ವಿಜಯಾನಂದ ಕಾಶಪ್ಪನವರ್ ಮತ್ತು ಆನಂದ ಕೆಂಭಾವಿ 
ರಾಜ್ಯ

ಸಚಿವ ವಿಜಯಾನಂದ ಕಾಶಪ್ಪನವರ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಸರ್ಕಾರಿ ಶಾಲೆಯ ಶಿಕ್ಷಕ‌ ಅಮಾನತು

ಶಿಕ್ಷಕನ ಈ ನಡೆಗೆ ಹಿರೇಮಸಳಿ ಗ್ರಾಮಸ್ಥರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಜವಾಬ್ದಾರಿಯುತ ಹುದ್ದೆಯಲ್ಲಿದ್ದುಕೊಂಡು ಇಂತಹ ನಿಂದನಾತ್ಮಕ ಪೋಸ್ಟ್ ಹಾಕಿದ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಇಂಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು.

ವಿಜಯಪುರ: ರಾಜ್ಯ ಸರ್ಕಾರದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ವಿಜಯಾನಂದ ಕಾಶಪ್ಪನವರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿಂದನಾತ್ಮಕ ಸಂದೇಶ ಹಂಚಿಕೊಂಡ ಆರೋಪದ ಮೇರೆಗೆ ಸರ್ಕಾರಿ ಶಾಲೆಯ ಸಹ ಶಿಕ್ಷಕರೊಬ್ಬರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಲಾಗಿದೆ.

​ಅಮಾನತುಗೊಂಡ ಶಿಕ್ಷಕನನ್ನು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇಮಸಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಸಹ ಶಿಕ್ಷಕ ಆನಂದ ಕೆಂಭಾವಿ ಎಂದು ಗುರುತಿಸಲಾಗಿದೆ. ​

ಸಚಿವ ಸಂಪುಟ ರಚನೆ ಹಿನ್ನೆಲೆಯಲ್ಲಿ ನೂತನ ಸಚಿವರಾಗಿ ವಿಜಯಾನಂದ ಕಾಶಪ್ಪನವರ ಪ್ರಮಾಣ ವಚನ ಸ್ವೀಕರಿಸುವಾಗಿನ ಫೋಟೊವನ್ನು ಬಳಸಿಕೊಂಡು, "ಸಚಿವರಿಗೆ ಕನ್ನಡದಲ್ಲಿ ಮಾತನಾಡಲು ಬರುವುದಿಲ್ಲ" ಎಂಬಿತ್ಯಾದಿ ಅವಹೇಳನಕಾರಿ ಹಾಗೂ ನಿಂದನಾತ್ಮಕ ಸಂದೇಶಗಳನ್ನು ಶಿಕ್ಷಕ ಕೆಂಭಾವಿ ವಾಟ್ಸಾಪ್ ಆಪ್ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು ಎಂದು ಆರೋಪಿಸಲಾಗಿದೆ.

ಶಿಕ್ಷಕನ ಈ ನಡೆಗೆ ಹಿರೇಮಸಳಿ ಗ್ರಾಮಸ್ಥರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಜವಾಬ್ದಾರಿಯುತ ಹುದ್ದೆಯಲ್ಲಿದ್ದುಕೊಂಡು ಇಂತಹ ನಿಂದನಾತ್ಮಕ ಪೋಸ್ಟ್ ಹಾಕಿದ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಇಂಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು.

ಗ್ರಾಮಸ್ಥರ ದೂರಿನ ಮೇರೆಗೆ ಇಂಡಿ ಬಿಇಒ ಅವರು ನೀಡಿದ ಶಿಫಾರಸ್ಸು ವರದಿಯನ್ನು ಆಧರಿಸಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಜುನಾಥ ಗುಳೇದಗುಡ್ಡ ಅವರು ಸಹ ಶಿಕ್ಷಕ ಆನಂದ ಕೆಂಭಾವಿ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Karnataka Bandh-ಮಂಡ್ಯ, ಮೈಸೂರು ಭಾಗಗಳಲ್ಲಿ ಉತ್ತಮ ಸ್ಪಂದನೆ: ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ನೀರಸ ಪ್ರತಿಕ್ರಿಯೆ-Video

‘Hormuz ಮೇಲೆ ಅಮೆರಿಕಾ ಸಂಪೂರ್ಣ ಹಿಡಿತ’ ಎಂದ Trump; ಹೇಳಿಕೆಯಿಂದ ‘ವಾಸ್ತವ ಬದಲಾಗಲ್ಲ’, ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; Iran ತಿರುಗೇಟು..!

AI ಗುಳ್ಳೆ ಯಾವಾಗ ಸಿಡಿಯುತ್ತೆ? (ಹಣಕ್ಲಾಸು)

ವಿಧಾನಸೌಧ-ವಿಕಾಸಸೌಧ, ಆರೋಗ್ಯಸೌಧದಲ್ಲೇ ಇಲ್ಲ ಆರೋಗ್ಯ! ಕ್ಯಾಂಟೀನ್‌ಗಳಲ್ಲಿ ಜಿರಳೆ, ಅವಧಿ ಮೀರಿದ ಆಹಾರ ಪತ್ತೆ; ಹೊರಗೆ ಊಟ ಮಾಡುವ ಮುನ್ನ ಇದನ್ನೊಮ್ಮೆ ನೋಡಿ..!

ಸಂಪುಟ ವಿಸ್ತರಣೆ ಬಳಿಕ ಖಾತೆ ಹಂಚಿಕೆ ಪೂರ್ಣ: 19 ಸಚಿವರಿಗೆ ಹೊಣೆಗಾರಿಕೆ, ಕೆಲ ಪ್ರಮುಖ ವಿಚಾರಗಳಿಗೆ ಇನ್ನೂ ಸಿಗದ ಪರಿಹಾರ, ಮುಂದುವರೆದ ಅಸಮಾಧಾನ..!