ಈಶ್ವರ್ ಖಂಡ್ರೆ online desk
ರಾಜ್ಯ

ತೆಲಂಗಾಣದಲ್ಲಿ ಭೀಕರ ಅಪಘಾತ: 6 ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಿದ ಖಂಡ್ರೆ

ಆಟೋ ಹಾಗೂ‌ ಟ್ಯಾಂಕರ್ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರು ಬೀದರ್‌ ತಾಲೂಕಿನ ರಾಜಗೀರಾ ಗ್ರಾಮದವರು ಎಂದು ತಿಳಿದುಬಂದಿದೆ.

ಬೀದರ್: ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಮೊಗ್ಡಂಪಲ್ಲಿ ಮಂಡಲದ ಸತ್ವಾರ್ ಗ್ರಾಮದ ಹೊರವಲಯದಲ್ಲಿ ಮಂಗಳವಾರ ಸಂಭವಿಸಿದ ಭೀಕರ ಅಫಘಾತದಲ್ಲಿ ಮೃತಪಟ್ಟ ಬೀದರ್‌ ಮೂಲದ ಆರು ಮಹಿಳೆಯರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಹೇಳಿದ್ದಾರೆ.

ಆಟೋ ಹಾಗೂ‌ ಟ್ಯಾಂಕರ್ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರು ಬೀದರ್‌ ತಾಲೂಕಿನ ರಾಜಗೀರಾ ಗ್ರಾಮದವರು ಎಂದು ತಿಳಿದುಬಂದಿದೆ. ಟಂ ಟಂ ಚಾಲಕ ದೇವಿದಾಸ ಸೇರಿದಂತೆ ಕೂಲಿ ಕಾರ್ಮಿಕರಾದ ರೇಖಾ, ರೇಷ್ಮಾ, ಕವಿತಾ ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ

ಇಂದು ಅಪಘಾತದ ಬಗ್ಗೆ ಪ್ರತಿಕ್ರಿಯಿಸಿದ ಈಶ್ವರ ಖಂಡ್ರೆ ಅವರು, ಕೂಲಿಗೆ ಹೋದವರು ಆರು ಜನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸರ್ಕಾರ ಅವರ ಕುಟುಂಬದ ಜೊತೆ ಇದ್ದು, ಪರಿಹಾರ ನೀಡತ್ತಿದೆ. ಮೃತರ ಆತ್ಮಕ್ಕೆ ಶಾಂತಿ ನೀಡಲಿ. ಈಗಾಗಲೇ ಸಿಎಂ ಜೊತೆ ಮಾತನಾಡಿದ್ದು, ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ನೀಡುತ್ತೇವೆ. ಮೃತ ಆರು ಜನಕ್ಕೆ ತಲಾ 5 ಲಕ್ಷ ಪರಿಹಾರ ನೀಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

ನಾನು ವೈಯಕ್ತಿಕ ಪರಿಹಾರ ನೀಡುತ್ತೇನೆ. ಒಂದು ಆಟೋದಲ್ಲಿ 15 -20 ಜನ ತುಂಬಿಕೊಂಡು ಹೋಗೋದು ತಪ್ಪು. ಇವರ ಮನೆಗಳಿಗೆ ಭೇಟಿ ನೀಡಿ ಎಲ್ಲಾ ಪರಿಹಾರ ಕೊಡಿಸುವ ಕೆಲಸ ಮಾಡುತ್ತೇನೆ ಎಂದು ಸಚಿವ ಈಶ್ವರ್ ಖಂಡ್ರೆ ಭರವಸೆ ನೀಡಿದ್ದಾರೆ.‌

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೊನೆಗೂ ನೂತನ ಸಚಿವರಿಗೆ ಖಾತೆ ಹಂಚಿಕೆ: ಅಧಿಕೃತ ಪಟ್ಟಿಗೆ ರಾಜ್ಯಪಾಲರಿಂದ ಸಹಿ; ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಪಟ್ಟಿ

ಖಾಲಿ ನಿವೇಶನಗಳ ಸ್ವಚ್ಛಗೊಳಿಸುವ ಗಡುವು: ಮಾಲಿಕರಿಗೆ ಗುಡ್ ನ್ಯೂಸ್!

ಉಪ ಸಭಾಪತಿ ನೇಮಕದಲ್ಲಿ ಬಿಗ್ ಟ್ವೀಸ್ಟ್: ಅಸಮಾಧಾನ ತಣಿಸಲು ಮಂಕಾಳ ವೈದ್ಯಗೆ ಮಣೆ; ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಪೊನ್ನಣ್ಣ ನೇಮಕ

'ಕರ್ನಾಟಕದಿಂದ ಜಾಗ ಖಾಲಿ ಮಾಡಿಸಿಬಿಡ್ತೀವಿ': ‘ಟಾಕ್ಸಿಕ್’ ಟ್ರೇಲರ್ ಕುರಿತು Rishika Singh ಆಕ್ರೋಶ, ಯಶ್ ಅಭಿಮಾನಿಗಳ ಅಸಮಾಧಾನ! Video

ಅಮಿತ್ ಶಾ 'ಉಪನ್ಯಾಸ' ಕೇಳುವ ಆಸಕ್ತಿ ಈಗ ನಮ್ಮಲ್ಲಿ ಉಳಿದಿಲ್ಲ; ಅವರ ವರ್ಚಸ್ಸಿನ 'ಬಲೂನ್' ಟುಸ್ ಆಗಿದೆ: ರಾಹುಲ್ ಗಾಂಧಿ