ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ, ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ, ಕುಣಿಗಲ್ ಶಾಸಕ ಎಚ್.ಡಿ. ರಂಗನಾಥ್ ಸೇರಿದಂತೆ ಇತರರು ಪ್ರತಿಭಟನೆ ನಡೆಸಿದರು. 
ರಾಜ್ಯ

ಪ್ರತಿಭಟನೆ, ಗದ್ದಲ ನಡುವೆಯೇ ಮೂರು ಪ್ರಮುಖ ಮಸೂದೆಗಳಿಗೆ ವಿಧಾನಸಭೆ ಅನುಮೋದನೆ: ಅವು ಯಾವುವು?

ಅನುಮೋದನೆಗೊಂಡ ಮಸೂದೆಗಳಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ಮಸೂದೆ, 2026; ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ಮಸೂದೆ, 2026 ಹಾಗೂ ನಾಡಪ್ರಭು ಕೆಂಪೇಗೌಡ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ಮಸೂದೆ, 2026 ಸೇರಿವೆ.

ಬೆಂಗಳೂರು: ಪರಿಶಿಷ್ಟ ಪಂಗಡಗಳ ನಿಗಮದ (ST corporation) ಹಗರಣಕ್ಕೆ ಸಂಬಂಧಿಸಿದಂತೆ ಯೋಜನೆ ಮತ್ತು ಸಾಂಖ್ಯಿಕ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದ ನಡುವೆ, ವಿಧಾನಸಭೆಯು ನಿನ್ನೆ ಗುರುವಾರ ಮೂರು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಿತು.

ಅನುಮೋದನೆಗೊಂಡ ಮಸೂದೆಗಳಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ಮಸೂದೆ, 2026; ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ಮಸೂದೆ, 2026 ಹಾಗೂ ನಾಡಪ್ರಭು ಕೆಂಪೇಗೌಡ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ಮಸೂದೆ, 2026 ಸೇರಿವೆ.

ಬಿಡಿಎ (ತಿದ್ದುಪಡಿ) ಮಸೂದೆ
1976ರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕಾಯ್ದೆಗೆ ಹಲವು ಬದಲಾವಣೆಗಳನ್ನು ಪ್ರಸ್ತಾಪಿಸಲಾಗಿದೆ. ಬಿಡಿಎ ಆಯುಕ್ತರ ಆರ್ಥಿಕ ಅನುಮೋದನಾ ಅಧಿಕಾರವನ್ನು ಗಣನೀಯವಾಗಿ ಹೆಚ್ಚಿಸುವುದು ಹಾಗೂ ಬಿಡಿಎಗೆ ಸೇರಿದ ಜಮೀನಿನಲ್ಲಿ ಕೆಲವು ಅನಧಿಕೃತವಾಗಿ ವಾಸಿಸುತ್ತಿರುವವರನ್ನು ಸಕ್ರಮಗೊಳಿಸುವ ಶುಲ್ಕವನ್ನು ಕಡಿಮೆ ಮಾಡುವುದು ಪ್ರಮುಖ ಬದಲಾವಣೆಗಳಾಗಿವೆ.

ತಿದ್ದುಪಡಿಯಲ್ಲಿ ಅನಧಿಕೃತವಾಗಿ ವಾಸಿಸುತ್ತಿರುವವರಿಗೆ ಎರಡು ವರ್ಷಗಳ ಗಡುವನ್ನೂ ನಿಗದಿಪಡಿಸಲಾಗಿದೆ. ತಿದ್ದುಪಡಿ ಜಾರಿಗೆ ಬಂದ ಎರಡು ವರ್ಷಗಳೊಳಗೆ ಈ ನಿಯಮದಡಿ ನಿವೇಶನ ಮಂಜೂರು ಮಾಡಿಸಿಕೊಳ್ಳದಿದ್ದರೆ, ಅಂತಹವರನ್ನು ತೆರವುಗೊಳಿಸುವ ಅಧಿಕಾರ ಬಿಡಿಎಗೆ ಇರಲಿದೆ.

