ಸಚಿವ ಪ್ರಿಯಾಂಕ್ ಖರ್ಗೆ, ಆರ್ ಅಶೋಕ್ ಸಾಂದರ್ಭಿಕ ಚಿತ್ರ 
ರಾಜ್ಯ

ಬಿಜೆಪಿ ಕಾರ್ಯಕರ್ತರು ಕಲಬುರ್ಗಿ ಜಿಲ್ಲೆಗೆ ಕಾಲಿಡಲು ಬಿಡಲ್ಲ, ಪ್ರಿಯಾಂಕ್ ಖರ್ಗೆ ಹಳೆಯ Video ವೈರಲ್; ಆರ್ ಅಶೋಕ್ ಕಿಡಿ!

ವಿಡಿಯೋದಲ್ಲಿ ಖರ್ಗೆ ಕುಟುಂಬದವರು ಮನಸ್ಸು ಮಾಡಿದರೆ ಬಿಜೆಪಿ ಕಾರ್ಯಕರ್ತರು ಕಲಬುರ್ಗಿ ಜಿಲ್ಲೆಗೆ ಕಾಲು ಇಡುವುದಕ್ಕೂ ಬಿಡುವುದಿಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಬೆಂಗಳೂರು: ಆರ್ ಎಸ್ ಎಸ್ ಚಟುವಟಿಕೆ ನಿಯಂತ್ರಣಕ್ಕೆ ಹೊಸ ವಿಧೇಯಕಕ್ಕೆ ರಾಜ್ಯ ಸರ್ಕಾರ ಮುಂದಾಗಿರುವಂತೆಯೇ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಹಳೆಯ ವಿಡಿಯೋ ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ವಿಡಿಯೋದಲ್ಲಿ ಖರ್ಗೆ ಕುಟುಂಬದವರು ಮನಸ್ಸು ಮಾಡಿದರೆ ಬಿಜೆಪಿ ಕಾರ್ಯಕರ್ತರು ಕಲಬುರ್ಗಿ ಜಿಲ್ಲೆಗೆ ಕಾಲು ಇಡುವುದಕ್ಕೂ ಬಿಡುವುದಿಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಜನಾಬ್ ಪ್ರಿಯಾಂಕ್ ಖರ್ಗೆ ಅವರೇ, ತಮ್ಮ ಬಾಯಲ್ಲಿ ಬಂದ ನುಡಿಮುತ್ತುಗಳನ್ನು ಒಂದು ಸಲ ತಾವೇ ನೆನಪಿಸಿಕೊಳ್ಳಿ ಸ್ವಾಮಿ. ದೇಶಕ್ಕೆ ಸಂವಿಧಾನ, ಪ್ರತಿಯೊಬ್ಬ ನಾಗರಿಕನಿಗೂ ಸಮನಾದ ಮೂಲಭೂತ ಹಕ್ಕುಗಳನ್ನು ಕೊಟ್ಟ ಮಹಾನ್ ಮಾನವತಾವಾದಿ ಅಂಬೇಡ್ಕರ್ ಅವರ ರಕ್ತ ಹರಿಯುತ್ತಿರುವವರು ಆಡುವ ಮಾತಾ ಇದು?ಇದು ಅಂಡರ್ ವರ್ಲ್ಡ್ ಮಾಫಿಯಾದವರು ಬಳಸುವ ಭಾಷೆ ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ.

Father Quota ದಲ್ಲಿ ಗೃಹ ಸಚಿವರಾದ ಮಾತ್ರಕ್ಕೆ ತಾವು ಬಾಬಾಸಾಹೇಬ್ ಅಂಬೇಡ್ಕರ್ ಅವರಿಗಿಂತ ದೊಡ್ಡವರೂ ಅಂದುಕೊಂಡು ಬಿಟ್ಟಿದ್ದೀರಾ? ಅಂಬೇಡ್ಕರ್ ಅವರ ಸಂವಿಧಾನ ಕಲಬುರ್ಗಿಯಲ್ಲಿ ಅನ್ವಯ ಆಗುವುದಿಲ್ಲವೇ? ಅಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಸಂವಿಧಾನ ನೀಡಿರುವ ಮೂಲಭೂತ ಹಕ್ಕುಗಳು ಸಿಗುವುದಿಲ್ಲವೇ? ಒಂದು ನೆನಪಿಡಿ. ತಾವೂ ನಿಜಾಮರೂ ಅಲ್ಲ, ನಿಮ್ಮದು ರಜಾಕರರ ಸರ್ಕಾರವೂ ಅಲ್ಲ. ಅಧಿಕಾರದ ಮದದಲ್ಲಿ ಮೈಮರೆತು ತಾವೂಬ್ಬ ಜನಪ್ರತಿನಿಧಿ, ಜನಸೇವಕ ಅನ್ನೋದನ್ನ ಮರೆಯಬೇಡಿ ಎಂದಿದ್ದಾರೆ.

