ಎನ್ ಚಲುವರಾಯಸ್ವಾಮಿ  
ರಾಜ್ಯ

ಮುಂದಿನ ವರ್ಷ ಆಗಸ್ಟ್ ವೇಳೆಗೆ ಮೇಕೆದಾಟು ಯೋಜನೆಗೆ ಶಂಕುಸ್ಥಾಪನೆ: ಸಚಿವ ಎನ್. ಚಲುವರಾಯಸ್ವಾಮಿ

ನೀರಾವರಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೂಡಲೇ ಮೇಕೆದಾಟು ಯೋಜನೆಯ ಕಾಮಗಾರಿಯನ್ನು ತ್ವರಿತಗೊಳಿಸಲಾಗಿದೆ. ಯೋಜನೆಯ ವಿವರವಾದ ಯೋಜನಾ ವರದಿಯನ್ನು (DPR) ಅನುಮೋದನೆಗಾಗಿ ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಚಲುವರಾಯಸ್ವಾಮಿ ಹೇಳಿದರು.

ಮಂಡ್ಯ: ಮುಂದಿನ ವರ್ಷದ ಆಗಸ್ಟ್ ವೇಳೆಗೆ ಮೇಕೆದಾಟು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ ಎಂದು ಕೃಷಿ, ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ನಿನ್ನೆ ಶನಿವಾರ ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ರಾಜ್ಯದ ನೀರಾವರಿ ಯೋಜನೆಗಳು ಹಾಗೂ ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದರು.

ನೀರಾವರಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೂಡಲೇ ಮೇಕೆದಾಟು ಯೋಜನೆಯ ಕಾಮಗಾರಿಯನ್ನು ತ್ವರಿತಗೊಳಿಸಲಾಗಿದೆ. ಯೋಜನೆಯ ವಿವರವಾದ ಯೋಜನಾ ವರದಿಯನ್ನು (DPR) ಅನುಮೋದನೆಗಾಗಿ ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಚಲುವರಾಯಸ್ವಾಮಿ ಹೇಳಿದರು.

ಯೋಜನೆಗೆ ಸುಮಾರು 12,500 ಎಕರೆ ಭೂಮಿ ಅಗತ್ಯವಿದ್ದು, ಈಗಾಗಲೇ ಸುಮಾರು 20,000 ಎಕರೆ ಭೂಮಿಯನ್ನು ಗುರುತಿಸಲಾಗಿದೆ. ಅರಣ್ಯ ಭೂಮಿಗೆ ಪರ್ಯಾಯವಾಗಿ ಸೂಕ್ತ ಭೂಮಿಯನ್ನು ಗುರುತಿಸಲಾಗಿದ್ದು, ಅರಣ್ಯ ಪ್ರದೇಶಗಳಿಗೆ ಹಾನಿಯಾಗದಂತೆ ಯೋಜನೆಯನ್ನು ಅನುಷ್ಠಾನಗೊಳಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಜನರ ಹಿತದೃಷ್ಟಿಯಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಮೇಕೆದಾಟು ಯೋಜನೆಯಿಂದ ಕಾವೇರಿ ನೀರು ವಿವಾದಕ್ಕೆ ಶಾಶ್ವತ ಪರಿಹಾರ ದೊರೆಯಲಿದೆ ಎಂದು ಹೇಳಿದರು.

ಯೋಜನೆಯ ಕಾಮಗಾರಿಯನ್ನು ತ್ವರಿತಗೊಳಿಸಲು ತಾಂತ್ರಿಕ ಹಾಗೂ ಕಾನೂನು ತಂಡಗಳು ಕಾರ್ಯನಿರ್ವಹಿಸಲಿವೆ. ಕೇಂದ್ರ ಸರ್ಕಾರದೊಂದಿಗೆ ಪ್ರತಿನಿತ್ಯ ಈ ವಿಚಾರವಾಗಿ ಮಾತುಕತೆ ನಡೆಸಲು ಇಬ್ಬರು ನೀರಾವರಿ ಅಧಿಕಾರಿಗಳನ್ನು ದೆಹಲಿಯಲ್ಲೇ ನಿಯೋಜಿಸಲಾಗಿದೆ ಎಂದು ಸಚಿವರು ತಿಳಿಸಿದರು.

‘ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು ಹರಿಸಿಲ್ಲ’

ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಲಾಗಿದೆ ಎಂಬ ವರದಿಗಳ ಕುರಿತು ಸ್ಪಷ್ಟನೆ ನೀಡಿದ ಚಲುವರಾಯಸ್ವಾಮಿ, ಕೆಆರ್‌ಎಸ್‌ನಿಂದ ನೆರೆಯ ರಾಜ್ಯಕ್ಕೆ ನೀರನ್ನು ಹರಿಸಿಲ್ಲ ಎಂದು ಹೇಳಿದರು.

ಜೂನ್‌ನಿಂದಲೇ ತಮಿಳುನಾಡಿಗೆ ನೀರು ಹರಿಸಬೇಕಿತ್ತು. ಆದರೆ ಜೂನ್ ಅಥವಾ ಜುಲೈನಲ್ಲಿ ನಾವು ನೀರು ಹರಿಸಿಲ್ಲ. 3,500 ಕ್ಯುಸೆಕ್ ನೀರು ಹರಿಸುವಂತೆ ಆದೇಶ ಬಂದಾಗ, ವಾಸ್ತವವಾಗಿ ಅದಕ್ಕಿಂತ ಹೆಚ್ಚಿನ ಪ್ರಮಾಣದ ನೀರು ಹರಿಯಿತು. ಇದೀಗ 12,000 ಕ್ಯುಸೆಕ್ ನೀರು ಹರಿಸುವಂತೆ ಆದೇಶ ನೀಡಲಾಗಿದೆ. ಇದರಲ್ಲಿ ಸುಮಾರು 10,000 ಕ್ಯುಸೆಕ್ ನೀರನ್ನು ಕಬಿನಿ ಜಲಾಶಯದಿಂದ ಹರಿಸಲಾಗುತ್ತಿದೆ. ಜಿನುಗುವ ನೀರೂ ತಮಿಳುನಾಡಿನತ್ತ ಹರಿಯುತ್ತಿದೆ ಎಂದು ಹೇಳಿದರು.

