ದಕ್ಷಿಣ ಕನ್ನಡ ಡಿಸಿ  
ರಾಜ್ಯ

ದಕ್ಷಿಣ ಕನ್ನಡ ಡಿಸಿ ಅಧಿಕೃತ ನಿವಾಸದ ನಾಮಫಲಕದಲ್ಲಿ ಪತ್ನಿಯ ಹೆಸರು: ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು

ಅಧಿಕೃತ ನಿವಾಸವು ಹುದ್ದೆಯ ಆಧಾರದ ಮೇಲೆ ಹಂಚಿಕೆಯಾಗುವುದರಿಂದ, ನಾಮಫಲಕದಲ್ಲಿ ಅಧಿಕಾರಿಯ ಹೆಸರು ಮತ್ತು ಅವರು ಹೊಂದಿರುವ ಹುದ್ದೆ ಮಾತ್ರ ಇರುವುದು ಆಡಳಿತಾತ್ಮಕ ಶಿಷ್ಟಾಚಾರ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಅಧಿಕೃತ ಸರ್ಕಾರಿ ನಿವಾಸದ ನಾಮಫಲಕದಲ್ಲಿ ಪತ್ನಿಯ ಹೆಸರನ್ನು ಪ್ರದರ್ಶಿಸಲಾಗಿದ್ದು, ಇದಕ್ಕೆ ಸರ್ಕಾರಿ ಅನುದಾನ ಬಳಸಲಾಗಿದೆಯೇ ಎಂಬ ಬಗ್ಗೆ ತನಿಖೆ ನಡೆಸುವಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸದಸ್ಯೆ ಪ್ರತಿಭಾ ಕುಳಾಯಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಿದ್ದಾರೆ.

ಅಧಿಕೃತ ನಿವಾಸವು ಹುದ್ದೆಯ ಆಧಾರದ ಮೇಲೆ ಹಂಚಿಕೆಯಾಗುವುದರಿಂದ, ನಾಮಫಲಕದಲ್ಲಿ ಅಧಿಕಾರಿಯ ಹೆಸರು ಮತ್ತು ಅವರು ಹೊಂದಿರುವ ಹುದ್ದೆ ಮಾತ್ರ ಇರುವುದು ಆಡಳಿತಾತ್ಮಕ ಶಿಷ್ಟಾಚಾರ. ಆದರೆ ಇಲ್ಲಿ ಸಂಗಾತಿಯ ಹೆಸರು ಸೇರಿಸಿರುವುದು ಸರ್ಕಾರಿ ನಿಯಮಾವಳಿಗಳಿಗೆ ವಿರುದ್ಧವಾಗಿದೆ ಎಂದು ಪ್ರತಿಭಾ ಕುಳಾಯಿ ಪತ್ರದಲ್ಲಿ ಉಲ್ಲೇಖಿಸಿ ಆರೋಪಿಸಿದ್ದಾರೆ.

ಒಂದು ವೇಳೆ ಈ ನಾಮಫಲಕದ ತಯಾರಿಕೆ ಮತ್ತು ಅಳವಡಿಕೆಗೆ ಸಾರ್ವಜನಿಕ ಹಣ ವಿನಿಯೋಗವಾಗಿದ್ದರೆ, ಅದು ನಿಯಮಬಾಹಿರವಾಗುತ್ತದೆ. ಈ ಕುರಿತು ವೆಚ್ಚದ ದಾಖಲೆಗಳು, ಬಿಲ್‌ಗಳು ಹಾಗೂ ಶಿಷ್ಟಾಚಾರದ ಮಂಜೂರಾತಿಯನ್ನು ಪರಿಶೀಲಿಸಬೇಕು. ನಿಯಮ ಉಲ್ಲಂಘನೆಯಾಗಿದ್ದರೆ ನಾಮಫಲಕ ತೆರವುಗೊಳಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ರಾಜ್ಯದಾದ್ಯಂತ ಸರ್ಕಾರಿ ನಿವಾಸಗಳಲ್ಲಿ ಏಕರೂಪದ ಮಾರ್ಗಸೂಚಿ ಹೊರಡಿಸಬೇಕು ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಶ್ಚಿಮ ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; ಮೃತರ ಸಂಖ್ಯೆ 100ಕ್ಕೆ ಏರಿಕೆ, ಹಲವರಿಗೆ ಗಾಯ

ಬಿಲಿಯನೇರ್ Gautam Adaniಗೆ ಬಿಗ್ ರಿಲೀಫ್: ಎಲ್ಲಾ ಕ್ರಿಮಿನಲ್ ಪ್ರಕರಣಗಳ ವಜಾಗೊಳಿಸಿದ ಅಮೆರಿಕಾ ನ್ಯಾಯಾಲಯ..!

ಬಿಡದಿ ಹೋರಾಟ ಅರ್ಧಕ್ಕೆ ಸ್ಥಗಿತ; ‘ರೈತರ ನ್ಯಾಯಕ್ಕಾಗಿ ತಾರ್ಕಿಕ ಅಂತ್ಯದವರೆಗೆ ಹೋರಾಟ’ ಎಂದ ದೇವೇಗೌಡ, ಆ.18ಕ್ಕೆ ವಿಧಾನಸೌಧ ಮುತ್ತಿಗೆ..!

ಬರ ಪರಿಹಾರಕ್ಕೆ ಕೇಂದ್ರದಿಂದ ಇನ್ನೂ ಉತ್ತರ ಬಂದಿಲ್ಲ; ಅಗತ್ಯವಿದ್ದರೆ ನ್ಯಾಯಾಲಯದ ಮೊರೆ: DCM ಡಾ. ಪರಮೇಶ್ವರ್‌

JDS ಪಾದಯಾತ್ರೆಯಲ್ಲಿ ರೈತರಿಲ್ಲ, ಪಕ್ಷದ ಕಾರ್ಯಕರ್ತರ ಕರೆತಂದಿದ್ದಾರೆ; ನಿಖಿಲ್‌ ರಾಜಕೀಯ ಭವಿಷ್ಯಕ್ಕಾಗಿ ಹೋರಾಟ: ಡಿಕೆ ಶಿವಕುಮಾರ್‌ ವ್ಯಂಗ್ಯ