ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಭಾನುವಾರ ಕರ್ನಾಟಕ ರಾಜ್ಯ ಬ್ಯಾಸ್ಕೆಟ್‌ಬಾಲ್ ಅಸೋಸಿಯೇಷನ್‌ನಿಂದ ಬ್ಯಾಸ್ಕೆಟ್‌ಬಾಲ್ ಆಟಗಾರರನ್ನು ಸನ್ಮಾನಿಸಲಾಯಿತು. 
ರಾಜ್ಯ

ಬೆಂಗಳೂರಿನ ಕಂಠೀರವ ಕ್ರೀಡಾಂಗಣಕ್ಕೆ ಹೊಸ ರೂಪ: 5,000 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಗೆ DCM ಪರಮೇಶ್ವರ್‌ ಯೋಜನೆ

ಕ್ರೀಡಾಪಟುಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯ ವಿವಿಧ ನೇಮಕಾತಿಗಳಲ್ಲಿ 2% ಮೀಸಲಾತಿ ನೀಡಲಾಗುತ್ತಿದೆ. ಬಳಿಕ ಇದನ್ನು 3%ಕ್ಕೆ ಹೆಚ್ಚಿಸಲಾಗಿದೆ.

ಬೆಂಗಳೂರು: ನಗರದ ಕಂಠೀರವ ಕ್ರೀಡಾಂಗಣಕ್ಕೆ ಹೊಸ ರೂಪ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಕ್ರೀಡಾ ಕ್ಷೇತ್ರದಲ್ಲಿ ಕರ್ನಾಟಕವನ್ನು ದೇಶದ ಮುಂಚೂಣಿ ರಾಜ್ಯವನ್ನಾಗಿಸುವ ಉದ್ದೇಶದಿಂದ ಕಂಠೀರವ ಕ್ರೀಡಾಂಗಣವನ್ನು ಸುಮಾರು 5,000 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕ್ರೀಡಾ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಕಂಠೀರವ ಕ್ರೀಡಾಂಗಣದ ಕರ್ನಾಟಕ ಒಲಿಂಪಿಕ್ ಭವನದಲ್ಲಿ ಕರ್ನಾಟಕ ರಾಜ್ಯ ಬಾಸ್ಕೆಟ್‌ಬಾಲ್ ಸಂಸ್ಥೆ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಚಾಂಪಿಯನ್‌ಶಿಪ್‌ಗಳಲ್ಲಿ ಉತ್ತಮ ಸಾಧನೆ ಮಾಡಿದ ಕಿರಿಯ ಹಾಗೂ ಯುವ ಬಾಸ್ಕೆಟ್‌ಬಾಲ್ ತಂಡಗಳ ಆಟಗಾರರನ್ನು ಸನ್ಮಾನಿಸಿದರು.

ಕ್ರೀಡಾಪಟುಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯ ವಿವಿಧ ನೇಮಕಾತಿಗಳಲ್ಲಿ 2% ಮೀಸಲಾತಿ ನೀಡಲಾಗುತ್ತಿದೆ. ಬಳಿಕ ಇದನ್ನು 3%ಕ್ಕೆ ಹೆಚ್ಚಿಸಲಾಗಿದೆ. ಇದರಡಿ ಹಲವು ಕ್ರೀಡಾಪಟುಗಳನ್ನು ಪಿಎಸ್‌ಐ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳಿಗೆ ನೇಮಕ ಮಾಡಲಾಗಿದೆ ಎಂದು ಹೇಳಿದರು.

ಪದಕ ವಿಜೇತ ಕ್ರೀಡಾಪಟುಗಳಿಗೆ ನೇರ ನೇಮಕಾತಿ ವ್ಯವಸ್ಥೆಯನ್ನೂ ಜಾರಿಗೆ ತರಲಾಗಿದೆ. ರಾಜ್ಯದಲ್ಲಿ ಖಾಲಿ ಇರುವ 72,000 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ನಡೆಯುತ್ತಿದ್ದು, ಈ ನೇಮಕಾತಿಗಳಲ್ಲಿ ಕ್ರೀಡಾಪಟುಗಳಿಗೆ ಶೇ.2ರ ಮೀಸಲಾತಿಯ ಪ್ರಯೋಜನ ದೊರೆಯಲಿದೆ ಎಂದು ತಿಳಿಸಿದರು.

ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಎಲ್ಲ ಕ್ರೀಡಾಪಟುಗಳಿಗೆ ತಲಾ ರೂ.5 ಲಕ್ಷ ಪ್ರೋತ್ಸಾಹಧನ ನೀಡಲಾಗಿದೆ. ಇನ್ನು ಮುಂದೆ ಪದಕ ವಿಜೇತರಿಗೆ ರೂ.15 ಲಕ್ಷ ಪ್ರೋತ್ಸಾಹಧನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಹಾರದ ಲಖಿಸರಾಯಿ ದೇವಾಲಯದ ಬಳಿ ಭೀಕರ ಕಾಲ್ತುಳಿತ: 7 ಭಕ್ತರ ಸಾವು, ಹಲವರಿಗೆ ಗಾಯ

ಬೆಂಗಳೂರಿನ ಕ್ಲಾರೆನ್ಸ್ ಶಾಲೆಯಲ್ಲಿ H1N1 ಫ್ಲೂ ಆತಂಕ: ಇಬ್ಬರಲ್ಲಿ ಸೋಂಕು ದೃಢ, 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರು, ಕಬಾಬ್ ಅಂಗಡಿಗಳ ತೆರವಿಗೆ ಆಗ್ರಹ!

'ನಾನು ನಲ್ಸಾರ್ ಆಹ್ವಾನವನ್ನೇ ಸ್ವೀಕರಿಸಿಲ್ಲ; ಅಲ್ಲಿಗೆ ಹೋಗುವ ಪ್ರಶ್ನೆಯೇ ಇಲ್ಲ': CJI ಸೂರ್ಯಕಾಂತ್ ಸ್ಪಷ್ಟನೆ

ಚಾಮರಾಜನಗರ ಶೂಟೌಟ್‌ ಕೇಸ್: ‘ಮೃತರು ರೈತರೇ ಹೊರತು ಬೇಟೆಗಾರರಲ್ಲ’; ಮೂವರು ತಮಿಳರ ಹತ್ಯೆಗೆ ಸಿಎಂ ವಿಜಯ್ ತೀವ್ರ ಖಂಡನೆ, ಉನ್ನತ ಮಟ್ಟದ ತನಿಖೆಗೆ ಆಗ್ರಹ..!

ಪರೀಕ್ಷೆ ಅಕ್ರಮ; ಜಾರ್ಖಂಡ್ ಸಿಎಂ ಸೊರೇನ್, ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಪ್ರತಿಕೃತಿ ದಹಿಸಿ JPSC-JSSC ಆಕಾಂಕ್ಷಿಗಳ ಪ್ರತಿಭಟನೆ