ತಾಂತ್ರಿಕ ಕಾರಣಗಳಿಂದಾಗಿ ಸದ್ಯಕ್ಕೆ ಒಳಹರಿವು ಹಾಗೂ ಹೊರಹರಿವಿನ ಪ್ರಮಾಣದ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ಜನರು ಅನಗತ್ಯ ಗೊಂದಲ ಸೃಷ್ಟಿಸಬಾರದು ಎಂದು ಅವರು ಮನವಿ ಮಾಡಿದರು.

ಪ್ರತಿ ಸರ್ಕಾರದ ಅವಧಿಯಲ್ಲೂ ಮಳೆ ಕೊರತೆ ಉಂಟಾಗಿದೆ. ಆಗಸ್ಟ್ ಅಂತ್ಯದವರೆಗೂ ಮಳೆಯಾಗುವ ನಿರೀಕ್ಷೆಯಿದೆ. ಸೆಪ್ಟೆಂಬರ್ ವೇಳೆಗೆ ಕೆಆರ್‌ಎಸ್ ಜಲಾಶಯಕ್ಕೆ ಸಾಕಷ್ಟು ನೀರು ಹರಿದುಬರಲಿದೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದರು.

ಕಳೆದ 20 ದಿನಗಳಿಂದ ಕೆಆರ್‌ಎಸ್ ಜಲಾಶಯದ ನೀರನ್ನು ಕೆರೆಗಳಿಗೆ ಹಾಗೂ ನಿಂತಿರುವ ಬೆಳೆಗಳಿಗೆ ಪೂರೈಸಲಾಗುತ್ತಿದೆ.

ಹೇಮಾವತಿ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸುವಂತೆಯೂ ಸೂಚನೆ ನೀಡಲಾಗಿದೆ. ಅಲ್ಪಾವಧಿಯ ಬೆಳೆಗಳಿಗೆ ನೀರು ಹರಿಸುವ ಕುರಿತು ಬುಧವಾರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಮಂಡ್ಯದಲ್ಲಿ ಕೃಷಿ, ಹೈನುಗಾರಿಕೆ ಕಾಲೇಜುಗಳ ಸ್ಥಾಪನೆ

ಮಂಡ್ಯದಲ್ಲಿ ಕೃಷಿ ಕಾಲೇಜು ಹಾಗೂ ಹೈನುಗಾರಿಕೆ ಕಾಲೇಜು ಸ್ಥಾಪಿಸಲಾಗುವುದು ಎಂದು ಚಲುವರಾಯಸ್ವಾಮಿ ಘೋಷಿಸಿದರು.

ರಾಜ್ಯದ ಮೊದಲ ಹೈನುಗಾರಿಕೆ ಕಾಲೇಜನ್ನು ಮಂಡ್ಯದ ಸುತ್ತೂರಿನಲ್ಲಿ ಸ್ಥಾಪಿಸಲಾಗುವುದು ಎಂದು ಅವರು ಹೇಳಿದರು.

ಇದಲ್ಲದೆ, ಮಂಡ್ಯ ನಗರದಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಉಚಿತ ವೈ-ಫೈ ಸೌಲಭ್ಯ ಕಲ್ಪಿಸಲಾಗುವುದು ಎಂದು ಸಚಿವರು ಘೋಷಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಮತಾ ಆಪ್ತ ಹಾಗೂ ಮಾಜಿ ಉಪಸಭಾಪತಿ ಅಸೀಶ್ ಬ್ಯಾನರ್ಜಿ TMC ಕಚೇರಿಯಲ್ಲಿ ಶವವಾಗಿ ಪತ್ತೆ!

ಮೋದಿನೇ ಡಿ.ಕೆ - ಡಿ.ಕೆ ಅಂತಿದ್ದಾರೆ ನೀವ್ಯಾಕೆ ತಲೆ ಕೆಡಿಸಿಕೊಳ್ಳುತ್ತಿದ್ದೀರಾ? ಫ್ರೀಡಂ ಹಬ್ಬದಲ್ಲಿ ಡಿ.ಕೆ ಶಿವಕುಮಾರ್ ಟಾಂಗ್

ನಿಂತಿಲ್ಲ ಸೋನಿಯಾ ಗಾಂಧಿ ವಿರುದ್ಧ 'ವಂದೇ ಮಾತರಂ' ಟೀಕೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಂಚಿಕೊಂಡ ವಿಡಿಯೊದಲ್ಲಿ ಏನಿದೆ?-Video

ಹನೂರು ಶೂಟೌಟ್ ಪ್ರಕರಣ: ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ; ಸಿಎಂ ಡಿ ಕೆ ಶಿವಕುಮಾರ್

NALSAR ವಿದ್ಯಾರ್ಥಿಗಳ ನಿಷೇಧ ಆದೇಶಕ್ಕೆ BCI ಅಧ್ಯಕ್ಷರ ಕ್ಷಮೆ!