ನಾಗಲಕ್ಷ್ಮಿ ಚೌಧರಿ ಮತ್ತು ಪವಿತ್ರಾ ಗೌಡ 
ರಾಜ್ಯ

ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ, ಆಕೆ ನನ್ನ ಮಗಳಿದ್ದಂತೆ: ಅವರ ಸ್ಥಿತಿ ಹೇಳಬಾರದು; ನಾಗಲಕ್ಷ್ಮೀ ಚೌಧರಿ

ಮಹಿಳಾ ಕೈದಿಗಳನ್ನು ಇಟ್ಟಿರುವ ಬ್ಯಾರಕ್‌ಗಳನ್ನು ಪರಿಶೀಲಿಸಿದ್ದೇನೆ. ಕೈದಿಗಳಿಗೆ ನೀಡುವ ಊಟ, ಸೋಪು, ಪೇಸ್ಟ್‌ ಸೇರಿದಂತೆ ಇತರೆ ಸೌಲಭ್ಯಗಳನ್ನೂ ಪರಿಶೀಲಿಸಿದ್ದೇನೆ. ಇದೇ ವೇಳೆ ಸೊಳ್ಳೆಗಳ ಕಾಟ ವಿಪರೀತವಿದೆ ಎಂಬುದಾಗಿ ಹಲವು ಕೈದಿಗಳು ನೋವು ತೋಡಿಕೊಂಡರು ಎಂದು ಹೇಳಿದರು.

ಬೆಂಗಳೂರು: ಜೈಲಿನಲ್ಲಿ ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ. ಅವರ ಸ್ಥಿತಿ ನೋವಿನಿಂದ ಕೂಡಿದೆ. ತಾಯಿಯಾಗಿ ನಮಗೆ ಪವಿತ್ರಾಗೌಡ ಅಥವಾ ಇತರ ಯಾವುದೇ ಹೆಣ್ಣುಮಗಳು ಇರಲಿ ಎಲ್ಲರೂ ಒಂದೇ, ಆಕೆಯೂ ನನಗೆ ಮಗಳ ಸಮಾನ’ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಹೇಳಿದ್ದಾರೆ.

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಮಹಿಳಾ ಕೈದಿಗಳ ಯೋಗಕ್ಷೇಮ ಹಾಗೂ ಸಮಸ್ಯೆಗಳನ್ನು ಪರಿಶೀಲಿಸಿದ ಬಳಿಕ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಪವಿತ್ರಾಗೌಡ ಮತ್ತು ಎಲ್ಲರ ಜೊತೆಗೆ ಮಾತನಾಡಿದ್ದೇನೆ.

ಮಹಿಳಾ ಕೈದಿಗಳನ್ನು ಇಟ್ಟಿರುವ ಬ್ಯಾರಕ್‌ಗಳನ್ನು ಪರಿಶೀಲಿಸಿದ್ದೇನೆ. ಕೈದಿಗಳಿಗೆ ನೀಡುವ ಊಟ, ಸೋಪು, ಪೇಸ್ಟ್‌ ಸೇರಿದಂತೆ ಇತರೆ ಸೌಲಭ್ಯಗಳನ್ನೂ ಪರಿಶೀಲಿಸಿದ್ದೇನೆ. ಇದೇ ವೇಳೆ ಸೊಳ್ಳೆಗಳ ಕಾಟ ವಿಪರೀತವಿದೆ ಎಂಬುದಾಗಿ ಹಲವು ಕೈದಿಗಳು ನೋವು ತೋಡಿಕೊಂಡರು ಎಂದು ಹೇಳಿದರು.

