ನಾಗೇಶ್ ಅವರ ಅಂತಿಮ ದರ್ಶನ ಪಡೆದ ಡಿಕೆ.ಶಿವಕುಮಾರ್. 
ರಾಜ್ಯ

ಬಿ.ಸಿ.ನಾಗೇಶ್ ನನ್ನ ಹಳೆಯ ಸ್ನೇಹಿತ, ಪ್ರಾಥಮಿಕ ಶಿಕ್ಷಣಕ್ಕೆ ಅವರ ಕೊಡುಗೆ ಶ್ಲಾಘನೀಯ: ಸಿಎಂ ಡಿಕೆ.ಶಿವಕುಮಾರ್ ಸಂತಾಪ- Video

ನಾಗೇಶ್ ನನ್ನ ಹಳೆಯ ಸ್ನೇಹಿತರಾಗಿದ್ದು, ಶಾಸಕರಾಗಿ ಹಾಗೂ ಸಚಿವರಾಗಿ ತಮ್ಮೊಂದಿಗೆ ಸೇವೆ ಸಲ್ಲಿಸಿದ್ದರು. ಪ್ರಾಥಮಿಕ ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ ಶ್ಲಾಘನೀಯ ಎಂದು ಹೇಳಿದರು.

ಬೆಂಗಳೂರು: ಮಾಜಿ ಶಾಸಕ ಹಾಗೂ ಸಚಿವ ಬಿ.ಸಿ. ನಾಗೇಶ್ ಅವರ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ನಾಗೇಶ್ ಅವರ ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದ ಅವರು, ನಾಗೇಶ್ ಅವರು ತಮ್ಮೊಂದಿಗೆ ಶಾಸಕರಾಗಿ ಹಾಗೂ ಸಚಿವರಾಗಿ ಸೇವೆ ಸಲ್ಲಿಸಿದ್ದರು ಎಂದು ಸ್ಮರಿಸಿದರು.

ನಾಗೇಶ್ ನನ್ನ ಹಳೆಯ ಸ್ನೇಹಿತರಾಗಿದ್ದು, ಶಾಸಕರಾಗಿ ಹಾಗೂ ಸಚಿವರಾಗಿ ತಮ್ಮೊಂದಿಗೆ ಸೇವೆ ಸಲ್ಲಿಸಿದ್ದರು. ಪ್ರಾಥಮಿಕ ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ ಶ್ಲಾಘನೀಯ ಎಂದು ಹೇಳಿದರು.

ಅವರ ಅಗಲಿಕೆ ಕುಟುಂಬ ಹಾಗೂ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದ್ದು, ರಾಜ್ಯ ಸರ್ಕಾರದ ವತಿಯಿಂದ ಅವರಿಗೆ ಸೂಕ್ತ ಗೌರವ ಸಲ್ಲಿಸಲಾಗುವುದು ಎಂದು ತಿಳಿಸಿದರು.

ನನ್ನ ಹಳೆಯ ಸ್ನೇಹಿತ ನಾಗೇಶ್ ಅವರಿಗೆ ಗೌರವ ಸಲ್ಲಿಸಲು ಬಂದಿದ್ದೇನೆ. ಅವರು ಪ್ರಾಥಮಿಕ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಕೆಲಸ ಮಾಡಿದ್ದರು. ಅವರಿಗೆ ಗೌರವ ಸಲ್ಲಿಸುವುದು ನನ್ನ ಕರ್ತವ್ಯ. ರಾಜ್ಯ ಸರ್ಕಾರವೂ ಅವರಿಗೆ ಸಂಪೂರ್ಣ ಗೌರವ ನೀಡಲಿದೆ. ಅವರ ನಿಧನವು ಕುಟುಂಬಕ್ಕೆ ಮಾತ್ರವಲ್ಲ, ಅವರ ಪಕ್ಷಕ್ಕೂ ದೊಡ್ಡ ನಷ್ಟವಾಗಿದೆ. ಅವರ ಆತ್ಮಕ್ಕೆ ದೇವರು ಶಾಂತಿ ನೀಡಲಿ” ಎಂದು ಹೇಳಿದರು.

ಇದೇ ವೇಳೆ ತಮ್ಮ ದೆಹಲಿ ಹಾಗೂ ಚೆನ್ನೈ ಪ್ರವಾಸದ ಬಗ್ಗೆಯೂ ಮಾಹಿತಿ ನೀಡಿದ ಅವರು, ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳುತ್ತಿರುವುದಾಗಿ ತಿಳಿಸಿದರು.

ನಾಳೆ ಚೆನ್ನೈಗೆ ಭೇಟಿ ನೀಡಲಿದ್ದೇನೆ. ದಕ್ಷಿಣ ರಾಜ್ಯಗಳಿಗೆ ಸಂಬಂಧಿಸಿದ ವಿಚಾರಗಳ ಕುರಿತು ಚರ್ಚಿಸಲು ಗೃಹ ಸಚಿವರು ಸಭೆ ಕರೆದಿದ್ದಾರೆ. ಸಭೆಯಲ್ಲಿ ಹಲವು ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ” ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

ಕ್ಷಿಪಣಿ ದಾಳಿ ಆರೋಪ: Iranಗೆ UAE ಶಾಕ್, ಎಲ್ಲಾ ವ್ಯಾಪಾರ-ವಾಣಿಜ್ಯ ವಹಿವಾಟು ಸಂಪೂರ್ಣ ಸ್ಥಗಿತ..!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್'ಗೆ VIP ಟ್ರೀಟ್‌ಮೆಂಟ್?: ಕಾನೂನಿನ ಮುಂದೆ ಎಲ್ಲರೂ ಒಂದೇ, ಜೈಲಿನಲ್ಲಿ ಯಾರಿಗೂ ವಿಶೇಷ ಸೌಲಭ್ಯವಿಲ್ಲ; ಸರ್ಕಾರ ಸ್ಪಷ್ಟನೆ