ಸಾಂದರ್ಭಿಕ ಚಿತ್ರ  
ರಾಜ್ಯ

ದೊಡ್ಡಬಳ್ಳಾಪುರದ ಮಾಜಿ ಸಹಾಯಕ ಆಯುಕ್ತೆಯಿಂದ ಅಕ್ರಮ: ದಾಖಲೆ ತಿರುಚಿ 62 ಎಕರೆ ಜಮೀನು ವರ್ಗಾವಣೆ

ಅಕ್ರಮಗಳ ಕುರಿತು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಪ್ರಾಥಮಿಕ ತನಿಖಾ ವರದಿಯಲ್ಲಿ ಈ ಅಂಶ ಬಹಿರಂಗವಾಗಿದೆ.

ಬೆಂಗಳೂರು: ದೊಡ್ಡಬಳ್ಳಾಪುರ ಉಪವಿಭಾಗದ ಮಾಜಿ ಸಹಾಯಕ ಆಯುಕ್ತೆ (Assistant Comissioner) ದುರ್ಗಾಶ್ರೀ ಎನ್. ಮೂರು ವಿವಿಧಮೂರು ಗ್ರಾಮಗಳಲ್ಲಿ ಒಟ್ಟು 62 ಎಕರೆ 20 ಗುಂಟೆ ಖಾಸಗಿ ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ತಿರುಚಿ, ಆ ಜಮೀನುಗಳನ್ನು ಖಾಸಗಿ ವ್ಯಕ್ತಿಗಳಿಗೆ ವರ್ಗಾಯಿಸಲು ಅನುಕೂಲ ಮಾಡಿಕೊಟ್ಟಿರುವುದು ಲೋಕಾಯುಕ್ತ ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ.

ಅಕ್ರಮಗಳ ಕುರಿತು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಪ್ರಾಥಮಿಕ ತನಿಖಾ ವರದಿಯಲ್ಲಿ ಈ ಅಂಶ ಬಹಿರಂಗವಾಗಿದೆ.

ಹೈಕೋರ್ಟ್, ಕರ್ನಾಟಕ ಮೇಲ್ಮನವಿ ನ್ಯಾಯಮಂಡಳಿ ಹಾಗೂ ಕಂದಾಯ ಮೇಲ್ಮನವಿ ನ್ಯಾಯಾಲಯಗಳಲ್ಲಿನ ಪ್ರಕರಣಗಳ ಸಂಖ್ಯೆಯನ್ನು ವಂಚನೆಯಿಂದ ಉಲ್ಲೇಖಿಸಿ ನಕಲಿ ಆದೇಶಗಳನ್ನು ಸೃಷ್ಟಿಸಿದ ಆರೋಪ ದುರ್ಗಾಶ್ರೀ ಅವರ ಮೇಲಿದೆ. ವಾಸ್ತವದಲ್ಲಿ ಈ ಪ್ರಕರಣಗಳು ಸಂಬಂಧಿತ ಜಮೀನಿನ ನೈಜ ಸರ್ವೆ ನಂಬರ್‌ಗಳಿಗೆ ಯಾವುದೇ ಸಂಬಂಧ ಹೊಂದಿರಲಿಲ್ಲ. ಡಿಜಿಟಲೀಕೃತ ಸಾರ್ವಜನಿಕ ದಾಖಲೆಗಳನ್ನು ತಿರುಚಿ ಹಾಗೂ ನಕಲು ಮಾಡಿ ಈ ಕೃತ್ಯ ಎಸಗಲಾಗಿದೆ ಎಂದು ತಿಳಿಸಲಾಗಿದೆ.

ವರ್ಗಾಯಿಸಲಾದ ಜಮೀನಿನ ಸಬ್‌ರಿಜಿಸ್ಟ್ರಾರ್ ಮೌಲ್ಯ 103.68 ಕೋಟಿ ರೂಪಾಯಿ ಇದ್ದು, ಪ್ರಸ್ತುತ ಮಾರುಕಟ್ಟೆ ಮೌಲ್ಯ ಸುಮಾರು 500 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.

