ರಾಜ್ಯ

ಬೆಂಗಳೂರು: 'ಎಮ್ಮೆ ತರ ಇದ್ದೀಯಾ' ಎಂದು ಹೀಯಾಳಿಸಿ ಮಹಿಳಾ PSI ಮೇಲೆ ಹಲ್ಲೆ; ನಾಲ್ವರ ವಿರುದ್ಧ FIR!

ಬೆಂಗಳೂರಿನ ಕೆ.ಆರ್. ಪುರಂ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ತವ್ಯನಿರತ ಮಹಿಳಾ PSI ಮೇಲೆ ಕೆಲ ಕಿಡಿಗೇಡಿಗಳು ಹಲ್ಲೆ ನಡೆಸಿದ್ದುಅಲ್ಲದೆ ಬಾಡಿ ಶೇಮಿಂಗ್ ಮಾಡಿ ಅವಮಾನಿಸಿರುವ ಘಟನೆ ನಡೆದಿದೆ.

ಬೆಂಗಳೂರು: ಬೆಂಗಳೂರಿನ ಕೆ.ಆರ್. ಪುರಂ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ತವ್ಯನಿರತ ಮಹಿಳಾ PSI ಮೇಲೆ ಕೆಲ ಕಿಡಿಗೇಡಿಗಳು ಹಲ್ಲೆ ನಡೆಸಿದ್ದುಅಲ್ಲದೆ ಬಾಡಿ ಶೇಮಿಂಗ್ ಮಾಡಿ ಅವಮಾನಿಸಿರುವ ಘಟನೆ ನಡೆದಿದೆ. ಸಂಚಾರಿ ಮಹಿಳಾ ಪಿಎಸ್ಐ ನಯಾನಾ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣ ಸಂಬಂಧ ಹರ್ಷಿತ್ ರೆಡ್ಡಿ, ಹೇಮಂತ್ ರೆಡ್ಡಿ, ರಾಹುಲ್ ಹಾಗೂ ರಾಧಾಕೃಷ್ಣ ರೆಡ್ಡಿ ಎಂಬುವವರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಬೆಂಗಳೂರಿನ ಭಟ್ಟರಹಳ್ಳಿ ಜಂಕ್ಷನ್ ಬಳಿ ಆರೋಪಿಗಳು ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದ ಕಾನ್‌ಸ್ಟೇಬಲ್ ಮಂಜುನಾಥ್ ಜಗಳ ಮಾಡುತ್ತಿದ್ದರು. ಇದನ್ನು ಗಮನಿಸಿ PSI ನಯನಾ ಪರಿಸ್ಥಿತಿ ನಿಭಾಯಿಸಲು ಸ್ಥಳಕ್ಕೆ ತೆರಳಿದರು. ಈ ವೇಳೆ ಆರೋಪಿಗಳು ನಯನಾ ಅವರ ಮೇಲೆಯೇ ಹಲ್ಲೆ ಮಾಡಿದ್ದಲ್ಲೇ 'ಎಮ್ಮೆ ತರ ಇದ್ದೀಯಾ, ಹೊಟ್ಟೆಗೇನು ತಿಂತೀಯಾ?' ಎಂದು ಬಾಡಿ ಶೇಮಿಂಗ್​ ಮಾಡಿದ್ದಾರೆ.​

ಈ ಘಟನೆ ಕರ್ತವ್ಯದಲ್ಲಿದ್ದ ಸಿಬ್ಬಂದಿಯ ಬಾಡಿವೋರ್ನ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ಸಾಕ್ಷ್ಯವನ್ನು ಆಧರಿಸಿ ನಾಲ್ವರು ಆರೋಪಿಗಳ ವಿರುದ್ಧ ಕೆ.ಆರ್. ಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Shocking: ವಾರಾಣಾಸಿ ಏರ್‌ಪೋರ್ಟ್‌ನಲ್ಲಿ ಆಕಸ್ಮಿಕ ಗುಂಡಿನ 'ದಾಳಿ': ಭದ್ರತಾ ಸಿಬ್ಬಂದಿ ಸೇರಿ ಇಬ್ಬರಿಗೆ ಗಾಯ

1st Test: ಆಸಿಸ್ ನೆಲದಲ್ಲೇ ಕಾಂಗರೂಗಳ ಬಗ್ಗು ಬಡಿದು ಇತಿಹಾಸ ಬರೆದ ಬಾಂಗ್ಲಾದೇಶ

ಆಸಿಸ್ ವಿರುದ್ಧ ಭರ್ಜರಿ ಜಯ, WTC Final Raceನಲ್ಲಿ 4ನೇ ಸ್ಥಾನಕ್ಕೆ ಜಿಗಿದ ಬಾಂಗ್ಲಾದೇಶ, ಭಾರತದ ಪರಿಸ್ಥಿತಿ ಏನು?

ಆಸಿಸ್ ವಿರುದ್ಧ ಟೆಸ್ಟ್ ಕ್ರಿಕೆಟ್ ಜರ್ನಿ ಆರಂಭಿಸಿದ ನೆಲದಲ್ಲೇ 23 ವರ್ಷಗಳ ಬಳಿಕ ಬಾಂಗ್ಲಾದೇಶ ಐತಿಹಾಸಿಕ ವಿಜಯ

'ಮಿಸ್ಟರ್ 10 ಪರ್ಸೆಂಟ್'; ಶೇ 3-4ರಷ್ಟಿರುವ ಹಿಂದೂಗಳನ್ನು ಸಹಿಸಿಕೊಳ್ಳುತ್ತಿದ್ದೇವೆ ಎಂದ ಪಾಕ್ ಅಧ್ಯಕ್ಷನಿಗೆ ತಿರುಗೇಟು ನೀಡಿದ ಜಾವೇದ್ ಅಖ್ತರ್!