ಮಸೂದೆಯನ್ನು ಮಂಡಿಸಿದ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ, ಜನರಿಗೆ ಪರಿಹಾರ ಒದಗಿಸುವುದು ಹಾಗೂ ತಮ್ಮ ಆಸ್ತಿಗಳಿಗೆ ಶಾಶ್ವತ ದಾಖಲೆ ಮತ್ತು ಸಂಪೂರ್ಣ ಮಾಲೀಕತ್ವ ಹಕ್ಕು ಪಡೆಯಲು ಅನುಕೂಲ ಮಾಡಿಕೊಡುವುದು ಸರ್ಕಾರದ ಉದ್ದೇಶವಾಗಿದೆ ಎಂದು ಹೇಳಿದರು.

ಅನ್ವಯವಾಗುವ ದರಗಳು ಮತ್ತು ಶುಲ್ಕಗಳನ್ನು ಶೇ.50ರಷ್ಟು ಮತ್ತಷ್ಟು ಕಡಿಮೆ ಮಾಡಲು ಈ ತಿದ್ದುಪಡಿ ಮಹತ್ವದ್ದಾಗಿದೆ. ಬಿಡಿಎ ಸ್ವಾಧೀನಪಡಿಸಿಕೊಂಡಿರುವ ಜಮೀನಿನಲ್ಲಿ ಸುಮಾರು 1,11,560 ಅನಧಿಕೃತ ಮನೆಗಳು ನಿರ್ಮಾಣಗೊಂಡಿವೆ ಎಂದು ತಿಳಿಸಿದರು.

ಕಾಯ್ದೆಯ ಸೆಕ್ಷನ್ 10ಕ್ಕೆ ಪ್ರಸ್ತಾಪಿಸಿರುವ ತಿದ್ದುಪಡಿಯಡಿ, ಬಿಡಿಎ ಆಯುಕ್ತರ ಆರ್ಥಿಕ ಅನುಮೋದನಾ ಮಿತಿಯನ್ನು 50 ಲಕ್ಷದಿಂದ 5 ಕೋಟಿ ರೂಪಾಯಿಗೆ ಹೆಚ್ಚಿಸಲಾಗುವುದು. ಬಿಡಿಎ ಫ್ಲ್ಯಾಟ್‌ಗಳು, ವಿಲ್ಲಾಗಳು ಮತ್ತು ಬಡಾವಣೆಗಳ ದುರಸ್ತಿ ಹಾಗೂ ನಿರ್ವಹಣೆ ಸೇರಿದಂತೆ ತುರ್ತು ಕಾಮಗಾರಿಗಳಿಗೆ ಅನುಕೂಲವಾಗುವುದು ಮತ್ತು ಪ್ರಾಧಿಕಾರದ ಬಜೆಟ್ ಅನುದಾನಕ್ಕೆ ಅನುಗುಣವಾಗಿ ಇಂತಹ ಕಾಮಗಾರಿಗಳ ಅನುಷ್ಠಾನದಲ್ಲಿ ವಿಳಂಬವಾಗುವುದನ್ನು ತಪ್ಪಿಸುವುದು ಇದರ ಉದ್ದೇಶವಾಗಿದೆ ಎಂದು ಸರ್ಕಾರ ತಿಳಿಸಿದೆ.

ಬಿಡಿಎ ಜಮೀನಿನ ಅನಧಿಕೃತ ನಿವಾಸಿಗಳಿಗೆ ನಿವೇಶನ ಹಂಚಿಕೆ ಮಾಡುವ ಕುರಿತ ಸೆಕ್ಷನ್ 38ಡಿಯಲ್ಲೂ ಬದಲಾವಣೆಗಳನ್ನು ಮಸೂದೆ ಪ್ರಸ್ತಾಪಿಸಿದೆ. ಅರ್ಹ ನಿವಾಸಿಗಳು ಮುಂದೆ ಬಂದು ತಮ್ಮ ನಿವೇಶನಗಳ ಹಂಚಿಕೆ ಪಡೆಯಲು ಪ್ರೋತ್ಸಾಹಿಸುವ ಉದ್ದೇಶದಿಂದ ಹಂಚಿಕೆ ಶುಲ್ಕವನ್ನು ಗಣನೀಯವಾಗಿ ಕಡಿಮೆ ಮಾಡಲಾಗಿದೆ.

ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ಮಸೂದೆ
2005ರಿಂದ 2015ರ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ಕಾಯ್ದೆ ಜಾರಿಗೆ ಬರುವ ದಿನಾಂಕದವರೆಗೆ ಅನುಮೋದನೆ ಪಡೆದ ಬಡಾವಣೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸದಿದ್ದರೆ ದಂಡ ವಿಧಿಸಲು ಈ ಮಸೂದೆ ಪ್ರಸ್ತಾಪಿಸಿದೆ.