ತನಿಖಾ ವರದಿಯನ್ನು ಉಲ್ಲೇಖಿಸಿದ ಉಪಲೋಕಾಯುಕ್ತರು, ತಮ್ಮ ಕಚೇರಿಯ ಅಧಿಕಾರಿಗಳೊಂದಿಗೆ ಶಾಮೀಲಾಗಿ ದುರ್ಗಾಶ್ರೀ ಅಕ್ರಮವಾಗಿ ಖಾತೆ ವರ್ಗಾವಣೆ ಮಾಡಲು ಪ್ರಯತ್ನಿಸಿರುವುದು ಕಂಡುಬಂದಿದೆ ಎಂದು ಹೇಳಿದರು. ಸಾರ್ವಜನಿಕ ದಾಖಲೆಗಳ ನಿರ್ವಹಣೆಯಲ್ಲಿ ಪಾರದರ್ಶಕತೆ ಇದೆ ಎಂಬ ಜನರ ನಂಬಿಕೆಗೆ ಧಕ್ಕೆ ತರುವ ಮೂಲಕ ಅವರು ಸಾರ್ವಜನಿಕರಿಗೆ ವಂಚನೆ ಎಸಗಿದ್ದಾರೆ ಎಂದು ಉಪಲೋಕಾಯುಕ್ತರು ಹೇಳಿದರು.

ಖಾತೆ ಮ್ಯೂಟೇಶನ್‌ಗಾಗಿ ನಕಲಿ ಆದೇಶಗಳನ್ನು ಅಪ್‌ಲೋಡ್ ಮಾಡಲು ಎಸಿ ತಮ್ಮ ಡಿಜಿಟಲ್ ಸಹಿಯನ್ನು ಬಳಸಿದ್ದರು ಎಂದು ನ್ಯಾಯಮೂರ್ತಿ ವೀರಪ್ಪ ತಿಳಿಸಿದ್ದಾರೆ. ತಮ್ಮ ವರ್ಗಾವಣೆಯಾದ ದಿನವೇ ತಮ್ಮ ಹೆಸರಿನಲ್ಲಿ ನಕಲಿ ಆದೇಶಗಳನ್ನು ಸಿದ್ಧಪಡಿಸಲಾಗಿದೆ ಎಂದು ದುರ್ಗಾಶ್ರೀ ದೂರು ದಾಖಲಿಸಿದ್ದರು. ಆದರೆ, ತಮ್ಮ ಅಧಿಕೃತ ಲಾಗಿನ್ ಬಳಸಿ ಭೂಮಿ ಸಾಫ್ಟ್‌ವೇರ್‌ನಲ್ಲಿ ನಕಲಿ ಆದೇಶಗಳನ್ನು ಅಪ್‌ಲೋಡ್ ಮಾಡಿರುವ ಕುರಿತು ಅವರು ಯಾವುದೇ ಮಾಹಿತಿ ನೀಡಲಿಲ್ಲ ಎಂದು ಹೇಳಿದ್ದಾರೆ.

ದುರ್ಗಾಶ್ರೀ ಅವರ ಕ್ರಮಗಳು ರಾಜ್ಯ ಸರ್ಕಾರ ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸುವ ಉದ್ದೇಶವನ್ನೇ ವಿಫಲಗೊಳಿಸಿವೆ ಎಂದು ಉಪಲೋಕಾಯುಕ್ತರು ಹೇಳಿದ್ದಾರೆ.

