ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರು 
ರಾಜ್ಯ

ನೂತನ ಸಚಿವರಿಗೆ ಸರ್ಕಾರಿ ನಿವಾಸ, ಕಾರು ಹಂಚಿಕೆ ಮಾಡಿ ಆದೇಶ; ನಿಮ್ಮ ಜಿಲ್ಲೆಯ ಮಿನಿಸ್ಟರ್ ಮನೆ ಎಲ್ಲಿದೆ? ಇಲ್ಲಿದೆ ವಿವರ

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು(ಡಿಪಿಎಆರ್‌) ಸಚಿವರುಗಳು ಹಾಗೂ ಜನಪ್ರತಿನಿಧಿಗಳಿಗೆ ಅಧಿಕೃತ ಸರ್ಕಾರಿ ವಾಹನಗಳನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಿದೆ.

ಬೆಂಗಳೂರು: ರಾಜ್ಯ ಸರ್ಕಾರ, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಹಾಗೂ ಪ್ರಮುಖ 10 ಸಚಿವರಿಗೆ ಬೆಂಗಳೂರು ನಗರದಲ್ಲಿ ಅಧಿಕೃತ ಸರ್ಕಾರಿ ನಿವಾಸ(ಬಂಗಲೆ) ಹಾಗೂ 19 ನೂತನ ಸಚಿವರಿಗೆ ಅಧಿಕೃತ ಸರ್ಕಾರಿ ಕಾರು ಹಂಚಿಕೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು(ಡಿಪಿಎಆರ್‌) ಸಚಿವರುಗಳು ಹಾಗೂ ಜನಪ್ರತಿನಿಧಿಗಳಿಗೆ ಅಧಿಕೃತ ಸರ್ಕಾರಿ ವಾಹನಗಳನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಿದೆ. ಕುಮಾರ ಕೃಪಾ ಅತಿಥಿ ಗೃಹದ ವಿಶೇಷಾಧಿಕಾರಿಗಳಿಗೆ ಈ ಕುರಿತು ನಿರ್ದೇಶನ ನೀಡಲಾಗಿದೆ.

ಬೆಂಗಳೂರಿನ ಸದಾಶಿವನಗರ, ಸ್ಯಾಂಕಿ ರಸ್ತೆ ಹಾಗೂ ಜಯಮಹಲ್ ಬಡಾವಣೆ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ 10 ಸಚಿವರಿಗೆ ಸರ್ಕಾರಿ ಅಧಿಕೃತ ನಿವಾಸಗಳನ್ನು ಹಂಚಿಕೆ ಮಾಡಲಾಗಿದೆ.

ಸಚಿವರಿಗೆ ಸರ್ಕಾರಿ ನಿವಾಸ ಹಂಚಿಕೆ

ಡಾ. ಜಿ. ಪರಮೇಶ್ವರ (ಉಪಮುಖ್ಯಮಂತ್ರಿಗಳು) - ಸದಾಶಿವನಗರ, RMV 2ನೇ ಹಂತ, ಬೆಂಗಳೂರು

ಎನ್. ಚೆಲುವರಾಯಸ್ವಾಮಿ - ನಂ.3, ಕುಮಾರ ಕೃಷ್ಣ ದಕ್ಷಿಣಿ, ಬೆಂಗಳೂರು

ಬಿ.ಝೆಡ್. ಜಮೀರ್ ಅಹಮದ್ ಖಾನ್ - ನಂ.30, ಸ್ಯಾಂಕಿ ರಸ್ತೆ, ಬೆಂಗಳೂರು

ಶಿವರಾಜ್ ಎಸ್. ತಂಗಡಗಿ - ನಂ. ಬಿ-2, ಜಯಮಹಲ್, ಜಯಮಹಲ್ ಬಡಾವಣೆ, ಬೆಂಗಳೂರು

ಲಕ್ಷ್ಮಣ ಸವದಿ - ನಂ.3, ಜಯಮಹಲ್, ಜಯಮಹಲ್ ಬಡಾವಣೆ, ಬೆಂಗಳೂರು

ಸಂತೋಷ್ ಲಾಡ್ - ನಂ.3, ಸದಾ ಸಚಿವರ ನಿವಾಸ, ಸ್ಯಾಂಕಿ ರಸ್ತೆ, ಬೆಂಗಳೂರು

ಪಿ.ಎಂ. ನರೇಂದ್ರ ಸ್ವಾಮಿ - ನಂ.5, ಜಯಮಹಲ್, ಜಯಮಹಲ್ ಬಡಾವಣೆ, ಬೆಂಗಳೂರು

ಬೈರತಿ ಸುರೇಶ್ - ನಂ.2, ಕೇಶವ್ ರಸ್ತೆ, ಬೆಂಗಳೂರು

ಕೆ.ಎನ್. ಶಿವಲಿಂಗೇಗೌಡ - ನಂ.1, ಜಯಮಹಲ್, ಜಯಮಹಲ್ ಬಡಾವಣೆ, ಬೆಂಗಳೂರು

ಬಸವಂತಪ್ಪ - ನಂ.ಬಿ-6, ಜಯಮಹಲ್, ಜಯಮಹಲ್ ಬಡಾವಣೆ, ಬೆಂಗಳೂರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾವು ನಮ್ಮ ರೈತರನ್ನು ರಕ್ಷಿಸಬೇಕು, ನ್ಯಾಯಾಲಯದ ತೀರ್ಪನ್ನೂ ಪಾಲಿಸಬೇಕು: CWRC ಆದೇಶಕ್ಕೆ ಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಇದು ಮುದಿ ಗುಳ್ಳೆ ನರಿ: ಬಾಲಿವುಡ್ ನಟ ನಸೀರುದ್ದೀನ್ ಶಾ ವಿರುದ್ಧ BJP ಸಂಸದೆ ಕಂಗನಾ ಕಿಡಿ!

ಈ ವಯಸ್ಸಲ್ಲಿ ಡ್ರಾಮಾ ಎಲ್ಲ ಬೇಕಾ? ಮುಜುಗರದ ಸಂಗತಿ: ವಿಜಯ್ ಪತ್ನಿ ಸಂಗೀತಾ, ಉದಯನಿಧಿ ವಿವಾದದ ಬಳಿಕ ತ್ರಿಶಾ ಪೋಸ್ಟ್​ ವೈರಲ್​!

'ನಾನೀಗ ಪೆಟ್ಟು ತಿಂದ ಹುಲಿಯಂತಾಗಿದ್ದೇನೆ; ನೋಡ್ತಿರಿ ನೀವು...': ಖಾತೆ ಬಗ್ಗೆ ಸಚಿವ ಬಿ.ನಾಗೇಂದ್ರ ಸ್ಫೋಟಕ ಹೇಳಿಕೆ - Video

ನಾನು ಸೇರಿದಂತೆ ಎಲ್ಲರೂ ಸರ್ಕಾರಿ ನೌಕರರೇ; ಭ್ರಷ್ಟಾಚಾರಕ್ಕೆ ಅವಕಾಶ ಇಲ್ಲ, ಡಬಲ್ ಬಿಲ್ ಮಾಡುವವರನ್ನು ಮಟ್ಟ ಹಾಕುವೆ: CM ಡಿಕೆಶಿ ಎಚ್ಚರಿಕೆ