ಕ್ರೈಂ ನ್ಯೂಸ್ Online Desk
ರಾಜ್ಯ

ಯಾದಗಿರಿಯಲ್ಲಿ ಬೆಚ್ಚಿಬೀಳಿಸುವ ಘಟನೆ; ಹೆಂಡತಿ ಮೇಲಿನ ಕೋಪಕ್ಕೆ, ಮೂವರು ಮಕ್ಕಳನ್ನು ಬೈಕ್‌ನಲ್ಲಿ ಕರೆದೊಯ್ದು ಇಬ್ಬರನ್ನು ಕ್ಯಾನಲ್‌ಗೆ ಎಸೆದ ಪಾಪಿ ತಂದೆ!

ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಎನ್ನುತ್ತಾರೆ. ಆದರೆ, ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಗ್ರಾಮದಲ್ಲಿ ನಡೆದ ಗಂಡ ಹೆಂಡತಿಯ ಜಗಳ, ತಾವೇ ಜನ್ಮ ಕೊಟ್ಟ ಮಕ್ಕಳನ್ನ ಕೊಲೆ ಮಾಡುವ ತನಕ ಹೋಗಿದೆ. ಆ ಕುರಿತ ವರದಿ ಇಲ್ಲಿದೆ:

ಶಹಾಪುರ (ಯಾದಗಿರಿ): ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಎನ್ನುತ್ತಾರೆ. ಆದರೆ, ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಗ್ರಾಮದಲ್ಲಿ ನಡೆದ ಗಂಡ ಹೆಂಡತಿಯ ಜಗಳ, ತಾವೇ ಜನ್ಮ ಕೊಟ್ಟ ಮಕ್ಕಳನ್ನ ಕೊಲೆ ಮಾಡುವ ತನಕ ಹೋಗಿದೆ. ಹೌದು, ಶಹಾಪುರ ತಾಲೂಕಿನ ಗಂಗನಾಳ್ ಗ್ರಾಮದ ಶಾಂತಪ್ಪ ಬಿರೆದಾರ್ ಎಂಬಾತ ಹೆಂಡತಿ ಜೊತೆಗೆ ಜಗಳ ಮಾಡಿಕೊಂಡು, ತನ್ನ ಇಬ್ಬರು ಮಕ್ಕಳನ್ನು ಕಾಲುವೆಗೆ (ಕ್ಯಾನಲ್) ಎಸೆದಿರುವ ಆಘಾತಕಾರಿ ಘಟನೆ ನಡೆದಿದೆ. ಆ ಕುರಿತ ವರದಿ ಇಲ್ಲಿದೆ:

ಏನಿದು ಘಟನೆ?

ಗಂಗನಾಳ್ ಗ್ರಾಮದಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ, ಕಕ್ಕಸಗೇರ ಗ್ರಾಮದ ನಿವಾಸಿಯಾದ ಶಾಂತಪ್ಪ ಬಿರೆದಾರ್ ಮತ್ತು ಆತನ ಪತ್ನಿ ರೇಣುಕಾ ನಡುವೆ, ಮಂಗಳವಾರ ಸಂಜೆ ತೀವ್ರ ಕೌಟುಂಬಿಕ ಕಲಹ ಉಂಟಾಗಿದೆ. ಇದರಿಂದ ತೀವ್ರ ಕೋಪಗೊಂಡ ಶಾಂತಪ್ಪ, ತನ್ನ ಮೂವರು ಮಕ್ಕಳನ್ನು ಬೈಕ್ ಮೇಲೆ ಕೂರಿಸಿಕೊಂಡು ಹೋಗಿ, ಗೋಗಿ ಗ್ರಾಮದ ಬಳಿ ಇರುವ ಬೋರುಕ ಕಂಪನಿ ಹತ್ತಿರದ ಕ್ಯಾನಲ್‌ಗೆ ತಾನೇ ಜನ್ಮ ನೀಡಿದ ಇಬ್ಬರು ಮಕ್ಕಳನ್ನು ಎಸೆದಿದ್ದಾನೆ. ಇನ್ನು, ಮೃತರನ್ನು 9 ವರ್ಷದ ಸಾನ್ವಿ ಮತ್ತು 2 ವರ್ಷದ ಸೃಜನ್ ಎಂದು ಗುರುತಿಸಲಾಗಿದೆ. 

ಮತ್ತೊಬ್ಬ ಮಗಳು ಬಚಾವ್

ಹೆಂಡತಿ ಜೊತೆ ಜಗಳವಾಡಿ ಮೂವರು ಮಕ್ಕಳನ್ನು ಬೈಕ್‌ನಲ್ಲಿ ಕೂರಿಸಿಕೊಂಡು ತೆರಳಿದ್ದ ಶಾಂತಪ್ಪ ಬಿರೆದಾರ್, ಈ ಪೈಕಿ ಇಬ್ಬರು ಮಕ್ಕಳನ್ನ ಕಾಲುವೆಗೆ ಬಿಸಾಡಿದ್ದಾನೆ. ಆದರೆ,  ಓರ್ವ ಮಗಳನ್ನು ಅಲ್ಲಿಂದ ವಾಪಸ್ ಕರೆತಂದು ತಾಯಿಗೆ ಒಪ್ಪಿಸಿದ್ದ ಎನ್ನಲಾಗ್ತಿದೆ. ಏತನ್ಮಧ್ಯೆ, ಆರೋಪಿ ಶಾಂತಪ್ಪ ಬಿರೆದಾರ್, ಪೊಲೀಸರ ಎದುರು ತಾನೇ ಮಕ್ಕಳನ್ನು ಕಾಲುವೆಗೆ ಎಸೆದಿದ್ದಾಗಿ ಒಪ್ಪಿಕೊಂಡಿದ್ದಾನೆ. ಇನ್ನು, ಗೋಗಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿ, ಆರೋಪಿ ತಂದೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತೊಂದೆಡೆ, ಮಕ್ಕಳಿಗಾಗಿ ಕಾಲುವೆಯಲ್ಲಿ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿ ಇನ್ನು ಕೂಡ ಶೋಧ ಕಾರ್ಯ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

Ind Vs SL: ಮಾನವ್ ಸುತಾರ್ ದಾಖಲೆ; 600ನೇ ಟೆಸ್ಟ್ ಪಂದ್ಯದ ಗೆದ್ದು ಸಂಭ್ರಮಿಸಿದ ಟೀಂ ಇಂಡಿಯಾ!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

'ರಾಹುಲ್ ಗಾಂಧಿ' ಕಾರಣಕ್ಕೆ ₹40 ಲಕ್ಷ ಪ್ಯಾಕೇಜ್, ಹ್ಯಾಂಡ್‌ಸಮ್ ಹುಡುಗನನ್ನೇ ರಿಜೆಕ್ಟ್ ಮಾಡಿದ ಹುಡುಗಿ!

ಬಿಡದಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ಅಕ್ರಮ ಪತ್ತೆ; ₹4.91 ಕೋಟಿ ಮೌಲ್ಯದ ನಕಲಿ ಔಷಧಗಳನ್ನು ವಶಪಡಿಸಿಕೊಂಡ FDA!