ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ವಿವಾಹಿತ ಮಹಿಳೆಯ ಆತ್ಮಹತ್ಯೆ ಪ್ರಕರಣ: ಮಾಜಿ ಪ್ರಿಯಕರನ ಬಂಧನ!

ಆರೋಪಿಯನ್ನು ಕಿರಣ್ ಎಂದು ಗುರುತಿಸಲಾಗಿದೆ. ಮೃತ ಕವಿತಾ ಗೃಹಿಣಿಯಾಗಿದ್ದು, ಲಕ್ಷ್ಮೀಪುರಂ ನಿವಾಸಿಯಾಗಿದ್ದರು. ಇವರು 2024ರಲ್ಲಿ ರಾಜು ಎಂಬುವರನ್ನು ವಿವಾಹವಾಗಿದ್ದರು ಮತ್ತು ದಂಪತಿಗೆ ಒಂದೂವರೆ ವರ್ಷದ ಮಗುವಿದೆ.

ಬೆಂಗಳೂರು: ಆಗಸ್ಟ್ 6 ರಂದು ಆತ್ಮಹತ್ಯೆ ಮಾಡಿಕೊಂಡ 21 ವರ್ಷದ ವಿವಾಹಿತ ಮಹಿಳೆಗೆ ಕಿರುಕುಳ ನೀಡಿದ ಆರೋಪದ ಮೇಲೆ ಇಂದಿರಾನಗರ ಪೊಲೀಸರು ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ. ಮಾಜಿ ಪ್ರಿಯಕರ ಆಕೆಗೆ ತನ್ನೊಂದಿಗೆ ಸಂಪರ್ಕದಲ್ಲಿರುವಂತೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದಲ್ಲದೆ, ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮತ್ತು ಆಕೆಯ ಜೀವನವನ್ನು ಹಾಳುಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ಎಂಬುದು ಸಂತ್ರಸ್ತೆಯ ತನಿಖೆಯಿಂದ ತಿಳಿದುಬಂದಿದೆ.

ಇದೇ ಕಾರಣದಿಂದಾಗಿ ಆಕೆ ಈ ಕಠಿಣ ನಿರ್ಧಾರವನ್ನು ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆರೋಪಿಯನ್ನು ಕಿರಣ್ ಎಂದು ಗುರುತಿಸಲಾಗಿದೆ. ಮೃತ ಕವಿತಾ ಗೃಹಿಣಿಯಾಗಿದ್ದು, ಲಕ್ಷ್ಮೀಪುರಂ ನಿವಾಸಿಯಾಗಿದ್ದರು. ಇವರು 2024ರಲ್ಲಿ ರಾಜು ಎಂಬುವರನ್ನು ವಿವಾಹವಾಗಿದ್ದರು ಮತ್ತು ದಂಪತಿಗೆ ಒಂದೂವರೆ ವರ್ಷದ ಮಗುವಿದೆ.

ಪೊಲೀಸರ ಪ್ರಕಾರ, ಕಿರಣ್ ಮತ್ತು ಕವಿತಾ ದೂರದ ಸಂಬಂಧಿಕರಾಗಿದ್ದು, ಆಕೆಯ ಮದುವೆಗೆ ಮುನ್ನ ಮೂರು ವರ್ಷಗಳ ಕಾಲ ಪ್ರೇಮ ಸಂಬಂಧದಲ್ಲಿದ್ದರು. ತಾನೇನಾದರೂ ಮಾತುಕತೆ ನಿಲ್ಲಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕಿರಣ್ ಕವಿತಾಗೆ ಸಂದೇಶಗಳ ಮೂಲಕ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ.

ಅಲ್ಲದೆ, ಆಕೆಯ ಜೀವನವನ್ನು ಹಾಳುಮಾಡುವುದಾಗಿಯೂ ಆತ ಬೆದರಿಕೆ ಹಾಕಿದ್ದ. ಕವಿತಾಳ ಕುಟುಂಬದವರು ಕಿರಣ್‌ನಿಗೆ ಆಕೆಯಿಂದ ದೂರವಿರುವಂತೆ ಎಚ್ಚರಿಕೆ ನೀಡಿದ್ದರು. ಆದಾಗ್ಯೂ, ಆತ ಆಕೆಯನ್ನು ಸಂಪರ್ಕಿಸುವುದನ್ನು ಮತ್ತು ಕಿರುಕುಳ ನೀಡುವುದನ್ನು ಮುಂದುವರಿಸಿದ್ದ ಎಂದು ಆರೋಪಿಸಲಾಗಿದೆ.

ಈ ವಿಷಯ ಪತಿ ಮತ್ತು ಕುಟುಂಬದವರಿಗೆ ತಿಳಿದ ನಂತರ ಕವಿತಾ ತೀವ್ರ ಮಾನಸಿಕ ಸಂಕಷ್ಟಕ್ಕೆ ಒಳಗಾಗಿದ್ದರು ಎಂದು ಪೊಲೀಸರು ಶಂಕಿಸಿದ್ದಾರೆ. ಆಗಸ್ಟ್ 6 ರಂದು ಅವರು ತಮ್ಮ ಮನೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡರು.

ಈ ಘಟನೆಯ ನಂತರ, ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಕಿರಣ್‌ನನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'Economic D-Day' ಘೋಷಣೆ: Iran ವಿರುದ್ಧ ಅಮೆರಿಕಾ ಆರ್ಥಿಕ ದಿಗ್ಬಂಧನ ಅಸ್ತ್ರ; ಇದು ಆರ್ಥಿಕ ಭಯೋತ್ಪಾದನೆ-‘ಜಗತ್ತನ್ನು ವಸಾಹತು ಮಾಡುವ ಹುನ್ನಾರ’- ಇರಾನ್ ಆಕ್ರೋಶ

ಹಾರ್ಮುಜ್ ಜಲಸಂಧಿ ನಮ್ಮದೇ: ಟ್ರಂಪ್ ಸ್ಫೋಟಕ ಹೇಳಿಕೆ; ನಮ್ಮ ಭೂಪ್ರದೇಶಕ್ಕೆ ಕೈಹಾಕಿದರೆ ಸರ್ವನಾಶ ಗ್ಯಾರಂಟಿ- ಟೆಹ್ರಾನ್ ಖಡಕ್ ವಾರ್ನಿಂಗ್

Somalia ಕರಾವಳಿಯಲ್ಲಿ ಹಡಗುಗಳ ಹೈಜಾಕ್: ಕಡಲ್ಗಳ್ಳರ ವಶದಲ್ಲಿದ್ದ 22 ಮಂದಿ ಭಾರತೀಯರು ಸೇಫ್; ಕೇಂದ್ರ ಸರ್ಕಾರ

ಪ್ರಜ್ವಲ್ ರೇವಣ್ಣ ಪ್ರಕರಣದ ಸಾಕ್ಷಿಗೆ ಬೆದರಿಕೆ: ತನಿಖೆ ನಡೆಸಲು SIT ಗೆ ನ್ಯಾಯಾಲಯದ ಆದೇಶ!

ತೆಲಂಗಾಣ Hazelo Pharmaದಲ್ಲಿ ಭೀಕರ ಅಗ್ನಿ ಅವಘಡ; ಇಬ್ಬರ ದುರ್ಮರಣ, ಎಂಟು ಮಂದಿಗೆ ಗಂಭೀರ ಗಾಯ..!