ಸೆರೆ ಹಿಡಿದ ಕಾಡಾನೆ 
ರಾಜ್ಯ

ಕೊಡಗಿನಲ್ಲಿ ಮತ್ತೊಂದು ಕಾಡಾನೆ ಸೆರೆ: ಅರಿವಳಿಕೆ ಮದ್ದು ನೀಡಿ ವಶಕ್ಕೆ ಪಡೆದ ಅರಣ್ಯ ಇಲಾಖೆ, ದುಬಾರೆ ಆನೆ ಶಿಬಿರಕ್ಕೆ ಶಿಫ್ಟ್..!

ಶಾರ್ಪ್‌ಶೂಟರ್ ರಂಜನ್ ಅವರು ಕಾಡಾನೆಗೆ ಅರಿವಳಿಕೆ ಮದ್ದು ನೀಡಿ ಪ್ರಜ್ಞೆ ತಪ್ಪಿಸಿದ ಬಳಿಕ ಅದನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಯಿತು.

ಮಡಿಕೇರಿ: ಕೊಡಗಿನಲ್ಲಿ ಮತ್ತೊಂದು ಪುಂಡಾನೆ ಅರಣ್ಯ ಇಲಾಖೆ ಬಲೆಗೆ ಬಿದ್ದಿದೆ. ಅಮ್ಮತ್ತಿ ವ್ಯಾಪ್ತಿಯ ಕಣ್ಣಂಗಾಲ–ಯದುವೂರು ಗ್ರಾಮಗಳ ಸುತ್ತಮುತ್ತ ಅರಣ್ಯ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 38 ವರ್ಷದ ಗಂಡು ಕಾಡಾನೆಯನ್ನು ಸೆರೆಹಿಡಿಯಲಾಗಿದೆ.

120ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ ಹಾಗೂ ಐದು ಸಾಕಾನೆಗಳ ನೆರವಿನೊಂದಿಗೆ ಸೆರೆ ಕಾರ್ಯಾಚರಣೆ ನಡೆಸಲಾಯಿತು.

ಶಾರ್ಪ್‌ಶೂಟರ್ ರಂಜನ್ ಅವರು ಕಾಡಾನೆಗೆ ಅರಿವಳಿಕೆ ಮದ್ದು ನೀಡಿ ಪ್ರಜ್ಞೆ ತಪ್ಪಿಸಿದ ಬಳಿಕ ಅದನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಯಿತು.

ಸೆರೆಹಿಡಿದ ಕಾಡಾನೆಯನ್ನು ಕುಶಾಲನಗರದ ದುಬಾರೆ ಆನೆ ಶಿಬಿರಕ್ಕೆ ಸ್ಥಳಾಂತರಿಸಲು ಅರಣ್ಯ ಇಲಾಖೆ ಸಿದ್ಧತೆ ನಡೆಸಿದೆ.

ಅಮ್ಮತ್ತಿ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿಯಿಂದ ಮಾನವ-ವನ್ಯಜೀವಿ ಸಂಘರ್ಷ ತೀವ್ರಗೊಂಡಿದ್ದು, ಈ ತಿಂಗಳು ನಿರಂತರವಾಗಿ ಮಾನವ ಸಾವುಗಳು ಸಂಭವಿಸಿದ ಹಿನ್ನೆಲೆಯಲ್ಲಿ ಮಾನವ ವಸತಿ ಪ್ರದೇಶಗಳಿಗೆ ಪದೇಪದೆ ನುಗ್ಗುತ್ತಿದ್ದ ಮೂರು ಗಂಡು ಕಾಡಾನೆಗಳನ್ನು ಸೆರೆಹಿಡಿಯಲು ರಾಜ್ಯ ಸರ್ಕಾರ ಅನುಮತಿ ನೀಡಿತ್ತು. ಇದರಂತೆ ಆಗಸ್ಟ್ 20 ರಂದು ಯಡೂರು ಗ್ರಾಮದಲ್ಲಿ ಎಸ್ಟೇಟ್ ಬಳಿ ಆನೆಯೊಂದನ್ನು ಸೆರೆ ಹಿಡಿಯಲಾಗಿತ್ತು. ಇದೀಗ ಮತ್ತೊಂದು ಆನೆಯನ್ನು ಅರಣ್ಯ ಇಲಾಖೆ ಸೆರೆಹಿಡಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'Economic D-Day' ಘೋಷಣೆ: Iran ವಿರುದ್ಧ ಅಮೆರಿಕಾ ಆರ್ಥಿಕ ದಿಗ್ಬಂಧನ ಅಸ್ತ್ರ; ಇದು ಆರ್ಥಿಕ ಭಯೋತ್ಪಾದನೆ-‘ಜಗತ್ತನ್ನು ವಸಾಹತು ಮಾಡುವ ಹುನ್ನಾರ’- ಇರಾನ್ ಆಕ್ರೋಶ

ಹಾರ್ಮುಜ್ ಜಲಸಂಧಿ ನಮ್ಮದೇ: ಟ್ರಂಪ್ ಸ್ಫೋಟಕ ಹೇಳಿಕೆ; ನಮ್ಮ ಭೂಪ್ರದೇಶಕ್ಕೆ ಕೈಹಾಕಿದರೆ ಸರ್ವನಾಶ ಗ್ಯಾರಂಟಿ- ಟೆಹ್ರಾನ್ ಖಡಕ್ ವಾರ್ನಿಂಗ್

Somalia ಕರಾವಳಿಯಲ್ಲಿ ಹಡಗುಗಳ ಹೈಜಾಕ್: ಕಡಲ್ಗಳ್ಳರ ವಶದಲ್ಲಿದ್ದ 22 ಮಂದಿ ಭಾರತೀಯರು ಸೇಫ್; ಕೇಂದ್ರ ಸರ್ಕಾರ

ಪ್ರಜ್ವಲ್ ರೇವಣ್ಣ ಪ್ರಕರಣದ ಸಾಕ್ಷಿಗೆ ಬೆದರಿಕೆ: ತನಿಖೆ ನಡೆಸಲು SIT ಗೆ ನ್ಯಾಯಾಲಯದ ಆದೇಶ!

ತೆಲಂಗಾಣ Hazelo Pharmaದಲ್ಲಿ ಭೀಕರ ಅಗ್ನಿ ಅವಘಡ; ಇಬ್ಬರ ದುರ್ಮರಣ, ಎಂಟು ಮಂದಿಗೆ ಗಂಭೀರ ಗಾಯ..!