ಎಸಿ ಮತ್ತು ಅವರ ಕಚೇರಿಯ ಇತರ ಅಧಿಕಾರಿಗಳ ನಡೆ ಆಘಾತ ಉಂಟುಮಾಡುವಂತಿದೆ. ಹೀಗಾಗಿ, ಸರ್ಕಾರಿ ಜಮೀನನ್ನು ರಕ್ಷಿಸಲು ಈ ಪ್ರಾಧಿಕಾರ ಹಾಗೂ ಕಾನೂನು ಜಾರಿ ಸಂಸ್ಥೆಗಳು ತುರ್ತು ಕ್ರಮ ಕೈಗೊಳ್ಳುವ ಸಮಯ ಬಂದಿದೆ. ಇಲ್ಲದಿದ್ದರೆ, ಡಿಜಿಟಲೀಕೃತ ಸಾರ್ವಜನಿಕ ದಾಖಲೆಗಳ ನಿರ್ವಹಣೆಯ ಪಾರದರ್ಶಕತೆಯ ಬಗ್ಗೆ ಜನಸಾಮಾನ್ಯರು ಅನುಮಾನಪಡುವಂತಾಗಿ ಇಡೀ ಆಡಳಿತ ವ್ಯವಸ್ಥೆಯೇ ಕುಸಿಯಬಹುದು ಎಂದು ನ್ಯಾಯಮೂರ್ತಿ ವೀರಪ್ಪ ಅಭಿಪ್ರಾಯಪಟ್ಟಿದ್ದಾರೆ.

ದುರ್ಗಾಶ್ರೀ ಹಾಗೂ ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಅಧಿಕಾರಿಗಳಿಗೆ ನೊಟೀಸ್ ಜಾರಿ ಮಾಡಲು ಇದು ಸೂಕ್ತ ಪ್ರಕರಣವಾಗಿದೆ ಎಂದು ಹೇಳಿದ ಅವರು, ಆದೇಶದಲ್ಲಿ ಉಲ್ಲೇಖಿಸಿರುವ ವಿಷಯಗಳಿಗೆ ಸಂಬಂಧಿಸಿದ ದಾಖಲೆಗಳೊಂದಿಗೆ ಸೆಪ್ಟೆಂಬರ್ 22ರಂದು ಖುದ್ದಾಗಿ ಹಾಜರಾಗುವಂತೆ ಅವರಿಗೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಶೀಘ್ರದಲ್ಲೇ ಕರ್ನಾಟಕದ 43 ಲಕ್ಷಕ್ಕೂ ಹೆಚ್ಚು ಮತದಾರರಿಗೆ ಚುನಾವಣಾ ಆಯೋಗದ ನೋಟಿಸ್! ಯಾರಿಗೆಲ್ಲ ಬರಲಿದೆ ನೋಟಿಸ್ ?

Yemen, Somalia ಕರಾವಳಿಯಲ್ಲಿ ಕಡಲ್ಗಳ್ಳರ ಅಟ್ಟಹಾಸ: 22 ಮಂದಿ ಭಾರತೀಯರಿದ್ದ 2 ಹಡಗುಗಳ ಅಪಹರಣ..!

ಭಾರತ-ಚೀನಾ ಗಡಿ ಉದ್ವಿಗ್ನತೆ ನಡುವೆ ಅಮೆರಿಕ ರಾಯಭಾರಿ ಲಡಾಖ್ ಭೇಟಿ; ಬೀಜಿಂಗ್ ಗೆ ಪ್ರಬಲ ಸಂದೇಶ

'Pak ಜೊತೆ ಯುದ್ಧ ಮಾಡಿದ್ದರೂ...' ಭಾರತದ ಅಸಲಿ ಕಾಂಪಿಟೇಟರ್ China; ಮಾಜಿ ಸೇನಾ ಮುಖ್ಯಸ್ಥ ಜನರಲ್ ನರವಾಣೆ..!

ಹಿಸಾರ್ ಜಿಲ್ಲಾ ನ್ಯಾಯಾಲಯದ ಹೊರಗೆ ಗ್ಯಾಂಗ್‌ಸ್ಟರ್ ವಿನೋದ್ ಪನ್ನುಗೆ ಗುಂಡಿಕ್ಕಿ ಹತ್ಯೆ