಗಿ, ಆನ್‌ಲೈನ್‌ನಲ್ಲಿ ಮುಂಗಡವಾಗಿ ಟಿಕೆಟ್ ಬುಕ್ ಮಾಡುವ ಪ್ರಯಾಣಿಕರಿಗೆ ಶೇ.10ರ ವರೆಗೆ ರಿಯಾಯಿತಿ ಸಿಗಲಿದೆ. ಅದರಂತೆ,

  • ಗ್ರೂಪ್ ಬುಕಿಂಗ್ ಡಿಸ್ಕೌಂಟ್: ಒಂದೇ ಟಿಕೆಟ್‌ನಲ್ಲಿ 4 ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರಿಗೆ ಒಟ್ಟಿಗೆ ಸೀಟು ಕಾಯ್ದಿರಿಸಿದರೆ ಮೂಲ ದರದಲ್ಲಿ ಶೇ.5 ರಷ್ಟು ರಿಯಾಯಿತಿ ಸಿಗಲಿದೆ.

  • ರಿಟರ್ನ್ ಜರ್ನಿ ಡಿಸ್ಕೌಂಟ್: ಹೋಗುವ ಮತ್ತು ಬರುವ ಎರಡು ಕಡೆಯ ಟಿಕೆಟ್‌ಗಳನ್ನು ಒಟ್ಟಿಗೇ ಬುಕ್ ಮಾಡಿದರೆ, ಬರುವ ಪ್ರಯಾಣದ ಟಿಕೆಟ್ ದರದ ಮೇಲೆ ಶೇ.10 ರಷ್ಟು ಡಿಸ್ಕೌಂಟ್ ದೊರೆಯಲಿದೆ.

90 ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ

ಮುಂದುವರೆದು, ಬೆಂಗಳೂರಿನಲ್ಲಿ ನೆಲೆಸಿರುವ ಕೇರಳ ಮೂಲದ ಪ್ರಯಾಣಿಕರು ಓಣಂ ಹಬ್ಬಕ್ಕೆ ತೆರಳಲು ಕೆಎಸ್‌ಆರ್‌ಟಿಸಿ, ಆಗಸ್ಟ್ 21 ರಿಂದ ಆಗಸ್ಟ್ 25 ರವರೆಗೆ ಬೆಂಗಳೂರಿನಿಂದ ಕೇರಳದ ವಿವಿಧ ಭಾಗಗಳಿಗೆ ವಿಶೇಷ ಬಸ್‌ಗಳು ಸಂಚರಿಸಲಿವೆ. ಇದರೊಂದಿಗೆ, ಹಬ್ಬ ಮುಗಿಸಿ ಪ್ರಯಾಣಿಕರು ಮರಳಿ ಬರಲು ಆಗಸ್ಟ್ 30 ರಂದು ಕೇರಳದ ವಿವಿಧೆಡೆಯಿಂದ ಬೆಂಗಳೂರಿಗೆ ವಿಶೇಷ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ.

ಟಿಕೆಟ್ ಬುಕ್ ಮಾಡುವುದು ಹೇಗೆ?

ಸಾರ್ವಜನಿಕರು ಅಧಿಕೃತ ವೆಬ್‌ಸೈಟ್ ಆದ KSRTC ಕನ್ಸೇಷನ್ ಮತ್ತು ಬುಕಿಂಗ್ ಪೋರ್ಟಲ್ ಅಥವಾ KSRTC ಅಧಿಕೃತ ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಮುಂಗಡವಾಗಿ ಸೀಟುಗಳನ್ನು ಕಾಯ್ದಿರಿಸಬಹುದು. ಇದಲ್ಲದೆ ಕೇರಳದ ಪ್ರಮುಖ ನಗರಗಳಲ್ಲಿರುವ ಹಾಗೂ ಬೆಂಗಳೂರಿನ ಮೆಜೆಸ್ಟಿಕ್, ಶಾಂತಿನಗರದಂತಹ ಪ್ರಮುಖ KSRTC ಟಿಕೆಟ್ ಕೌಂಟರ್‌ಗಳಲ್ಲಿಯು ನೇರವಾಗಿ ಟಿಕೆಟ್ ಪಡೆಯಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಿಮ್ಮ ಮೇಲೆ ನಮಗೆ ನಂಬಿಕೆ ಇದೆ, ದೇಶಕ್ಕೆ ನಿಮ್ಮ ಅವಶ್ಯಕತೆ ಇದೆ: CJP ಪ್ರತಿಭಟನೆ ನಂತರ ಮೊದಲ ಬಾರಿ Gen Z ಉದ್ದೇಶಿಸಿ ಮೋದಿ ಭಾಷಣ

ಶ್ರೀಲಂಕಾ ಪ್ರವಾಸ: ಜೈಸ್ವಾಲ್ ಡಕೌಟ್, ಶತಕ ಸಿಡಿಸಿ ಭಾರತಕ್ಕೆ ಆಸರೆಯಾದ ಕನ್ನಡಿಗ ದೇವದತ್ ಪಡಿಕ್ಕಲ್

ಮೈಸೂರು: ʻಡಾಲಿʼ ಕಿರುಕುಳಕ್ಕೆ ಬೇಸತ್ತ ಮಹಿಳೆ ಆತ್ಮಹತ್ಯೆಗೆ ಶರಣು; ಡೆತ್‌ನೋಟ್‌ ಪತ್ತೆ!

ದೆಹಲಿ: ಪೊಲೀಸ್ ಅಧಿಕಾರಿ ಮಗ ಕುಡಿದು ಚಲಾಯಿಸುತ್ತಿದ್ದ ಮರ್ಸಿಡಿಸ್ ಕಾರು, ಮತ್ತೊಂದು ಕಾರಿಗೆ ಡಿಕ್ಕಿ; ವೃದ್ಧೆ ಸಾವು

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿ ನಾಪತ್ತೆ: ಡ್ರೋನ್ ಮೂಲಕ ಶೋಧ ಕಾರ್ಯ; ಹಲವು ಅನುಮಾನ