ಪವಿತ್ರಾ ಗೌಡ ಸೇರಿದಂತೆ ಹಲವು ಕೈದಿಗಳನ್ನು ಭೇಟಿ ಮಾಡಿ ಮಾಹಿತಿ ಪಡೆದುಕೊಂಡೆ. ಅವರ ಸ್ಥಿತಿ ಹೇಳಬಾರದು. ಪವಿತ್ರಾ ನನಗೆ ಮಗಳ ಸಮಾನ. ಕಾನೂನು ಪ್ರಕಾರ ಏನು ಆಗಬೇಕೊ ಅದು ಆಗುತ್ತದೆ. ಮಹಿಳೆಯರು ಭಾವನಾತ್ಮಕ ಜೀವಿಗಳು. ಇತರೆ ಮಹಿಳಾ ಕೈದಿಗಳ ಸಮಸ್ಯೆಯನ್ನೂ ಆಲಿಸಿದ್ದೇನೆ ಎಂದು ಪ್ರಶ್ನೆಗೆ ಉತ್ತರಿಸಿದರು. ಒಂದು ತಪ್ಪನ್ನು ಮಾಡಿ ಜೈಲಿಗೆ ಹೋಗಿರುತ್ತಾರೆ. ಮತ್ತೆ ನಾವು ಅವರ ಬಗ್ಗೆ ಹೆಚ್ಚಾಗಿ ಮಾತನಾಡಿದಾಗ ಮಾನಸಿಕವಾಗಿ ಕುಗ್ಗಿ ಹೋಗುತ್ತಾರೆ ಎಂದು ಹೇಳಿದರು.

200 ಮಂದಿ ಮಹಿಳಾ ಖೈದಿಗಳು ಜೈಲಿನಲ್ಲಿದ್ದಾರೆ. ಇಂದು ಆರು ಮಂದಿ ರಿಲೀಸ್ ಆಗಿದ್ದಾರೆ. ಮಹಿಳಾ ಕೈದಿಗಳ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಮಹಿಳಾ ಕೈದಿಗಳಿಗೆ ನೀಡುವ ಊಟವನ್ನು ಸ್ವತಃ ಸೇವಿಸಿ ಪರಿಶೀಲನೆ ಮಾಡಿದ್ದೇನೆ. ತರಕಾರಿ ದಿನಸಿ ಸ್ಟೋರ್ ರೂಮ್ ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಲಾಗಿದೆ ಎಂದು ಹೇಳಿದರು.

ಮುಂದುವರೆದು ಮಾತನಾಡಿರುವ ಅವರು, ಎಷ್ಟೋ ಮಂದಿಗೆ ಬೇಲ್ ಆಗಿದೆ ಶ್ಯೂರಿಟಿ ಇಲ್ಲ. ಪ್ರಕರಣಗಳಲ್ಲಿ ಖುಲಾಸೆಯಾಗಿದ್ದಾರೆ. ಆದರೆ ಹಣ ಕಟ್ಟಲಾಗದೆ ಜೈಲಿನಲ್ಲಿದ್ದಾರೆ. ನೈಜೀರಿಯಾ, ಸೌತ್ ಆಫ್ರಿಕಾ ಸೇರಿದಂತೆ ಹತ್ತು ಮಂದಿ ಪುಟ್ಟ ಮಕ್ಕಳಿದ್ದಾರೆ. ಅಂಗನವಾಡಿಯಲ್ಲಿ ನಾಲ್ಕು ಮಂದಿ ಟೀಚರ್ಸ್ ಇದ್ದಾರೆ. ಮಕ್ಕಳು ಕನ್ನಡ, ಇಂಗ್ಲಿಷ್ ಭಾಷೆ ಮಾತನಾಡುವುದನ್ನು ಕಂಡರೆ ಖುಷಿಯಾಗುತ್ತದೆ. ಜೈಲು ಭೇಟಿ ಒಂದು ಭಾವನಾತ್ಮಕ ಕ್ಷಣ. ಟೈಮ್‌ ಪಾಸ್​ಗಾಗಿ ಮಾಡುವ ಕರಕುಶಲ ವಸ್ತುಗಳು ಅದ್ಭುತ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

ಕ್ಷಿಪಣಿ ದಾಳಿ ಆರೋಪ: Iranಗೆ UAE ಶಾಕ್, ಎಲ್ಲಾ ವ್ಯಾಪಾರ-ವಾಣಿಜ್ಯ ವಹಿವಾಟು ಸಂಪೂರ್ಣ ಸ್ಥಗಿತ..!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್'ಗೆ VIP ಟ್ರೀಟ್‌ಮೆಂಟ್?: ಕಾನೂನಿನ ಮುಂದೆ ಎಲ್ಲರೂ ಒಂದೇ, ಜೈಲಿನಲ್ಲಿ ಯಾರಿಗೂ ವಿಶೇಷ ಸೌಲಭ್ಯವಿಲ್ಲ; ಸರ್ಕಾರ ಸ್ಪಷ್ಟನೆ