ನರೇಂದ್ರ ದಾಭೋಲ್ಕರ್ 
ರಾಜ್ಯ

ವಿಚಾರವಾದಿ ದಾಭೋಲ್ಕರ್ ಹತ್ಯೆ ಪ್ರಕರಣ: ಸಚಿನ್ ಅಂದುರೆಗೆ ಜಾಮೀನು, ಜೀವಾವಧಿ ಶಿಕ್ಷೆ ಅಮಾನತು

ವಿಚಾರವಾದಿ ಗೋವಿಂದ್ ಪನ್ಸಾರೆ ಹತ್ಯೆ ಪ್ರಕರಣದಲ್ಲೂ ಸಚಿನ್ ಅಂದುರೆಗೆ ಈಗಾಗಲೇ ಜಾಮೀನು ದೊರೆತಿತ್ತು. ಆದರೆ, ದಾಭೋಲ್ಕರ್ ಹತ್ಯೆ ಪ್ರಕರಣದಲ್ಲಿ ಜಾಮೀನು ಸಿಗದ ಹಿನ್ನೆಲೆಯಲ್ಲಿ ಅವರು ಜೈಲಿನಲ್ಲೇ ಮುಂದುವರಿದಿದ್ದರು.

ಮುಂಬೈ: ಮಹಾರಾಷ್ಟ್ರದ ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿನ್ ಅಂದುರೆಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದೇ ವೇಳೆ, 2024ರಲ್ಲಿ ಅಧೀನ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನೂ ಅಮಾನತಿನಲ್ಲಿರಿಸಿದೆ.

ನ್ಯಾಯಮೂರ್ತಿಗಳಾದ ಸಾರಂಗ್ ಕೊತ್ವಾಲ್ ಮತ್ತು ರಂಜಿತಾ ಸಿನ್ಹಾ ಭೋಂಸಾಲೆ ಅವರ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಸಹ ದೋಷಿ ಶರದ್ ಕಲಾಸ್ಕರ್ ಗೆ ಈ ವರ್ಷದ ಏಪ್ರಿಲ್‌ನಲ್ಲಿ ನ್ಯಾಯಮೂರ್ತಿ ಅಜಯ್ ಗಡ್ಕರಿ ನೇತೃತ್ವದ ಪೀಠ ಜಾಮೀನು ನೀಡಿತ್ತು.

ವಿಚಾರವಾದಿ ಗೋವಿಂದ್ ಪನ್ಸಾರೆ ಹತ್ಯೆ ಪ್ರಕರಣದಲ್ಲೂ ಸಚಿನ್ ಅಂದುರೆಗೆ ಈಗಾಗಲೇ ಜಾಮೀನು ದೊರೆತಿತ್ತು. ಆದರೆ, ದಾಭೋಲ್ಕರ್ ಹತ್ಯೆ ಪ್ರಕರಣದಲ್ಲಿ ಜಾಮೀನು ಸಿಗದ ಹಿನ್ನೆಲೆಯಲ್ಲಿ ಅವರು ಜೈಲಿನಲ್ಲೇ ಮುಂದುವರಿದಿದ್ದರು.

ಇದೀಗ ದಾಭೋಲ್ಕರ್ ಹತ್ಯೆ ಪ್ರಕರಣದಲ್ಲೂ ಜಾಮೀನು ದೊರೆತಿರುವುದರಿಂದ ಸಚಿನ್ ಅಂದುರೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

ಮೂಢನಂಬಿಕೆ ವಿರೋಧಿ ಸಂಸ್ಥೆಯಾದ ‘ಮಹಾರಾಷ್ಟ್ರ ಅಂದಶ್ರದ್ಧಾ ನಿರ್ಮೂಲನ ಸಮಿತಿ’ಯ ಸಂಸ್ಥಾಪಕರಾದ 67 ವರ್ಷ ವಯಸ್ಸಿನ ದಾಬೋಲ್ಕರ್ ಅವರನ್ನು ಪುಣೆಯಲ್ಲಿ 2013 ಆಗಸ್ಟ್ 20ರಂದು ಮೋಟಾರು ಸೈಕಲ್‌ನಲ್ಲಿ ಆಗಮಿಸಿದ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದರು.

ಆರಂಭದಲ್ಲಿ ಈ ಪ್ರಕರಣ ತನಿಖೆಯನ್ನು ಸ್ಥಳೀಯ ಪೊಲೀಸರು ನಡೆಸಿದ್ದರು. ಆದರೆ, ಅವರ ಪುತ್ರಿ ಮುಕ್ತಾ ದಾಬೋಲ್ಕರ್ ಅವರು ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ ನಂತರ, 2014ರಲ್ಲಿ ತನಿಖೆಯನ್ನು ಸಿಬಿಐಗೆ ವರ್ಗಾಯಿಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

ಕ್ಷಿಪಣಿ ದಾಳಿ ಆರೋಪ: Iranಗೆ UAE ಶಾಕ್, ಎಲ್ಲಾ ವ್ಯಾಪಾರ-ವಾಣಿಜ್ಯ ವಹಿವಾಟು ಸಂಪೂರ್ಣ ಸ್ಥಗಿತ..!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್'ಗೆ VIP ಟ್ರೀಟ್‌ಮೆಂಟ್?: ಕಾನೂನಿನ ಮುಂದೆ ಎಲ್ಲರೂ ಒಂದೇ, ಜೈಲಿನಲ್ಲಿ ಯಾರಿಗೂ ವಿಶೇಷ ಸೌಲಭ್ಯವಿಲ್ಲ; ಸರ್ಕಾರ ಸ್ಪಷ್ಟನೆ