"RSS ಎದುರು ಹಾಕಿಕೊಂಡರೆ ನೀವು ಮನೆಯಿಂದ ಆಚೆ ಬರಲು ಆಗುವುದಿಲ್ಲ" ಎಂದು ನಾನು ಹೇಳಿದ್ದು RSS ಬಗ್ಗೆ ಸಮಾಜದಲ್ಲಿ ಇರುವ ಗೌರವ ಮತ್ತು ಅಭಿಮಾನದ ಬಗ್ಗೆ. RSS ನಂತಹ ಒಂದು ನಿಸ್ವಾರ್ಥ, ರಾಷ್ಟ್ರಭಕ್ತ ಸಂಘಟನೆ ಬಗ್ಗೆ ವಿನಾಕಾರಣ ದ್ವೇಷ ಕಾರಿದರೆ ಜನರೇ ಅದನ್ನು ಒಪ್ಪುವುದಿಲ್ಲ, ಜನರೇ ತಮಗೆ ತಕ್ಕ ಪಾಠ ಕಲಿಸುತ್ತಾರೆ ಎನ್ನುವ ಅರ್ಥದಲ್ಲಿ ನಾನು ಹೇಳಿದ್ದು. ನನ್ನ ಹೇಳಿಕೆಯನ್ನು ತಿರುಚಿ ಸುದ್ದಿಯಲ್ಲಿರುವುದಕ್ಕೆ ಒಂದು ಹೊಸ ಕಾರಣ ಹುಡುಕಿಕೊಳ್ಳುವ ಹತಾಶ ಪ್ರಯತ್ನ ಬಿಡಿ. ಗೃಹ ಸಚಿವ ಸ್ಥಾನ ಕೊಟ್ಟಿರುವುದೇ RSS ಅನ್ನು ಟಾರ್ಗೆಟ್ ಮಾಡುವುದಕ್ಕಾಗಿ ಎನ್ನುವ ಮನಸ್ಥಿತಿಯಿಂದ ಹೊರಬನ್ನಿ ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಚಿವ ಜಮೀರ್ ಅಹ್ಮದ್ ಧ್ವಜಾರೋಹಣ ಮಾಡದಷ್ಟು ದೊಡ್ಡವರೇ? ವಿಧಾನಸಭೆಯಲ್ಲಿ ಬಿಜೆಪಿ ಪ್ರತಿಭಟನೆ! ಸಚಿವ ಸ್ಥಾನದಿಂದ ವಜಾಕ್ಕೆ ಒತ್ತಾಯ

'ಅಪ್ಪಿಕೋ' ವಿದೇಶಾಂಗ ನೀತಿ: ಮೋದಿ ಕೆಣಕಿದ ರಾಹುಲ್ ಗಾಂಧಿ; ಇಂದಿರಾ ಗಾಂಧಿ ವಿಡಿಯೋ ಮೂಲಕ ಬಿಜೆಪಿ ತಿರುಗೇಟು!

ಇಂಡಿಗೋ ವಿಮಾನ ರದ್ದು: ತಾಳ್ಮೆ ಕಳೆದುಕೊಂಡ ಮಹಿಳೆ, ಕೈಗೆ ಸಿಕ್ಕಿದ್ದನ್ನು ಎಸೆದು ರಂಪಾಟ! 49,000 ರೂ. ಮೌಲ್ಯದ ವಸ್ತು ಹಾನಿ, Video

ನಮ್ಮನ್ನು ಭಿಕ್ಷೆ ಬೇಡುವಂತೆ ಮಾಡಬೇಡಿ: ಬೆಂಗಳೂರಿನಲ್ಲಿ ದಿಢೀರ್ ಸುದ್ದಿಗೋಷ್ಠಿ ನಡೆಸಿ ನಟ ಪ್ರಕಾಶ್ ರಾಜ್ ಆಕ್ರೋಶ!

Census 2027: 40 ಪ್ರಶ್ನೆಗಳು ಪ್ರಕಟ, ಉದ್ದೇಶವೇ ಶಂಕಾಸ್ಪದ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ!