ಸಿಎಂ ಡಿ ಕೆ ಶಿವಕುಮಾರ್  
ರಾಜ್ಯ

ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಕೃತಜ್ಞತೆಗಳು: ಸಿಎಂ ಡಿ ಕೆ ಶಿವಕುಮಾರ್

ರಾಜ್ಯದ ಜನರ ಹಿತ ಹಾಗೂ ರೈತರ ಕಲ್ಯಾಣಕ್ಕೆ ಸಂಬಂಧಿಸಿದಂತೆ ಅವರು ಕೆಲವು ಬೇಡಿಕೆ ಇಟ್ಟಿದ್ದಾರೆ. ಅವರ ಬೇಡಿಕೆಗಳನ್ನು ಪರಿಶೀಲನೆ ಮಾಡುವೆ. ಅವರ ಸಹಕಾರಕ್ಕೆ ಕೃತಜ್ಞತೆ" ಎಂದು ತಿಳಿಸಿದರು.

ಬೆಂಗಳೂರು: ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ಸಂಘಟನೆಗಳು ಕರೆ ನೀಡಿದ್ದ ಬಂದ್ ಹಿಂಪಡೆದ ಬಗ್ಗೆ ಕೇಳಿದಾಗ, ಎಲ್ಲಾ ಕನ್ನಡಪರ ಸಂಘಟನೆಗಳ ಮುಖಂಡರು ನನ್ನನ್ನು ಭೇಟಿ ಮಾಡಿ ಬಂದ್ ಹಿಂಪಡೆದಿರುವ ಬಗ್ಗೆ ಮಾಹಿತಿ ನೀಡಿದರು.

ರಾಜ್ಯದ ಜನರ ಹಿತ ಹಾಗೂ ರೈತರ ಕಲ್ಯಾಣಕ್ಕೆ ಸಂಬಂಧಿಸಿದಂತೆ ಅವರು ಕೆಲವು ಬೇಡಿಕೆ ಇಟ್ಟಿದ್ದಾರೆ. ಅವರ ಬೇಡಿಕೆಗಳನ್ನು ಪರಿಶೀಲನೆ ಮಾಡುವೆ. ಅವರ ಸಹಕಾರಕ್ಕೆ ಕೃತಜ್ಞತೆ" ಎಂದು ತಿಳಿಸಿದರು.

ರಕ್ಷಣಾ ವೇದಿಕೆಯ ಪ್ರಮುಖ ನಾಯಕರು ನಮ್ಮನ್ನು ಭೇಟಿ ಮಾಡಿ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವುದಾಗಿ ಹೇಳಿದರು. ರಾಜ್ಯದ ಹಿತಾಸಕ್ತಿಗಾಗಿ ನಿಲುವು ತೆಗೆದುಕೊಂಡಿದ್ದಕ್ಕಾಗಿ ನನಗೆ ಸಂತೋಷವಾಗಿದೆ ಮತ್ತು ಅವರಿಗೆ ನನ್ನ ಧನ್ಯವಾದ ಮತ್ತು ಶುಭಾಶಯಗಳನ್ನು ತಿಳಿಸುತ್ತೇನೆ" ಎಂದು ಅವರು ಹೇಳಿದರು. ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವುದನ್ನು ವಿರೋಧಿಸಿ ಕನ್ನಡ ಮತ್ತು ರೈತ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Karnataka Bandh-ಮಂಡ್ಯ, ಮೈಸೂರು ಭಾಗಗಳಲ್ಲಿ ಉತ್ತಮ ಸ್ಪಂದನೆ: ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ನೀರಸ ಪ್ರತಿಕ್ರಿಯೆ-Video

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಒಡಿಶಾದಲ್ಲಿ ಭಾರಿ ಮಳೆ, ಇಡೀ ರಾಜ್ಯಕ್ಕೆ 'Red Alert': ಹವಾಮಾನ ಇಲಾಖೆ

‘Hormuz ಮೇಲೆ ಅಮೆರಿಕಾ ಸಂಪೂರ್ಣ ಹಿಡಿತ’ ಎಂದ Trump; ಹೇಳಿಕೆಯಿಂದ ‘ವಾಸ್ತವ ಬದಲಾಗಲ್ಲ’, ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; Iran ತಿರುಗೇಟು..!

AI ಗುಳ್ಳೆ ಯಾವಾಗ ಸಿಡಿಯುತ್ತೆ? (ಹಣಕ್ಲಾಸು)

ವಿಧಾನಸೌಧ-ವಿಕಾಸಸೌಧ, ಆರೋಗ್ಯಸೌಧದಲ್ಲೇ ಇಲ್ಲ ಆರೋಗ್ಯ! ಕ್ಯಾಂಟೀನ್‌ಗಳಲ್ಲಿ ಜಿರಳೆ, ಅವಧಿ ಮೀರಿದ ಆಹಾರ ಪತ್ತೆ; ಹೊರಗೆ ಊಟ ಮಾಡುವ ಮುನ್ನ ಇದನ್ನೊಮ್ಮೆ ನೋಡಿ..!