ಅನುಮೋದಿತ ಬಡಾವಣೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸದ ಹಿನ್ನೆಲೆಯಲ್ಲಿ, ನವೆಂಬರ್ 22, 2018ರಂದು ಹೊರಡಿಸಲಾದ ಅಧಿಸೂಚನೆಯ ಬಳಿಕ ಸರ್ಕಾರದ ನಿರ್ದೇಶನದಂತೆ ಯೋಜನಾ ಪ್ರಾಧಿಕಾರಗಳು ದಂಡ ವಿಧಿಸುತ್ತಿವೆ. ಈ ದಂಡವನ್ನು ಕಾನೂನುಬದ್ಧ ನಿಯಮಗಳ ವ್ಯಾಪ್ತಿಗೆ ತರುವುದು ಹಾಗೂ ಈಗಾಗಲೇ ವಿಧಿಸಿರುವ ಅಥವಾ ವಸೂಲಿ ಮಾಡಿರುವ ದಂಡವನ್ನು ಮಾನ್ಯಗೊಳಿಸುವುದು ಅಗತ್ಯ ಎಂದು ಸರ್ಕಾರ ತಿಳಿಸಿದೆ.

ನಾಡಪ್ರಭು ಕೆಂಪೇಗೌಡ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ಮಸೂದೆ:
ಪ್ರಾಧಿಕಾರದ ಅಡಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲು ಈ ಮಸೂದೆ ಪ್ರಸ್ತಾಪಿಸಲಾಗಿದೆ. ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಿರಲಿದ್ದು, ಉಪಮುಖ್ಯಮಂತ್ರಿ ಅಥವಾ ಕಂದಾಯ ಸಚಿವರು ಪದನಿಮಿತ್ತ ಉಪಾಧ್ಯಕ್ಷರಾಗಿರುತ್ತಾರೆ.

ಬೆಂಗಳೂರು ಅಭಿವೃದ್ಧಿ ಸಚಿವರು, ಬೆಂಗಳೂರು ದಕ್ಷಿಣ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರು ಪದನಿಮಿತ್ತ ಸದಸ್ಯರಾಗಿರುತ್ತಾರೆ.

ನಾಡಪ್ರಭು ಕೆಂಪೇಗೌಡರ ಇತಿಹಾಸ ಮತ್ತು ಪರಂಪರೆಯ ಕುರಿತು ಪರಿಣತಿ ಹೊಂದಿರುವ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಗಳ ಆರು ಮಂದಿ ಅನಧಿಕೃತೇತರ ಸದಸ್ಯರನ್ನು ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Yemen, Somalia ಕರಾವಳಿಯಲ್ಲಿ ಕಡಲ್ಗಳ್ಳರ ಅಟ್ಟಹಾಸ: 22 ಮಂದಿ ಭಾರತೀಯರಿದ್ದ 2 ಹಡಗುಗಳ ಅಪಹರಣ..!

ಭಾರತ-ಚೀನಾ ಗಡಿ ಉದ್ವಿಗ್ನತೆ ನಡುವೆ ಅಮೆರಿಕ ರಾಯಭಾರಿ ಲಡಾಖ್ ಭೇಟಿ; ಬೀಜಿಂಗ್ ಗೆ ಪ್ರಬಲ ಸಂದೇಶ

'Pak ಜೊತೆ ಯುದ್ಧ ಮಾಡಿದ್ದರೂ...' ಭಾರತದ ಅಸಲಿ ಕಾಂಪಿಟೇಟರ್ China; ಮಾಜಿ ಸೇನಾ ಮುಖ್ಯಸ್ಥ ಜನರಲ್ ನರವಾಣೆ..!

ಹಿಸಾರ್ ಜಿಲ್ಲಾ ನ್ಯಾಯಾಲಯದ ಹೊರಗೆ ಗ್ಯಾಂಗ್‌ಸ್ಟರ್ ವಿನೋದ್ ಪನ್ನುಗೆ ಗುಂಡಿಕ್ಕಿ ಹತ್ಯೆ

Southern Zonal Council meet: ಜಲ ವಿವಾದಗಳ ಕುರಿತು ಮಾತುಕತೆಗೆ ಅಮಿತ್ ಶಾ ಕರೆಗೆ ರಾಜ್ಯಗಳ ಬೆಂಬಲ