ಸಂಗ್ರಹ ಚಿತ್ರ 
ರಾಜ್ಯ

11 ವಿದೇಶಿಯರ ಬಳಿ ಕರ್ನಾಟಕದ Voter ID: ಚುನಾವಣಾ ಆಯೋಗದಿಂದ ತನಿಖೆ ಆರಂಭ

ಕರ್ನಾಟಕದಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಈ 11 ಮಂದಿಯ ಮತದಾನದ ವಿವರಗಳನ್ನು ಪರಿಶೀಲಿಸುವಂತೆ ಮನವಿ ಮಾಡಲಾಗಿದೆ.

ಬೆಂಗಳೂರು: ಕರ್ನಾಟಕದ ಮತದಾರರ ಗುರುತಿನ ಚೀಟಿಗಳು ಮತ್ತು ಮತದಾನದ ಹಕ್ಕುಗಳನ್ನು ಹೊಂದಿರುವುದು ಕಂಡುಬಂದ 11 ವಿದೇಶಿ ಪ್ರಜೆಗಳ ವಿವರಗಳನ್ನು ಕೋರಿ ವಿದೇಶಿಯರ ನೋಂದಣಿ ಕಚೇರಿ (FRO) ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ (CEO) ಕಚೇರಿಯನ್ನು ಸಂಪರ್ಕಿಸಿದೆ.

ಈ 11 ವಿದೇಶಿ ಪ್ರಜೆಗಳನ್ನು ತಮಿಳುನಾಡಿನಲ್ಲಿ ಪತ್ತೆಹಚ್ಚಲಾಗಿದ್ದು, ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳೂ ಇವೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಮೂಲಗಳು ತಿಳಿಸಿವೆ.

ಇವರು ಶ್ರೀಲಂಕಾ ಮೂಲದವರು ಎಂದು ಹೇಳಲಾಗುತ್ತಿದೆಯಾದರೂ, ಅವರ ಕುರಿತು ಸಂಪೂರ್ಣ ಮಾಹಿತಿ ಇನ್ನೂ ಲಭ್ಯವಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಈ 11 ಮಂದಿಯ ಮತದಾನದ ವಿವರಗಳನ್ನು ಪರಿಶೀಲಿಸುವಂತೆ ಮನವಿ ಮಾಡಲಾಗಿದೆ.

ಅವರ ಬಳಿ ಇರುವ ಮತದಾರರ ಗುರುತಿನ ಚೀಟಿಗಳು ನಕಲಿಯೋ ಅಥವಾ ಅಸಲಿಯೋ, ಅವುಗಳನ್ನು ಎಂದಾದರೂ ಮತದಾನಕ್ಕೆ ಬಳಸಲಾಗಿದೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ.

ಅಲ್ಲದೆ, ಯಾವುದೇ ಮತದಾರರ ವಿವರಗಳು ಹೊಂದಾಣಿಕೆಯಾಗದ ಪ್ರಕರಣಗಳಲ್ಲೂ ಇತರ ಮತದಾರರ ಮಾಹಿತಿಯನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇತರ ರಾಜ್ಯಗಳಿಂದಲೂ ಕರ್ನಾಟಕ CEO ಕಚೇರಿಗೆ ಮಾಹಿತಿ

ಇದಲ್ಲದೆ, ಗೋವಾ, ಅಂಡಮಾನ್ ಮತ್ತು ಒಡಿಶಾ ಸೇರಿದಂತೆ ಇತರ ರಾಜ್ಯಗಳ ಅಧಿಕಾರಿಗಳೂ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯನ್ನು ಸಂಪರ್ಕಿಸಿದ್ದಾರೆ.

ತಮ್ಮ ರಾಜ್ಯಗಳ SIR ಅರ್ಜಿಗಳಲ್ಲಿ ಕರ್ನಾಟಕದ ವಿವರಗಳನ್ನು ನಮೂದಿಸಿರುವ ಮತದಾರರ ಮಾಹಿತಿ ಮತ್ತು ದಾಖಲೆಗಳನ್ನು ಪರಿಶೀಲಿಸುವಂತೆ ಅವರು ಮನವಿ ಮಾಡಿದ್ದಾರೆ.

