ಪೋಸ್ಟರ್ 
ರಾಜ್ಯ

ಎಲ್ಲರಿಗೂ ಕಾನೂನು ಒಂದೇ: ಅನುಮತಿ ಇಲ್ಲದೆ ತಮ್ಮ ಪೋಸ್ಟರ್‌ ಅಂಟಿಸಿದ್ದಕ್ಕೆ ಮೂರು FIR ದಾಖಲು!

ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರ ಅನಧಿಕೃತ ಪೋಸ್ಟರ್‌ಗಳನ್ನು ಸಾರ್ವಜನಿಕ ಗೋಡೆಗಳ ಮೇಲೆ ಅಂಟಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು ಅದಕ್ಕೆ ಸಚಿವರು ನೀಡಿರುವ ಸಕಾರಾತ್ಮಕ ಸ್ಪಂದನೆ ಸದ್ಯ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರ ಅನಧಿಕೃತ ಪೋಸ್ಟರ್‌ಗಳನ್ನು ಸಾರ್ವಜನಿಕ ಗೋಡೆಗಳ ಮೇಲೆ ಅಂಟಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು ಅದಕ್ಕೆ ಸಚಿವರು ನೀಡಿರುವ ಸಕಾರಾತ್ಮಕ ಸ್ಪಂದನೆ ಸದ್ಯ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಆಗಸ್ಟ್ 19ರಂದು ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡುವ ಉದ್ದೇಶದಿಂದ ಪೋಸ್ಟರ್‌ಗಳನ್ನು ಅಂಟಿಸಿದ್ದಕ್ಕೆ ಅಧಿಕಾರಿಗಳು ದೂರು ನೀಡಿದ್ದರು. ಅಧಿಕೃತ ಅನುಮತಿ ಪಡೆಯದೆ ಸಾರ್ವಜನಿಕ ರಸ್ತೆಗಳ ಉದ್ದಕ್ಕೂ ಗೋಡೆಗಳ ಮೇಲೆ ಪೋಸ್ಟರ್‌ಗಳನ್ನು ಅಂಟಿಸಿದ ಆರೋಪದ ಮೇಲೆ ವಿದ್ಯಾರಣ್ಯಪುರ ಮತ್ತು ಕೊಡಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಫ್‌ಐಆರ್‌ಗಳು ದಾಖಲಾಗಿವೆ.

ಜಿಬಿಎ ಅಧಿಕಾರಿಗಳು ಕರ್ನಾಟಕ ತೆರೆದ ಸ್ಥಳಗಳ (ವಿಕಾರ ತಡೆಗಟ್ಟುವಿಕೆ) ಕಾಯಿದೆ, 1981ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ನನ್ನ ಪೋಸ್ಟರ್‌ಗಳನ್ನು ಗೋಡೆಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಅಂಟಿಸಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಜಿಬಿಎ ಅಧಿಕಾರಿಗಳ ಪೂರ್ವಾನುಮತಿಯಿಲ್ಲದೆ ಸಾರ್ವಜನಿಕ ಗೋಡೆಗಳ ಮೇಲೆ ಪೋಸ್ಟರ್‌ಗಳನ್ನು ಹಾಕಲಾಗಿದೆ. ಇದು ನಗರದ "ಸೌಂದರ್ಯ" ನೋಟವನ್ನು ಪರಿಣಾಮ ಬೀರುತ್ತದೆ. ನಾಗರಿಕ ಸಿಬ್ಬಂದಿ ಅವುಗಳನ್ನು ತೆಗೆದುಹಾಕಬೇಕಾಗುತ್ತದೆ ಎಂದು ದೂರುದಾರರು ಹೇಳಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Southern Zonal Council meet: ಜಲ ವಿವಾದಗಳ ಕುರಿತು ಮಾತುಕತೆಗೆ ಅಮಿತ್ ಶಾ ಕರೆಗೆ ರಾಜ್ಯಗಳ ಬೆಂಬಲ

'ಬಾಹುಬಲಿ'ಗೆ ಏನಾಯಿತು?: ಪ್ರಭಾಸ್ ಆರೋಗ್ಯದ ಬಗ್ಗೆ ಅಭಿಮಾನಿಗಳಲ್ಲಿ ತೀವ್ರ ಆತಂಕ!

ಕೇಂದ್ರದಿಂದ ಮಹತ್ವದ ನಿರ್ಧಾರ: ಲಡಾಖ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಪೀಠ ಸ್ಥಾಪನೆ

J&K ಭಾರತದ ಅವಿಭಾಜ್ಯ ಅಂಗ: ಅಮೆರಿಕ ರಾಯಭಾರಿಗೆ ಪಾಕ್ ಸಮನ್ಸ್; ಅದು ಅವರ ವಿಷಯ- ಸಿಎಂ ಒಮರ್ ಅಬ್ದುಲ್ಲಾ

ತಂದೆ ಮನೆಗೆ ಹೋಗೋದಿದ್ರೆ ಕದ್ದುಮುಚ್ಚಿ ಹೋಗ್ಬೇಕಿತ್ತ?: ಮೇಘ ನಾಯರ್ ಮೊದಲ ಪ್ರತಿಕ್ರಿಯೆ ಬೆನ್ನಲ್ಲೇ ನೆಟ್ಟಿಗರ ಪ್ರಶ್ನೆ