K-SETಗೆ ಅರ್ಜಿ ಆಹ್ವಾನಿಸಿದ KEA Online Desk
ರಾಜ್ಯ

ಪ್ರಾಧ್ಯಾಪಕರಾಗುವ ಕನಸು ಕಂಡವರಿಗೆ ಗುಡ್ ನ್ಯೂಸ್; K-SETಗೆ ಅರ್ಜಿ ಆಹ್ವಾನಿಸಿದ KEA

ಸರ್ಕಾರಿ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗುವ ಕನಸು ಕಾಣುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ. ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (K-SET)ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇಂದಿನಿಂದ ಅರ್ಜಿ ಆಹ್ವಾನಿಸಿದೆ. ಆ ಕುರಿತ ವರದಿ ಇಲ್ಲಿದೆ:

ಬೆಂಗಳೂರು: ಸರ್ಕಾರಿ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗುವ ಕನಸು ಕಾಣುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ. ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (K-SET)ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇಂದಿನಿಂದ ಅರ್ಜಿ ಆಹ್ವಾನಿಸಿದೆ. ಆ ಕುರಿತ ವರದಿ ಇಲ್ಲಿದೆ:

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭ: ಆಗಸ್ಟ್ 10, 2026

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 05, 2026

  • ಅರ್ಜಿ ಶುಲ್ಕ ಪಾವತಿಸಲು ಕಡೆ ದಿನ: ಸೆಪ್ಟೆಂಬರ್ 06, 2026 (ಕೊನೆಯ ದಿನದವರೆಗೆ ಕಾಯದೇ ಬೇಗನೇ ಅರ್ಜಿ ಸಲ್ಲಿಸಿ)

  • ಪ್ರವೇಶ ಪತ್ರ ಬಿಡುಗಡೆ: ಅಕ್ಟೋಬರ್ 01, 2026 ರಿಂದ

  • ಪರೀಕ್ಷಾ ದಿನಾಂಕ: ಅಕ್ಟೋಬರ್ 11, 2026 (ಭಾನುವಾರ)

ಅರ್ಹತೆ:

  • ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಯುಜಿಸಿ (UGC) ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ 55 ಅಂಕಗಳೊಂದಿಗೆ (SC/ST/OBC, ವಿಶೇಷಚೇತನ ಹಾಗೂ ತೃತೀಯ ಲಿಂಗಿ ಅಭ್ಯರ್ಥಿಗಳಿಗೆ ಕನಿಷ್ಠ 50)ಸ್ನಾತಕೋತ್ತರ ಪದವಿ ಪಡೆದಿರಬೇಕು. ಜೊತೆಗೆ ಪ್ರಸ್ತುತ ಸ್ನಾತಕೋತ್ತರ ಪದವಿಯಲ್ಲಿರುವ ವಿದ್ಯಾರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು.

  • ವಯೋಮಿತಿ: ಕೆ-ಸೆಟ್ ಪರೀಕ್ಷೆ ಬರೆಯಲು ಯಾವುದೇ ಗರಿಷ್ಠ ವಯೋಮಿತಿ ಇರುವುದಿಲ್ಲ.

  • ಒಟ್ಟು ವಿಷಯಗಳು: ಈ ಬಾರಿ ಒಟ್ಟು 37 ವಿವಿಧ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ.

ಅರ್ಜಿ ಶುಲ್ಕ:

ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 750 ರೂಪಾಯಿ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1, ವಿಶೇಷ ಚೇತನ ಮತ್ತು ತೃತೀಯ ಲಿಂಗಿ ಅಭ್ಯರ್ಥಿಗಳಿಗೆ 500 ರೂಪಾಯಿ.

ಅರ್ಜಿ ಸಲ್ಲಿಸುವುದು ಹೇಗೆ?

  • ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮೊದಲು K-SET ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು.

  • ಅಲ್ಲಿ New Registration ಲಿಂಕ್ ಮೇಲೆ ಕ್ಲಿಕ್ ಮಾಡಿ ಹೆಸರು ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ ನೀಡಿ ನೋಂದಣಿ ಮಾಡಿಕೊಳ್ಳಬೇಕು.

  • ನಂತರ ಲಾಗಿನ್ ಆಗಿ ಶೈಕ್ಷಣಿಕ ವಿವರ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು.

  • ಕೊನೆಯಲ್ಲಿ ಶುಲ್ಕ ಪಾವತಿಸಿ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಿ.

ಅಧಿಸೂಚನೆ ಲಿಂಕ್:

https://cetonline.karnataka.gov.in/keawebentry456/kset2026/KSET_NOTI_KAN_10082026kannada.pdf

ಅರ್ಜಿ ಸಲ್ಲಿಸುವ ಲಿಂಕ್:

https://kearecruitment.karnataka.gov.in/kset2026/Account/Login

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Parliament Monsoon Session: ರಾಹುಲ್ ವಿರುದ್ಧ ಆಕ್ರೋಶ; ಸಂಸತ್ ಆವರಣದಲ್ಲಿ NDA ಸಂಸದರ ಬೃಹತ್ ಪ್ರತಿಭಟನಾ ಮೆರವಣಿಗೆ, ಲೋಕಸಭೆ ಕಲಾಪ ಮಧ್ಯಾಹ್ನ 2ಕ್ಕೆ ಮುಂದೂಡಿಕೆ..!

ಪಶ್ಚಿಮ ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; ಮೃತರ ಸಂಖ್ಯೆ 111ಕ್ಕೆ ಏರಿಕೆ, ಹಲವರಿಗೆ ಗಾಯ

ಬಿಲಿಯನೇರ್ Gautam Adaniಗೆ ಬಿಗ್ ರಿಲೀಫ್: ಎಲ್ಲಾ ಕ್ರಿಮಿನಲ್ ಪ್ರಕರಣಗಳ ವಜಾಗೊಳಿಸಿದ ಅಮೆರಿಕಾ ನ್ಯಾಯಾಲಯ..!

ಬಿಡದಿ ಹೋರಾಟ ಅರ್ಧಕ್ಕೆ ಸ್ಥಗಿತ; ‘ರೈತರ ನ್ಯಾಯಕ್ಕಾಗಿ ತಾರ್ಕಿಕ ಅಂತ್ಯದವರೆಗೆ ಹೋರಾಟ’ ಎಂದ ದೇವೇಗೌಡ, ಆ.18ಕ್ಕೆ ವಿಧಾನಸೌಧ ಮುತ್ತಿಗೆ..!

ಬರ ಪರಿಹಾರಕ್ಕೆ ಕೇಂದ್ರದಿಂದ ಇನ್ನೂ ಉತ್ತರ ಬಂದಿಲ್ಲ; ಅಗತ್ಯವಿದ್ದರೆ ನ್ಯಾಯಾಲಯದ ಮೊರೆ: DCM ಡಾ. ಪರಮೇಶ್ವರ್‌