ರಾಯಚೂರು: ರಾಯಚೂರು ಜಿಲ್ಲೆಯ ಸಿರ್ವಾರ್ ತಾಲ್ಲೂಕಿನ ಹೊಕ್ರಾನಿ ಗ್ರಾಮದ ಬಾವಿಯಲ್ಲಿ ಗುರುವಾರ ದಲಿತ ಯುವತಿಯ ಶವ ಪತ್ತೆಯಾಗಿದ್ದು, ಆಕೆಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಮೃತ ಯುವತಿಯನ್ನು ಹೊಕ್ರಾನಿ ಗ್ರಾಮದ ಅಶ್ವಿನಿ ತಿಮ್ಮಾರೆಡ್ಡಿ(22) ಎಂದು ಗುರುತಿಸಲಾಗಿದ್ದು, ಆಕೆ ಇತ್ತೀಚೆಗೆ ಪದವಿ ಮುಗಿಸಿದ್ದಳು.
ಬುಧವಾರ ಸಂಜೆ ಬಯಲು ಶೌಚಕ್ಕೆ ಹೋಗಿದ್ದ ಯುವತಿ ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ, ನಂತರ ಕುಟುಂಬಸ್ಥರು ಆಕೆಯನ್ನು ಹುಡುಕಾಡಿದರೂ ಸಿಕ್ಕಿರಲಿಲ್ಲ. ಆದರೆ ಇಂದು ಬೆಳಗ್ಗೆ ಆಕೆಯ ಶವ ಬಾವಿಯಲ್ಲಿ ಪತ್ತೆಯಾಗಿದೆ.
ದುಷ್ಕರ್ಮಿಗಳು ಯುವತಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ, ಬಳಿಕ ಶವವನ್ನು ಬಾವಿಗೆ ಎಸೆದಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಆರಂಭಿಸಿದ್ದಾರೆ.
ಈ ಸಂಬಂಧ ಸಿರ್ವಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.