ಕೃಷ್ಣ ಬೈರೇಗೌಡ 
ರಾಜ್ಯ

ಖಾತೆ ಹಂಚಿಕೆಯಲ್ಲಿ ಬದಲಾವಣೆ; ಕೃಷ್ಣ ಬೈರೇಗೌಡಗೆ ಮತ್ತೊಂದು ಮಹತ್ವದ ಖಾತೆ, ಹೆಚ್ಚುವರಿಯಾಗಿ ಸಂಸದೀಯ ವ್ಯವಹಾರಗಳ ಹೊಣೆ

ಕೃಷ್ಣಬೈರೇಗೌಡ ಅವರು ಈಗಾಗಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರ, ನಗರದ ಐದು ಮಹಾನಗರ ಪಾಲಿಕೆಗಳು, ಜಲಮಂಡಳಿ ಹಾಗೂ ನಮ್ಮ ಮೆಟ್ರೋ ಸೇರಿದಂತೆ ಬೆಂಗಳೂರಿನ ಮೂಲಸೌಕರ್ಯಕ್ಕೆ ಸಂಬಂಧಿಸಿದ ಪ್ರಮುಖ ವಿಭಾಗಗಳ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.

ಬೆಂಗಳೂರು: ರಾಜ್ಯ ಸಚಿವ ಸಂಪುಟದ ಖಾತೆ ಹಂಚಿಕೆಯಲ್ಲಿ ಮತ್ತೊಂದು ಬದಲಾವಣೆಯಾಗಿದ್ದು, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಅವರಿಗೆ ಸಂಸದೀಯ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಹೊಣೆ ನೀಡಲಾಗಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಶಿಫಾರಸಿನ ಮೇರೆಗೆ ಖಾತೆಗಳ ಮರುಹಂಚಿಕೆ ಮಾಡಲಾಗಿದೆ ಎಂದು ರಾಜ್ಯಪಾಲರ ಕಚೇರಿ ಪ್ರಕಟಣೆ ತಿಳಿಸಿದೆ.

ಕೃಷ್ಣಬೈರೇಗೌಡ ಅವರು ಈಗಾಗಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರ, ನಗರದ ಐದು ಮಹಾನಗರ ಪಾಲಿಕೆಗಳು, ಜಲಮಂಡಳಿ ಹಾಗೂ ನಮ್ಮ ಮೆಟ್ರೋ ಸೇರಿದಂತೆ ಬೆಂಗಳೂರಿನ ಮೂಲಸೌಕರ್ಯಕ್ಕೆ ಸಂಬಂಧಿಸಿದ ಪ್ರಮುಖ ವಿಭಾಗಗಳ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.

ಇದೀಗ ಸಂಸದೀಯ ವ್ಯವಹಾರಗಳ ಖಾತೆಯೂ ಸೇರ್ಪಡೆಯಾಗಿರುವುದರಿಂದ ಅವರ ಹೊಣೆಗಾರಿಕೆ ಮತ್ತಷ್ಟು ವಿಸ್ತರಣೆಗೊಂಡಿದೆ.

ಇದೇ ವೇಳೆ, ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ಸಂಸ್ಥೆಗಳಾದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹಾಗೂ ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ (ಬಿಎಂಆರ್‌ಡಿಎ) ಉಸ್ತುವಾರಿಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ತಮ್ಮ ಬಳಿ ಉಳಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

ಕ್ಷಿಪಣಿ ದಾಳಿ ಆರೋಪ: Iranಗೆ UAE ಶಾಕ್, ಎಲ್ಲಾ ವ್ಯಾಪಾರ-ವಾಣಿಜ್ಯ ವಹಿವಾಟು ಸಂಪೂರ್ಣ ಸ್ಥಗಿತ..!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್'ಗೆ VIP ಟ್ರೀಟ್‌ಮೆಂಟ್?: ಕಾನೂನಿನ ಮುಂದೆ ಎಲ್ಲರೂ ಒಂದೇ, ಜೈಲಿನಲ್ಲಿ ಯಾರಿಗೂ ವಿಶೇಷ ಸೌಲಭ್ಯವಿಲ್ಲ; ಸರ್ಕಾರ ಸ್ಪಷ್ಟನೆ