ಡಿ ಕೆ ಶಿವಕುಮಾರ್  
ರಾಜ್ಯ

'ನನಗೆ ಪ್ರಹ್ಲಾದ ಜೋಷಿಯೂ ಬೇಕು, ಕುಮಾರಸ್ವಾಮಿ ಜತೆಗೂ ಕೆಲಸ ಮಾಡಲು ರೆಡಿ ಇದ್ದೀನಿ, ಒಗ್ಗಟ್ಟಿನಿಂದ ಕರ್ನಾಟಕ ಕಟ್ಟೋಣ, ಆ ಮೂಲಕ ಬಲಿಷ್ಠ ಭಾರತ ನಿರ್ಮಿಸೋಣ': ಡಿ ಕೆ ಶಿವಕುಮಾರ್-Video

ಪ್ರತಿ ಬಾರಿಯಂತೆ ನಾನು ಕೂಡ ಹೊಸ ಆಲೋಚನೆ, ಹೊಸ ಭರವಸೆ, ಹೊಸ ನಂಬಿಕೆಯೊಂದಿಗೆ ಮುಖ್ಯಮಂತ್ರಿಯಾಗಿದ್ದೇನೆ. ಇದು ಟೀಂ ಕರ್ನಾಟಕ, ಇಡೀ ರಾಜ್ಯದ ಶಾಸಕರು, ವಿರೋಧಪಕ್ಷದ ನಾಯಕರು, ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಜಕಾರಣವನ್ನು ರಾಜ್ಯದ ಜನತೆಯ ಅಭಿವೃದ್ಧಿಗೋಸ್ಕರ ಮಾಡುತ್ತೇವೆ ಎಂದರು.

ಬೆಂಗಳೂರು: ನಮ್ಮ ಪಕ್ಷದ ಹೈಕಮಾಂಡ್ ಮತ್ತು ನಮ್ಮ 139 ಶಾಸಕರ ಬೆಂಬಲದಿಂದ ನನ್ನನ್ನು ಮುಖ್ಯಮಂತ್ರಿ ಸ್ಥಾನ ನೀಡಿದ್ದಾರೆ. ಈ ಹಿಂದೆ ಅನೇಕ ಪ್ರಮುಖ ನಾಯಕರು ಈ ರಾಜ್ಯದ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಸಿದ್ದರಾಮಯ್ಯನವರು ಕಳೆದ ಮೂರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಇದು ಮುಂದುವರಿದ ಸರ್ಕಾರ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಇಂದು ವಿಧಾನಸಭೆ ಕಲಾಪದ ಆರಂಭದಲ್ಲಿ ಹೇಳಿದರು.

ಪ್ರತಿ ಬಾರಿಯಂತೆ ನಾನು ಕೂಡ ಹೊಸ ಆಲೋಚನೆ, ಹೊಸ ಭರವಸೆ, ಹೊಸ ನಂಬಿಕೆಯೊಂದಿಗೆ ಮುಖ್ಯಮಂತ್ರಿಯಾಗಿದ್ದೇನೆ. ಇದು ಟೀಂ ಕರ್ನಾಟಕ, ಇಡೀ ರಾಜ್ಯದ ಶಾಸಕರು, ವಿರೋಧಪಕ್ಷದ ನಾಯಕರು, ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಜಕಾರಣವನ್ನು ರಾಜ್ಯದ ಜನತೆಯ ಅಭಿವೃದ್ಧಿಗೋಸ್ಕರ ಮಾಡುತ್ತೇವೆ ಎಂದರು.

ಚುನಾವಣೆ ಬಂದಾಗ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನತೆಯ ತೀರ್ಪಿಗೆ ತಲೆಬಾಗೋಣ, ಆದರೆ ಇಂದು ನನಗೆ ಸಿಕ್ಕಿರುವ ಮುಖ್ಯಮಂತ್ರಿ ಅವಕಾಶದಲ್ಲಿ 224 ಶಾಸಕರ ಜೊತೆಗೆ ಕೂಡ ಕೆಲಸ ಮಾಡಲು ಇಚ್ಛಿಸುತ್ತೇನೆ, ನನಗೆ ಎಲ್ಲಾ ಪಕ್ಷದ ಶಾಸಕರೂ ಒಂದೇ ಎಂದರು.

