ಶ್ರೀನಿವಾಸ ಮಾನೆ online desk
ರಾಜ್ಯ

ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರಾಗಿ ಶಾಸಕ ಶ್ರೀನಿವಾಸ ಮಾನೆ ನೇಮಕ

ಕರ್ನಾಟಕ ಗೃಹ ಮಂಡಳಿ ರಾಜ್ಯದಲ್ಲಿ ವಸತಿ ಯೋಜನೆಗಳನ್ನು ರೂಪಿಸುವ ಮತ್ತು ಅನುಷ್ಠಾನಗೊಳಿಸುವ ಪ್ರಮುಖ ಸಂಸ್ಥೆಯಾಗಿದೆ.

ಬೆಂಗಳೂರು: ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರನ್ನಾಗಿ ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ ಮಾನೆ ಅವರನ್ನು ನೇಮಕ ಮಾಡಲಾಗಿದೆ.

ನೇಮಕಾತಿ ಸಂಬಂಧ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಈ ಹಿಂದೆ ಗೃಹಮಂಡಳಿ ಅಧ್ಯಕ್ಷರಾಗಿ ಅರಸಿಕೆರೆ ಶಾಸಕ ಕೆಎಂ ಶಿವಲಿಂಗೇಗೌಡ ಕಾರ್ಯನಿರ್ವಹಿಸುತ್ತಿದ್ದರು. ಶಿವಲಿಂಗೇಗೌಡ ಈಗ ಡಿಕೆ ಶಿವಕುಮಾರ್ ಸಚಿವ ಸಂಪುಟದಲ್ಲಿ ಅಬಕಾರಿ ಸಚಿವರಾಗಿ ನಿಯುಕ್ತಿಗೊಂಡಿದ್ದು, ಗೃಹಮಂಡಳಿ ಅಧ್ಯಕ್ಷ ಸ್ಥಾನ ತೆರವುಗೊಂಡಿತ್ತು.

ಕರ್ನಾಟಕ ಗೃಹ ಮಂಡಳಿ ರಾಜ್ಯದಲ್ಲಿ ವಸತಿ ಯೋಜನೆಗಳನ್ನು ರೂಪಿಸುವ ಮತ್ತು ಅನುಷ್ಠಾನಗೊಳಿಸುವ ಪ್ರಮುಖ ಸಂಸ್ಥೆಯಾಗಿದೆ.

ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳ ನಿರ್ಮಾಣ, ವಸತಿ ಯೋಜನೆಗಳ ಅಭಿವೃದ್ಧಿ, ಭೂಮಿ ಸ್ವಾಧೀನ ಮತ್ತು ವಸತಿ ಸೌಲಭ್ಯಗಳ ವಿತರಣೆ ಮುಂತಾದ ಕೆಲಸಗಳನ್ನು ಈ ಮಂಡಳಿ ನೋಡಿಕೊಳ್ಳುತ್ತದೆ. ಅಧ್ಯಕ್ಷರಾಗಿ ನೇಮಕಗೊಂಡ ಶ್ರೀನಿವಾಸ ಮಾನೆ ಅವರು ಈಗ ಈ ಎಲ್ಲಾ ಚಟುವಟಿಕೆಗಳ ಮೇಲ್ವಿಚಾರಣೆ ವಹಿಸಿಕೊಳ್ಳಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರೂರ್ ಕಾಲ್ತುಳಿತ ಸಂತ್ರಸ್ತರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ; ‘ಸರ್ಕಾರದ ನೀತಿಯನ್ನು ಪ್ರಶ್ನಿಸಲು ನೀವ್ಯಾರು?’: ಹೈಕೋರ್ಟ್ ಆದೇಶಕ್ಕೆ 'ಸುಪ್ರೀಂ' ತಡೆ

ಸಾವರ್ಕರ್ ವಿರುದ್ಧ ಹೇಳಿಕೆ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್; ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಕಾಪಾಡಿ ಪ್ಲೀಸ್.. ನಿರ್ಜನ ರಸ್ತೆಗೆ ಕರೆದೊಯ್ಯುತ್ತಿದ್ದ ಚಾಲಕ; ಚಲಿಸುತ್ತಿದ್ದ Bike Taxiಯಿಂದ ಜಿಗಿದ ಮಹಿಳೆ

ಕೇವಲ 100 ರೂಗೆ ಜೆಮ್‌ಶೆಡ್‌ಪುರ ಫುಟ್‌ ಬಾಲ್ ಕ್ಲಬ್ ಮಾರಾಟ ಮಾಡಿದ ಟಾಟಾ ಸ್ಟೀಲ್! ISL ಕ್ಲಬ್ ಮಾಲೀಕತ್ವದಿಂದ ಹೊರಗೆ

RG Kar Case: TMC ಮಾಜಿ ಶಾಸಕನ ಮೇಲೆ ಚಪ್ಪಲಿ, ಮೊಟ್ಟೆ ಎಸೆತ; ಪೊಲೀಸರ ವಶದಲ್ಲಿದ್ದಾಗಲೇ ಜನರಿಂದ ಧರ್ಮದೇಟು! Video