ಕೆಲವು ಪ್ರಕರಣಗಳಲ್ಲಿ ಮತದಾರರ ವಿವರಗಳಲ್ಲಿನ ಅಸಂಗತತೆ ಪರಿಶೀಲಿಸುವ ವೇಳೆ ಪಾಸ್‌ಪೋರ್ಟ್‌ಗಳನ್ನೂ ಕೇಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪಾಸ್‌ಪೋರ್ಟ್‌ ಮಾಹಿತಿಯನ್ನು ಸಂಬಂಧಿತ ಅಧಿಕಾರಿಗಳೊಂದಿಗೆ ಹಂಚಿಕೊಂಡು ಪರಿಶೀಲಿಸಲಾಗುತ್ತಿದೆ. ಅಗತ್ಯವಿದ್ದಲ್ಲಿ ಸಂಬಂಧಪಟ್ಟ ಕೇಂದ್ರ ಸಚಿವಾಲಯಗಳಿಗೂ ದಾಖಲೆಗಳನ್ನು ಕಳುಹಿಸಿ ದೃಢೀಕರಿಸಲಾಗುತ್ತಿದೆ.

‘ನೋ ಮ್ಯಾಪಿಂಗ್’ ವಿಭಾಗದಲ್ಲಿ ಹಂಚಿಕೊಳ್ಳಲಾಗುವ ಎಲ್ಲಾ ದಾಖಲೆಗಳನ್ನು ಮತದಾರರ ನೋಂದಣಿ ಅಧಿಕಾರಿ (ERO) ಮತ್ತು ಜಿಲ್ಲಾ ಚುನಾವಣಾಧಿಕಾರಿ (DEO) ಅವರು ಎರಡು ಹಂತಗಳಲ್ಲಿ ಪರಿಶೀಲಿಸಲಿದ್ದಾರೆ.

ಮತದಾರರ ಪೌರತ್ವವನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಈ ಪರಿಶೀಲನೆ ನಡೆಯಲಿದೆ ಎಂದು ಮೂಲಗಳು ತಿಳಿಸಿದ್ದಾರೆ.

ಕರ್ನಾಟಕದಲ್ಲಿ SIR ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಇದೇ ರೀತಿಯ ಅನುಮಾನಾಸ್ಪದ ದಾಖಲೆಗಳನ್ನು ಪತ್ತೆಹಚ್ಚಲು ಸಂಪೂರ್ಣ ದತ್ತಾಂಶವನ್ನು ಮತ್ತೊಮ್ಮೆ ಪರಿಶೀಲಿಸಲಾಗುವುದು. ಇದರ ಮೂಲಕ ಮತದಾರರ ಪಟ್ಟಿಯನ್ನು ಮತ್ತಷ್ಟು ಶುದ್ಧೀಕರಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Yemen, Somalia ಕರಾವಳಿಯಲ್ಲಿ ಕಡಲ್ಗಳ್ಳರ ಅಟ್ಟಹಾಸ: 22 ಮಂದಿ ಭಾರತೀಯರಿದ್ದ 2 ಹಡಗುಗಳ ಅಪಹರಣ..!

ಭಾರತ-ಚೀನಾ ಗಡಿ ಉದ್ವಿಗ್ನತೆ ನಡುವೆ ಅಮೆರಿಕ ರಾಯಭಾರಿ ಲಡಾಖ್ ಭೇಟಿ; ಬೀಜಿಂಗ್ ಗೆ ಪ್ರಬಲ ಸಂದೇಶ

'Pak ಜೊತೆ ಯುದ್ಧ ಮಾಡಿದ್ದರೂ...' ಭಾರತದ ಅಸಲಿ ಕಾಂಪಿಟೇಟರ್ China; ಮಾಜಿ ಸೇನಾ ಮುಖ್ಯಸ್ಥ ಜನರಲ್ ನರವಾಣೆ..!

ಹಿಸಾರ್ ಜಿಲ್ಲಾ ನ್ಯಾಯಾಲಯದ ಹೊರಗೆ ಗ್ಯಾಂಗ್‌ಸ್ಟರ್ ವಿನೋದ್ ಪನ್ನುಗೆ ಗುಂಡಿಕ್ಕಿ ಹತ್ಯೆ

Southern Zonal Council meet: ಜಲ ವಿವಾದಗಳ ಕುರಿತು ಮಾತುಕತೆಗೆ ಅಮಿತ್ ಶಾ ಕರೆಗೆ ರಾಜ್ಯಗಳ ಬೆಂಬಲ