ಸಾಂದರ್ಭಿಕ ಚಿತ್ರ  
ರಾಜ್ಯ

ಆ.13ರ ಕರ್ನಾಟಕ ಬಂದ್‌ಗೆ ಖಾಸಗಿ ಶಾಲೆಗಳ ಸಂಘ ಬೆಂಬಲ ನೀಡುತ್ತಾ: ಶಾಲೆಗಳು ಇರುತ್ತಾ?

ಬಂದ್‌ಗೆ ಸಾಂಕೇತಿಕ ಬೆಂಬಲ ಸೂಚಿಸುವ ಸಲುವಾಗಿ ಶಾಲಾ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿ ಕಪ್ಪು ರಿಬ್ಬನ್ ಅಥವಾ ಕಪ್ಪು ಪಟ್ಟಿಯನ್ನು ಧರಿಸಲಿದ್ದಾರೆ ಎಂದು ಸಂಘಟನೆ ತಿಳಿಸಿದೆ.

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕನ್ನಡ ಸಂಘಟನೆಗಳು ನಾಳೆ ಗುರುವಾರ ಆಗಸ್ಟ್ 13ರಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಕರ್ನಾಟಕದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಸಹಭಾಗಿತ್ವ ನಿರ್ವಹಣಾ ಸಂಘವು ನೀಡಿದ್ದ ಬೆಂಬಲವನ್ನು ವಾಪಸ್ ಪಡೆದಿದೆ.

ಆಗಸ್ಟ್ 13ರಂದು ಶಾಲೆಗಳನ್ನು ಬಂದ್ ಮಾಡುವುದಿಲ್ಲ ಎಂದು ಸಂಘಟನೆ ತಿಳಿಸಿದೆ. ಆದರೆ, ಬಂದ್‌ಗೆ ನೈತಿಕ ಬೆಂಬಲ ನೀಡುವುದಾಗಿ ಸ್ಪಷ್ಟಪಡಿಸಿದೆ.

ಶಾಲೆಗಳನ್ನು ಮುಚ್ಚಲು ಸಾಧ್ಯವಾಗದಿರುವುದಕ್ಕೆ ಕಾರಣ ನೀಡಿರುವ ಸಂಘಟನೆ, ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯಕ್ಕೆ ಶಿಕ್ಷಕರನ್ನು ನಿಯೋಜಿಸಿರುವುದರಿಂದ ಈಗಾಗಲೇ ಶೈಕ್ಷಣಿಕ ಚಟುವಟಿಕೆಗಳು ತೀವ್ರವಾಗಿ ಬಾಧಿತವಾಗಿವೆ ಎಂದು ತಿಳಿಸಿದೆ.

ಈಗಾಗಲೇ ಶಿಕ್ಷಕರ ತೀವ್ರ ಕೊರತೆ ಎದುರಿಸುತ್ತಿರುವ ಸರ್ಕಾರಿ ಅನುದಾನಿತ ಶಾಲೆಗಳಿಗೆ ಶಾಲೆಗಳನ್ನು ಮುಚ್ಚುವುದರಿಂದ ಮತ್ತಷ್ಟು ಸಮಸ್ಯೆಯಾಗಲಿದೆ ಎಂದು ಸಂಘಟನೆ ಹೇಳಿದೆ.

ಆದರೆ, ಬಂದ್‌ಗೆ ಸಾಂಕೇತಿಕ ಬೆಂಬಲ ಸೂಚಿಸುವ ಸಲುವಾಗಿ ಶಾಲಾ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿ ಕಪ್ಪು ರಿಬ್ಬನ್ ಅಥವಾ ಕಪ್ಪು ಪಟ್ಟಿಯನ್ನು ಧರಿಸಲಿದ್ದಾರೆ ಎಂದು ಸಂಘಟನೆ ತಿಳಿಸಿದೆ.

ಕಾವೇರಿ ವಿವಾದದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ಶಾಲೆಗಳು ಇದನ್ನು ಒಂದು ಅವಕಾಶವಾಗಿ ಬಳಸಿಕೊಳ್ಳಬಹುದು. 5ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಬೆಳಗಿನ ಪ್ರಾರ್ಥನಾ ಸಭೆಯಲ್ಲಿ ಅಥವಾ ತರಗತಿಗಳಲ್ಲಿ ಕಾವೇರಿ ವಿವಾದಕ್ಕೆ ಸಂಬಂಧಿಸಿದ ವಾಸ್ತವಾಂಶಗಳನ್ನು ತಿಳಿಸಬಹುದು ಎಂದು ಶಾಲೆಗಳ ಸಂಘಟನೆ ತಿಳಿಸಿದೆ.

ನಾಳೆ ಶಾಲಾ ಬಸ್‌ಗಳು, ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಸುರಕ್ಷತೆಯನ್ನು ಖಚಿತಪಡಿಸುವಂತೆ ಕನ್ನಡ ಸಂಘಟನೆಗಳು ಹಾಗೂ ಸರ್ಕಾರಕ್ಕೆ ಸಂಘಟನೆ ಮನವಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನಾನೇ ಲಾಸ್ಟ್, ಇನ್ನು ಇರಾನ್ ನಂಬಲ್ಲ, ಹಾರ್ಮುಜ್ ಅಮೆರಿಕ ನಿಯಂತ್ರದಣದಲ್ಲಿದೆ': Donald Trump

ಡಿಕೆ ಶಿವಕುಮಾರ್ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ: ಮುನಿಯಪ್ಪಗೆ ಸಮಾಜಕಲ್ಯಾಣ, ಜಮೀರ್ – ವಸತಿ ಖಾತೆ?

ಮುಂದುವರಿದ ಕೌತುಕ: ಅಮಾವಾಸ್ಯೆ ಕಳೆದ ಬಳಿಕವಷ್ಟೇ ಖಾತೆ ಹಂಚಿಕೆ 'ಗ್ರಹಣ ಮುಕ್ತ'!

'ನನ್ನ ಮುಂದೆ ನಿಂತು ಟೈಪ್ ಮಾಡಿಸಿ ಸಹಿ ಹಾಕಿಸಿದ್ರು: ಆಸ್ಪತ್ರೆಯಲ್ಲಿದ್ದಾಗಲೂ CM ರಾಜೀನಾಮೆ ನೀಡುವಂತೆ ಒತ್ತಡ; ಮನಸ್ಸಿಗೆ ನೋವಾಗಿದೆ'

ರಾಮನಾಮ ಜಪಿಸಿ ರಾಮನ ದುಡ್ಡನ್ನೇ ನುಂಗಿದ ಬಿಜೆಪಿಗರು ಸಂತರಾ? ನೆಹರೂ ಬಗ್ಗೆ ಮಾತಾಡಲು ರಾಮುಲುಗೆ ನೈತಿಕ ಹಕ್ಕಿಲ್ಲ; ತಂಗಡಗಿ