ಹಿಂದಿನ ವಿಚಾರಗಳನ್ನೆಲ್ಲಾ ಮರೆತು ಎಲ್ಲಾ ಶಾಸಕರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುತ್ತಾ ಕೆಲಸ ಮಾಡಬೇಕೆಂಬುದು ನನ್ನ ಆಸೆ, ಇಡೀ ವಿಶ್ವ ನಮ್ಮ ಭಾರತವನ್ನು ಕರ್ನಾಟಕ ಮತ್ತು ಬೆಂಗಳೂರು ಮೂಲಕ ನೋಡುತ್ತಿದೆ. ನನಗೆ ಶತ್ರುಗಳು ಬೇಡ. ಹೆಚ್ಚು ಮಿತ್ರರು ಬೇಕು.

ನನಗೆ ಆಡಳಿತ, ಪ್ರತಿಪಕ್ಷ ಎಂಬ ಯಾವುದೇ ತಾರತಮ್ಯ ಇಲ್ಲ, ಹಿಂದೆ ಏನಾಗಿದೆಯೋ ಅದು ಬೇಡ. ಮುಂದೆ ಏನಾಗಬೇಕು ಅನ್ನೋದನ್ನು ನೋಡೋಣ, ನನಗೆ ಪ್ರಹ್ಲಾದ ಜೋಷಿಯೂ ಬೇಕು. ಎಚ್ ಡಿ ಕುಮಾರಸ್ವಾಮಿ ಜತೆಗೂ ಕೆಲಸ ಮಾಡಲು ರೆಡಿ ಇದ್ದೀನಿ. ನನಗೆ ಎಲ್ಲರೂ ಬೇಕು. ಒಗ್ಗಟ್ಟಿನಿಂದ ಕರ್ನಾಟಕ ಕಟ್ಟೋಣ. ಆ ಮೂಲಕ ಬಲಿಷ್ಠ ಭಾರತ ನಿರ್ಮಿಸೋಣ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಇದು ನನ್ನ ಮತ್ತು ವಿದ್ಯಾರ್ಥಿಗಳ ನಡುವಿನ ವಿಚಾರ’: ಬಾರ್ ಕೌನ್ಸಿಲ್‌ಗೆ ಸುಪ್ರೀಂ ಕೋರ್ಟ್ ಸಿಜೆಐ ಸೂರ್ಯಕಾಂತ್ ತರಾಟೆ

ಉತ್ತರಾಖಂಡ: ಚಮೋಲಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ; 7 ಕಾರ್ಮಿಕರು ಸಾವು, 14 ಜನರಿಗೆ ಗಾಯ, 22 ಮಂದಿ ರಕ್ಷಣೆ-Video

Iran ಮುಗಿಸಲು ಅಮೆರಿಕ ಮಾಸ್ಟರ್ ಪ್ಲ್ಯಾನ್: ಜಾಗತಿಕ ಇತಿಹಾಸದಲ್ಲೇ ಹಿಂದೆಂದೂ ಕಾಣದ ಭೀಕರ 'ಆರ್ಥಿಕ ಯುದ್ಧ' ಘೋಷಣೆ!

'ಸಮಯವಿಲ್ಲ, ವಿಜಯನಗರ ಜಿಲ್ಲಾ ಉಸ್ತುವಾರಿ ಹೊಣೆ, ಧ್ವಜಾರೋಹಣ ನನಗೆ ಬೇಡ': ಜಮೀರ್ ಅಹ್ಮದ್ ಸಿಎಂಗೆ ಪತ್ರ

ಸ್ವಾತಂತ್ರ್ಯೋತ್ಸವಕ್ಕೆ ಸಿಲಿಕಾನ್ ಸಿಟಿ ಸಜ್ಜು: ವಿಧಾನಸೌಧದ ಮುಂದೆ ‘ಫ್ರೀಡಂ ಹಬ್ಬ’ಕ್ಕೆ ಭರದ ಸಿದ್ಧತೆ, 18 ಸಾವಿರಕ್ಕೂ ಹೆಚ್ಚು ಮಂದಿ ನೋಂದಣಿ..!